<p>ನನಗೆ ಆರಂಭದಲ್ಲಿ ಚೆಕ್ಪೋಸ್ಟ್ನಲ್ಲಿ ಕೊರೊನಾ ಪರೀಕ್ಷೆಗೆ ನಿಯೋಜಿಸಿದಾಗ ತುಂಬಾ ಭಯವಿತ್ತು. ಹಲವು ದಿನಗಳ ನಂತರ ಆತಂಕ ಕಾಡಲಿಲ್ಲ. ಅತ್ಯಂತ ಸಂಕಷ್ಟದ ಸಮಯವಾಗಿರುವ ಈ ಸಂದರ್ಭದಲ್ಲಿ ನನ್ನ ಕರ್ತವ್ಯ ನೆನಪಿಸಿಕೊಂಡು ಕೆಲಸ ಮಾಡುತ್ತಿದ್ದೇನೆ. ‘ಕೊರೊನಾ ವಾರಿಯರ್’ ಎಂಬ ಪದವೇ ನಮ್ಮನ್ನು ಉತ್ತೇಜಿಸುತ್ತಿದೆ.</p>.<p>ಈ ಹಿಂದೆಯು ಸಂಕಷ್ಟದ ಪರಿಸ್ಥಿತಿಯಲ್ಲಿ ಕೆಲಸ ಮಾಡಿದ್ದೇನೆ. ಕೊರೊನಾ ಮೊದಲನೇ ಅಲೆಗೆ ಹೋಲಿಸಿದರೆ ಈಗ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವುದು ಸವಾಲಾಗಿ ಪರಿಣಮಿಸಿದೆ. ಆದರೆ ನಮ್ಮಲ್ಲಿನ ಒತ್ತಡ, ಸಮಸ್ಯೆ, ಸವಾಲುಗಳ ಬಗ್ಗೆ ಹೊರಗಿನವರಿಗೆ ಅರ್ಥವಾಗವುದಿಲ್ಲ. ಮನೆ, ಕುಟುಂಬದ ಸದಸ್ಯರು, ಸಂಬಂಧಿಗಳು ಮತ್ತು ಸ್ನೇಹಿತರನ್ನು ಮರೆತು ಕಾರ್ಯನಿರ್ವಹಿಸುತ್ತಿದ್ದೇವೆ.</p>.<p>ಕೊರೊನಾ ಕುರಿತು ಜನರು ಆತಂಕ ಪಡದೆ ಮುನ್ನೆಚ್ಚರಿಕೆ ವಹಿಸಬೇಕು. ಸರ್ಕಾರದ ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಿ, ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಬೇಕು. ಜನರು ಇಷ್ಟು ಮಾಡಿದರೆ ಸಾಕು, ಕೊರೊನಾ ನಿಯಂತ್ರಿಸಲು ಸರ್ಕಾರಕ್ಕೂ, ಆರೋಗ್ಯ ಸಿಬ್ಬಂದಿಗೂ ಸಹಕಾರಿಯಾಗಲಿದೆ.</p>.<p>ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೊಗಳ ಕಡೆ ಗಮನ ಕೊಡದೆ, ಪೊಲೀಸ್ ಇಲಾಖೆ ಸೇರಿದಂತೆ ಕೊರೊನಾ ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿರುವ ಅಧಿಕಾರಿಗಳಿಗೆ ಸಹಕಾರ ನೀಡಬೇಕು.</p>.<p><em><strong>-ಸಂಗೀತಾ ಮುರಾಳ,<span class="Designate"> ಶುಶ್ರೂಷಕಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಕೆಂಭಾವಿ</span></strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನನಗೆ ಆರಂಭದಲ್ಲಿ ಚೆಕ್ಪೋಸ್ಟ್ನಲ್ಲಿ ಕೊರೊನಾ ಪರೀಕ್ಷೆಗೆ ನಿಯೋಜಿಸಿದಾಗ ತುಂಬಾ ಭಯವಿತ್ತು. ಹಲವು ದಿನಗಳ ನಂತರ ಆತಂಕ ಕಾಡಲಿಲ್ಲ. ಅತ್ಯಂತ ಸಂಕಷ್ಟದ ಸಮಯವಾಗಿರುವ ಈ ಸಂದರ್ಭದಲ್ಲಿ ನನ್ನ ಕರ್ತವ್ಯ ನೆನಪಿಸಿಕೊಂಡು ಕೆಲಸ ಮಾಡುತ್ತಿದ್ದೇನೆ. ‘ಕೊರೊನಾ ವಾರಿಯರ್’ ಎಂಬ ಪದವೇ ನಮ್ಮನ್ನು ಉತ್ತೇಜಿಸುತ್ತಿದೆ.</p>.<p>ಈ ಹಿಂದೆಯು ಸಂಕಷ್ಟದ ಪರಿಸ್ಥಿತಿಯಲ್ಲಿ ಕೆಲಸ ಮಾಡಿದ್ದೇನೆ. ಕೊರೊನಾ ಮೊದಲನೇ ಅಲೆಗೆ ಹೋಲಿಸಿದರೆ ಈಗ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವುದು ಸವಾಲಾಗಿ ಪರಿಣಮಿಸಿದೆ. ಆದರೆ ನಮ್ಮಲ್ಲಿನ ಒತ್ತಡ, ಸಮಸ್ಯೆ, ಸವಾಲುಗಳ ಬಗ್ಗೆ ಹೊರಗಿನವರಿಗೆ ಅರ್ಥವಾಗವುದಿಲ್ಲ. ಮನೆ, ಕುಟುಂಬದ ಸದಸ್ಯರು, ಸಂಬಂಧಿಗಳು ಮತ್ತು ಸ್ನೇಹಿತರನ್ನು ಮರೆತು ಕಾರ್ಯನಿರ್ವಹಿಸುತ್ತಿದ್ದೇವೆ.</p>.<p>ಕೊರೊನಾ ಕುರಿತು ಜನರು ಆತಂಕ ಪಡದೆ ಮುನ್ನೆಚ್ಚರಿಕೆ ವಹಿಸಬೇಕು. ಸರ್ಕಾರದ ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಿ, ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಬೇಕು. ಜನರು ಇಷ್ಟು ಮಾಡಿದರೆ ಸಾಕು, ಕೊರೊನಾ ನಿಯಂತ್ರಿಸಲು ಸರ್ಕಾರಕ್ಕೂ, ಆರೋಗ್ಯ ಸಿಬ್ಬಂದಿಗೂ ಸಹಕಾರಿಯಾಗಲಿದೆ.</p>.<p>ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೊಗಳ ಕಡೆ ಗಮನ ಕೊಡದೆ, ಪೊಲೀಸ್ ಇಲಾಖೆ ಸೇರಿದಂತೆ ಕೊರೊನಾ ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿರುವ ಅಧಿಕಾರಿಗಳಿಗೆ ಸಹಕಾರ ನೀಡಬೇಕು.</p>.<p><em><strong>-ಸಂಗೀತಾ ಮುರಾಳ,<span class="Designate"> ಶುಶ್ರೂಷಕಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಕೆಂಭಾವಿ</span></strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>