ಪರಿಹಾರ ಹಿಂಪಡೆಯಲು ಸರ್ಕಾರ ನಿರ್ಧರಿಸಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಗೋಲಿಬಾರ್ ಪ್ರಕರಣದ ಕುರಿತು ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಯುತ್ತಿದೆ. ಸಿ.ಸಿ ಟಿವಿ ದೃಶ್ಯಗಳನ್ನು ಸಂಗ್ರಹಿಸಲಾಗುತ್ತಿದೆ. ವಿವಿಧ ಮೂಲಗಳಿಂದ ಮಾಹಿತಿ ಪಡೆಯಲಾಗುತ್ತಿದೆ. ಇನ್ನೂ ಪೂರ್ಣಪ್ರಮಾಣದ ಚಿತ್ರಣ ದೊರೆತಿಲ್ಲ. ಹೀಗಾಗಿ ಪರಿಹಾರ ಹಿಂಪಡೆಯುವ ಕುರಿತು ಸರ್ಕಾರ ಇನ್ನೂ ನಿರ್ಧರಿಸಿಲ್ಲ’ ಎಂದರು.