<p><strong>ಯಾದಗಿರಿ</strong>: ಕೋವಿಡ್ ಸೋಂಕಿತರಿಗಾಗಿ ಸುರಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಆಮ್ಲಜನಕ (ಆಕ್ಸಿಜನ್ ಪ್ಲಾಂಟ್) ಘಟಕ ಶೀಘ್ರ ಸ್ಥಾಪನೆ ಮಾಡುವಂತೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲೆಯ ಸುರಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಶುಕ್ರವಾರ ಆಮ್ಲಜನಕ ಘಟಕ ವೀಕ್ಷಿಸಿ ಮಾತನಾಡಿದ ಅವರು, ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸಿ ಒಂದು ನಿಮಿಷಕ್ಕೆ 110 ಲೀಟರ್ ಉತ್ಪಾದನೆ ಸಾಮಾರ್ಥ್ಯದ ಈ ಆಮ್ಲಜನಕ ಪ್ಲಾಂಟ್ ಅನ್ನು ಕೋವಿಡ್ ಸೋಂಕಿತರ ಸೇವೆಗೆ ಅಣಿಗೊಳಿಸಬೇಕು ಎಂದು ತಾಂತ್ರಿಕ ವರ್ಗದವರಿಗೆ ನಿರ್ದೇಶನ ನೀಡಿದರು.<br /><br />ಇದೇವೇಳೆಆಸ್ಪತ್ರೆ ವೀಕ್ಷಿಸಿದ ಜಿಲ್ಲಾಧಿಕಾರಿ, ಸ್ವಚ್ಛತೆ ಕಾಪಾಡಿಕೊಳ್ಳಬೇಕೆಂದು ಆಸ್ಪತ್ರೆ ಸಿಬ್ಬಂದಿಗೆ ಸೂಚಿಸಿದರು.</p>.<p>ರಾಜ್ಯ ವಿಪತ್ತು ಪರಿಹಾರ ನಿಧಿಯಡಿ ಆಸ್ಪತ್ರೆಗೆ ಬೇಕಾದ ವೈದ್ಯಕೀಯ ಪರಿಕರಗಳನ್ನು ಖರೀದಿಸುವಂತೆ ಅವರು ವೈದ್ಯರಿಗೆ ತಿಳಿಸಿದರು.</p>.<p>ಈ ವೇಳೆ ಹಾಜರಿದ್ದ ವೈದ್ಯಾಧಿಕಾರಿ ಡಾ.ಹರ್ಷವರ್ಧನ್ ರಫಗಾರ ಅವರು ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ ಕೈಗೊಂಡಿರುವ ಕ್ರಮದ ಬಗ್ಗೆ ಮಾಹಿತಿ ನೀಡಿದರು. ಅಲ್ಲದೆ ಆಸ್ಪತ್ರೆಗೆ ನುರಿತ ಸ್ಟಾಫ್ ನರ್ಸ್ಗಳ ಅವಶ್ಯಕತೆಯಿದೆ ಎಂದು ಜಿಲ್ಲಾಧಿಕಾರಿ ಗಮನಕ್ಕೆ ತಂದರು.</p>.<p>ವೈದ್ಯರ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ, ತಾಲ್ಲೂಕು ಆಸ್ಪತ್ರೆಗೆ ಶೀಘ್ರದಲ್ಲಿಯೇ ಸ್ಟಾಫ್ ನರ್ಸ್ಗಳ ನಿಯೋಜನೆ ಮಾಡುವುದಾಗಿ ಭರವಸೆ ನೀಡಿದರು.</p>.<p>ಈ ವೇಳೆ ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ಸುರಪುರ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ಕಂದಾಯ ನಿರೀಕ್ಷಕ ಗುರುಬಸಪ್ಪ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ಮತ್ತು ಕಂದಾಯ ಇಲಾಖೆ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ಕೋವಿಡ್ ಸೋಂಕಿತರಿಗಾಗಿ ಸುರಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಆಮ್ಲಜನಕ (ಆಕ್ಸಿಜನ್ ಪ್ಲಾಂಟ್) ಘಟಕ ಶೀಘ್ರ ಸ್ಥಾಪನೆ ಮಾಡುವಂತೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲೆಯ ಸುರಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಶುಕ್ರವಾರ ಆಮ್ಲಜನಕ ಘಟಕ ವೀಕ್ಷಿಸಿ ಮಾತನಾಡಿದ ಅವರು, ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸಿ ಒಂದು ನಿಮಿಷಕ್ಕೆ 110 ಲೀಟರ್ ಉತ್ಪಾದನೆ ಸಾಮಾರ್ಥ್ಯದ ಈ ಆಮ್ಲಜನಕ ಪ್ಲಾಂಟ್ ಅನ್ನು ಕೋವಿಡ್ ಸೋಂಕಿತರ ಸೇವೆಗೆ ಅಣಿಗೊಳಿಸಬೇಕು ಎಂದು ತಾಂತ್ರಿಕ ವರ್ಗದವರಿಗೆ ನಿರ್ದೇಶನ ನೀಡಿದರು.<br /><br />ಇದೇವೇಳೆಆಸ್ಪತ್ರೆ ವೀಕ್ಷಿಸಿದ ಜಿಲ್ಲಾಧಿಕಾರಿ, ಸ್ವಚ್ಛತೆ ಕಾಪಾಡಿಕೊಳ್ಳಬೇಕೆಂದು ಆಸ್ಪತ್ರೆ ಸಿಬ್ಬಂದಿಗೆ ಸೂಚಿಸಿದರು.</p>.<p>ರಾಜ್ಯ ವಿಪತ್ತು ಪರಿಹಾರ ನಿಧಿಯಡಿ ಆಸ್ಪತ್ರೆಗೆ ಬೇಕಾದ ವೈದ್ಯಕೀಯ ಪರಿಕರಗಳನ್ನು ಖರೀದಿಸುವಂತೆ ಅವರು ವೈದ್ಯರಿಗೆ ತಿಳಿಸಿದರು.</p>.<p>ಈ ವೇಳೆ ಹಾಜರಿದ್ದ ವೈದ್ಯಾಧಿಕಾರಿ ಡಾ.ಹರ್ಷವರ್ಧನ್ ರಫಗಾರ ಅವರು ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ ಕೈಗೊಂಡಿರುವ ಕ್ರಮದ ಬಗ್ಗೆ ಮಾಹಿತಿ ನೀಡಿದರು. ಅಲ್ಲದೆ ಆಸ್ಪತ್ರೆಗೆ ನುರಿತ ಸ್ಟಾಫ್ ನರ್ಸ್ಗಳ ಅವಶ್ಯಕತೆಯಿದೆ ಎಂದು ಜಿಲ್ಲಾಧಿಕಾರಿ ಗಮನಕ್ಕೆ ತಂದರು.</p>.<p>ವೈದ್ಯರ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ, ತಾಲ್ಲೂಕು ಆಸ್ಪತ್ರೆಗೆ ಶೀಘ್ರದಲ್ಲಿಯೇ ಸ್ಟಾಫ್ ನರ್ಸ್ಗಳ ನಿಯೋಜನೆ ಮಾಡುವುದಾಗಿ ಭರವಸೆ ನೀಡಿದರು.</p>.<p>ಈ ವೇಳೆ ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ಸುರಪುರ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ಕಂದಾಯ ನಿರೀಕ್ಷಕ ಗುರುಬಸಪ್ಪ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ಮತ್ತು ಕಂದಾಯ ಇಲಾಖೆ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>