<p><strong>ಯಾದಗಿರಿ:</strong>ಜಿಲ್ಲೆಯಲ್ಲಿ 2,280 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲಿದ್ದಾರೆ. ಯಾದಗಿರಿಯಲ್ಲಿ 5, ಶಹಾಪುರದಲ್ಲಿ 2 ಮತ್ತು ಸುರಪುರದಲ್ಲಿ 1 ಪರೀಕ್ಷಾ ಕೇಂದ್ರ ಇದ್ದು, ಪ್ರತಿ ಕೋಣೆಗೆ 24 ವಿದ್ಯಾರ್ಥಿಗಳಂತೆ ಆಸನದ ವ್ಯವಸ್ಥೆ ಮಾಡಲಾಗುವುದು ಎಂದುಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಮಾಹಿತಿ ನೀಡಿದ್ದಾರೆ.</p>.<p>ಜುಲೈ 30 ಮತ್ತು 31 ರಂದು ನಡೆಯುವ ಸಿಇಟಿ ಪರೀಕ್ಷೆಗಾಗಿ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜತೆ ನಡೆದ ವಿಡಿಯೊ ಕಾನ್ಫರೆನ್ಸ್ನಲ್ಲಿ ಅವರು ಇದನ್ನು ತಿಳಿಸಿದ್ದಾರೆ.</p>.<p>ನಂತರ ಸಿಇಟಿ ಪರೀಕ್ಷೆ ಸುಗಮವಾಗಿ ನಡೆಸುವ ಬಗ್ಗೆ ಅಧಿಕಾರಿ ಮತ್ತು ಸಿಬ್ಬಂದಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ ಅವರು ಸೂಕ್ತ ಬಂದೋಬಸ್ತ್ ಬಗ್ಗೆ ತಿಳಿಸಿದರು.</p>.<p>ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದಹೆಚ್ಚುವರಿಮುಖ್ಯ ಕಾರ್ಯದರ್ಶಿ ಜಿಲ್ಲೆಯಲ್ಲಿ ನಡೆಯುವ 8 ಪರೀಕ್ಷಾ ಕೇಂದ್ರಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಎಲ್ಲಾ ಕೇಂದ್ರಗಳಿಗೆ ಎಸ್ಓಪಿಯಂತೆ ಪ್ರತಿ ಪರೀಕ್ಷಾ ಕೇಂದ್ರವನ್ನು ಮೂರು ದಿನ ಮೊದಲು ಸೋಂಕು ನಿವಾರಕ ದ್ರಾವಣವನ್ನು ಸಿಂಪಡಿಸಬೇಕು.</p>.<p>ವಿದ್ಯಾರ್ಥಿಗಳಿಗೆ ಮಾಸ್ಕ್ ಧರಿಸಲು ಮತ್ತು ಆಯಾ ಕೇಂದ್ರಗಳಿಗೆ ಸ್ಯಾನಿಟೈಸರ್ ಸರಬರಾಜು ಮಾಡಲು ಹಾಗೂ ಥರ್ಮಲ್ ಸ್ಕ್ಯಾನರ್ ಉಪಯೋಗ ಮಾಡಲು ತಿಳಿಸಿದರು.</p>.<p>ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಮತ್ತು ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರು ಈ ವೇಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong>ಜಿಲ್ಲೆಯಲ್ಲಿ 2,280 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲಿದ್ದಾರೆ. ಯಾದಗಿರಿಯಲ್ಲಿ 5, ಶಹಾಪುರದಲ್ಲಿ 2 ಮತ್ತು ಸುರಪುರದಲ್ಲಿ 1 ಪರೀಕ್ಷಾ ಕೇಂದ್ರ ಇದ್ದು, ಪ್ರತಿ ಕೋಣೆಗೆ 24 ವಿದ್ಯಾರ್ಥಿಗಳಂತೆ ಆಸನದ ವ್ಯವಸ್ಥೆ ಮಾಡಲಾಗುವುದು ಎಂದುಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಮಾಹಿತಿ ನೀಡಿದ್ದಾರೆ.</p>.<p>ಜುಲೈ 30 ಮತ್ತು 31 ರಂದು ನಡೆಯುವ ಸಿಇಟಿ ಪರೀಕ್ಷೆಗಾಗಿ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜತೆ ನಡೆದ ವಿಡಿಯೊ ಕಾನ್ಫರೆನ್ಸ್ನಲ್ಲಿ ಅವರು ಇದನ್ನು ತಿಳಿಸಿದ್ದಾರೆ.</p>.<p>ನಂತರ ಸಿಇಟಿ ಪರೀಕ್ಷೆ ಸುಗಮವಾಗಿ ನಡೆಸುವ ಬಗ್ಗೆ ಅಧಿಕಾರಿ ಮತ್ತು ಸಿಬ್ಬಂದಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ ಅವರು ಸೂಕ್ತ ಬಂದೋಬಸ್ತ್ ಬಗ್ಗೆ ತಿಳಿಸಿದರು.</p>.<p>ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದಹೆಚ್ಚುವರಿಮುಖ್ಯ ಕಾರ್ಯದರ್ಶಿ ಜಿಲ್ಲೆಯಲ್ಲಿ ನಡೆಯುವ 8 ಪರೀಕ್ಷಾ ಕೇಂದ್ರಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಎಲ್ಲಾ ಕೇಂದ್ರಗಳಿಗೆ ಎಸ್ಓಪಿಯಂತೆ ಪ್ರತಿ ಪರೀಕ್ಷಾ ಕೇಂದ್ರವನ್ನು ಮೂರು ದಿನ ಮೊದಲು ಸೋಂಕು ನಿವಾರಕ ದ್ರಾವಣವನ್ನು ಸಿಂಪಡಿಸಬೇಕು.</p>.<p>ವಿದ್ಯಾರ್ಥಿಗಳಿಗೆ ಮಾಸ್ಕ್ ಧರಿಸಲು ಮತ್ತು ಆಯಾ ಕೇಂದ್ರಗಳಿಗೆ ಸ್ಯಾನಿಟೈಸರ್ ಸರಬರಾಜು ಮಾಡಲು ಹಾಗೂ ಥರ್ಮಲ್ ಸ್ಕ್ಯಾನರ್ ಉಪಯೋಗ ಮಾಡಲು ತಿಳಿಸಿದರು.</p>.<p>ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಮತ್ತು ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರು ಈ ವೇಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>