<p><strong>ಸುರಪುರ</strong>: ‘ನಾಯಕತ್ವದ ಗುಣ ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಸಹಕಾರಿಯಾಗಿದೆ’ ಎಂದು ಪ್ರಭು ಕಾಲೇಜಿನ ಉಪನ್ಯಾಸಕ ಉಪೇಂದ್ರನಾಯಕ ಸುಬೇದಾರ ಹೇಳಿದರು.</p>.<p>ತಾಲ್ಲೂಕಿನ ರತ್ತಾಳ ಗ್ರಾಮದಲ್ಲಿ ರಂಗಂಪೇಟೆಯ ಜ್ಞಾನಬಿಂದು ಶಿಕ್ಷಣ ಸಂಸ್ಥೆ ಗುರುವಾರ ಹಮ್ಮಿಕೊಂಡಿದ್ದ ಎನ್ಎಸ್ಎಸ್ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಶಿಬಿರ ಸಾಮಾಜಿಕ ಅರಿವು ಮೂಡಿಸಿಕೊಳ್ಳಲು ನೆರವಾಗುತ್ತದೆ. ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಯೊಂದಿಗೆ ಗ್ರಾಮೀಣ ಭಾಗದ ಜನರ ಜೀವನ ಮಟ್ಟ ಮತ್ತು ಅಭಿವೃದ್ದಿ ಬಗ್ಗೆ ಅರಿತುಕೊಳ್ಳಬೇಕು. ಅವರ ಜೀವನ ಕಲಿಕೆ ಬಗ್ಗೆ ಕಾಳಜಿ ವಹಿಸಬೇಕು’ ಎಂದು ಸಲಹೆ ನೀಡಿದರು.</p>.<p>ಉಪನ್ಯಾಸಕ ಧರ್ಮರಾಜ ಪಿಳಿಬಂಟ ಮಾತನಾಡಿ, ‘ಯುವ ಜನತೆಯೇ ದೇಶದ ನಿಜವಾದ ಸಂಪತ್ತು. ಯುವಕರು ಮಾನಸಿಕವಾಗಿ, ಬೌದ್ಧಿಕವಾಗಿ ಸದೃಢತೆ ಹೊಂದಬೇಕು. ಸದೃಢ ಭಾರತಕ್ಕೆ ಯುವ ಜನತೆಯೇ ಶಕ್ತಿಯಾಗಿದ್ದಾರೆ’ ಎಂದರು.</p>.<p>‘ವಿದ್ಯಾರ್ಥಿಗಳು ಭವಿಷ್ಯದ ಜೀವನಕ್ಕಾಗಿ ಚಿಂತನೆ ಹೊಂದಿರಬೇಕು. ಉತ್ತಮವಾದ ಮಾರ್ಗದರ್ಶನ ಪಡೆದು ವೃತ್ತಿಯ ಅವಕಾಶ ಪಡೆಯುವಂತವರಾಗಬೇಕು. ಆರೋಗ್ಯ ಮತ್ತು ಜೀವನ ಶೈಲಿ ಯುವಕರ ಮೇಲೆ ಹೆಚ್ಚು ಪರಿಣಾಮ ಬೀರುವುದರಿಂದ ದೈಹಿಕ ಚಟುವಟಿಕೆಗಳಗೆ ಹೆಚ್ಚಿನ ಗಮನ ಕೊಡಬೇಕು’ ಎಂದರು.</p>.<p>ಯೋಜನಾಧಿಕಾರಿ ವೆಂಕಟೇಶ ಆಲದರ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಂಶುಪಾಲ ತಿಮ್ಮಣ್ಣ ಪೂಜಾರಿ, ಉಪನ್ಯಾಸಕ ವಿಜಯಕುಮಾರ ಬಣಗಾರ ಮಾತನಾಡಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ತಿಮ್ಮಯ್ಯ ದೊಡ್ಮನಿ, ಯಲ್ಲಪ್ಪ ಗಡದರ, ನಾಗರೆಡ್ಡಿ ಯಾದಗಿರಿಕರ್, ವೆಂಕಣ್ಣ ಪೂಜಾರಿ ವೇದಿಕೆಯಲ್ಲಿದ್ದರು. ಶಶಿಕಲಾ ಸ್ವಾಗತಿಸಿದರು. ನಾಗರಾಜ ಆಲದರ್ತಿ ನಿರೂಪಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ</strong>: ‘ನಾಯಕತ್ವದ ಗುಣ ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಸಹಕಾರಿಯಾಗಿದೆ’ ಎಂದು ಪ್ರಭು ಕಾಲೇಜಿನ ಉಪನ್ಯಾಸಕ ಉಪೇಂದ್ರನಾಯಕ ಸುಬೇದಾರ ಹೇಳಿದರು.</p>.<p>ತಾಲ್ಲೂಕಿನ ರತ್ತಾಳ ಗ್ರಾಮದಲ್ಲಿ ರಂಗಂಪೇಟೆಯ ಜ್ಞಾನಬಿಂದು ಶಿಕ್ಷಣ ಸಂಸ್ಥೆ ಗುರುವಾರ ಹಮ್ಮಿಕೊಂಡಿದ್ದ ಎನ್ಎಸ್ಎಸ್ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಶಿಬಿರ ಸಾಮಾಜಿಕ ಅರಿವು ಮೂಡಿಸಿಕೊಳ್ಳಲು ನೆರವಾಗುತ್ತದೆ. ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಯೊಂದಿಗೆ ಗ್ರಾಮೀಣ ಭಾಗದ ಜನರ ಜೀವನ ಮಟ್ಟ ಮತ್ತು ಅಭಿವೃದ್ದಿ ಬಗ್ಗೆ ಅರಿತುಕೊಳ್ಳಬೇಕು. ಅವರ ಜೀವನ ಕಲಿಕೆ ಬಗ್ಗೆ ಕಾಳಜಿ ವಹಿಸಬೇಕು’ ಎಂದು ಸಲಹೆ ನೀಡಿದರು.</p>.<p>ಉಪನ್ಯಾಸಕ ಧರ್ಮರಾಜ ಪಿಳಿಬಂಟ ಮಾತನಾಡಿ, ‘ಯುವ ಜನತೆಯೇ ದೇಶದ ನಿಜವಾದ ಸಂಪತ್ತು. ಯುವಕರು ಮಾನಸಿಕವಾಗಿ, ಬೌದ್ಧಿಕವಾಗಿ ಸದೃಢತೆ ಹೊಂದಬೇಕು. ಸದೃಢ ಭಾರತಕ್ಕೆ ಯುವ ಜನತೆಯೇ ಶಕ್ತಿಯಾಗಿದ್ದಾರೆ’ ಎಂದರು.</p>.<p>‘ವಿದ್ಯಾರ್ಥಿಗಳು ಭವಿಷ್ಯದ ಜೀವನಕ್ಕಾಗಿ ಚಿಂತನೆ ಹೊಂದಿರಬೇಕು. ಉತ್ತಮವಾದ ಮಾರ್ಗದರ್ಶನ ಪಡೆದು ವೃತ್ತಿಯ ಅವಕಾಶ ಪಡೆಯುವಂತವರಾಗಬೇಕು. ಆರೋಗ್ಯ ಮತ್ತು ಜೀವನ ಶೈಲಿ ಯುವಕರ ಮೇಲೆ ಹೆಚ್ಚು ಪರಿಣಾಮ ಬೀರುವುದರಿಂದ ದೈಹಿಕ ಚಟುವಟಿಕೆಗಳಗೆ ಹೆಚ್ಚಿನ ಗಮನ ಕೊಡಬೇಕು’ ಎಂದರು.</p>.<p>ಯೋಜನಾಧಿಕಾರಿ ವೆಂಕಟೇಶ ಆಲದರ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಂಶುಪಾಲ ತಿಮ್ಮಣ್ಣ ಪೂಜಾರಿ, ಉಪನ್ಯಾಸಕ ವಿಜಯಕುಮಾರ ಬಣಗಾರ ಮಾತನಾಡಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ತಿಮ್ಮಯ್ಯ ದೊಡ್ಮನಿ, ಯಲ್ಲಪ್ಪ ಗಡದರ, ನಾಗರೆಡ್ಡಿ ಯಾದಗಿರಿಕರ್, ವೆಂಕಣ್ಣ ಪೂಜಾರಿ ವೇದಿಕೆಯಲ್ಲಿದ್ದರು. ಶಶಿಕಲಾ ಸ್ವಾಗತಿಸಿದರು. ನಾಗರಾಜ ಆಲದರ್ತಿ ನಿರೂಪಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>