ಕೇಂದ್ರ ಪುರಸ್ಕೃತ ಯೋಜನೆಗಳಾದ ಪ್ರಧಾನ ಮಂತ್ರಿ ಅವಾಸ್ ಯೋಜನೆ, ಪ್ರಧಾನ ಮಂತ್ರಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ, ಪ್ರಧಾನ ಮಂತ್ರಿ ಉಜ್ವಲ ಯೋಜನೆ, ಪೋಷಣಾ ಅಭಿಯಾನ ಯೋಜನೆ, ಪ್ರಧಾನಮಂತ್ರಿ ಮಾತೃವಂದನಾ ಸೇರಿ ವಿವಿಧ ಯೋಜನೆ ಫಲಾನುಭವಿಗಳೊಂದಿಗೆ ಸಂವಾದ ನಡೆಸಿ, ಸಮಾಜದ ಅತ್ಯಂತ ಕಡು ಬಡ ವ್ಯಕ್ತಿಗೆ ಈ ಯೋಜನೆಯ ಲಾಭ ದೊರೆಯಬೇಕೆಂಬುದು ಪ್ರಧಾನಿಗಳ ಆಶಯವಾಗಿದೆ. ತಾವೆಲ್ಲರೂ ತಮ್ಮ ನೆರೆ ಹೊರೆಯ ಅರ್ಹ ಫಲಾನುಭವಿಗಳಿಗೆ ಈ ಯೋಜನೆಗಳ ಲಾಭ ದೊರಕಿಸುವಂತೆ ಅರಿವು ಮೂಡಿಸಬೇಕು. ಅಧಿಕಾರಿಗಳು ಇದರ ಲಾಭ ದೊರಕಿಸುವಂತೆ ಸಲಹೆ ನೀಡಿದರು.