<p><strong>ವಡಗೇರಾ:</strong> ‘ಸಸ್ಯಗಳ ಬೆಳವಣಿಗೆಗೆ ಮತ್ತು ಅಭಿವೃದ್ದಿಗೆ ಹದಿನೇಳು ಪೋಷಕಾಂಶಗಳ ಅಗತ್ಯವಿರುತ್ತದೆ. ಇವುಗಳಲ್ಲಿ ಯಾವುದೇ ಒಂದು ಪೋಷಕಾಂಶದ ಕೊರತೆಯಾದರೆ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕಡಿಮೆಯಾಗುತ್ತದೆ’ ಎಂದು ಪಟ್ಟಣದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಗಣಪತಿ ಹೇಳಿದರು.</p>.<p>ವಡಗೇರಾ ಪಟ್ಟಣದ ಗ್ರಾಮ ಪಂಚಾಯಿತಿ ಆವರಣದಲ್ಲಿ ಡಿಎಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಕೆ ವಿಧಾನ ಕುರಿತು ರೈತರಿಗಾಗಿ ಹಮ್ಮಿಕೊಂಡಿದ್ದ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ರೈತರು ಕೇವಲ ಒಂದೋ ಅಥವಾ ಎರಡು ಪೋಷಕಾಂಶ ಒದಗಿಸುವ ಯೂರಿಯಾ ಹಾಗೂ ಡಿಎಪಿಯನ್ನು ರೂಢಿಗತವಾಗಿ ಬಳುಸುತ್ತಿರುವುದರಿಂದ ಬೆಳೆಗಳಿಗೆ ಬೇಕಾದ ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ದೊರೆಯುವುದಿಲ್ಲ’ ಎಂದು ತಿಳಿಸಿದರು.</p>.<p>ಬಾಹ್ಯ ಪೋಷಕಾಂಶವನ್ನು ಬೆಳೆಗಳಿಗೆ ನೀಡುವದು ಅನಿವಾರ್ಯ. ಬಾಹ್ಯ ಪೋಷಕಾಂಶಗಳಾದ ಸಾವಯವ ಗೊಬ್ಬರ, ಕೊಟ್ಟಿಗೆ ಗೊಬ್ಬರ, ಹಸಿರೆಲೆ ಗೊಬ್ಬರ, ಹಿಂಡಿ ಇತ್ಯಾದಿಗಳ ಜತೆ ರಸಗೊಬ್ಬರಗಳಲ್ಲಿ ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ನೇರವಾಗಿ ದೊರೆಯುತ್ತವೆ. ಅದಕ್ಕಾಗಿ ಇವುಗಳನ್ನು ಬಳಕೆ ಮಾಡಿ ಎಂದು ರೈತರಿಗೆ ಸಲಹೆ ನೀಡಿದರು.</p>.<p>ರೈತರು ರಸಗೊಬ್ಬರಕ್ಕೆ ಒಂದೇ ಸಂಸ್ಥೆ ಅಥವಾ ಒಂದೇ ರಸಗೊಬ್ಬರಕ್ಕೆ ಆದ್ಯತೆ ನೀಡದೇ ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಪೋಟ್ಯಾಷ್ ಒದಗಿಸುವ ಇತರೆ ಸಂಯುಕ್ತ ಗೊಬ್ಬರಗಳಾದ 15:15:15, 10:26:12:32:16, 22:22:14, 14:35:14, 17:17:17, 14:28:14, 19:19:19 ಹಾಗೂ20:10:10 ರಸಗೊಬ್ಬರಗಳನ್ನು ಬಳಸಬೇಕು ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡಗೇರಾ:</strong> ‘ಸಸ್ಯಗಳ ಬೆಳವಣಿಗೆಗೆ ಮತ್ತು ಅಭಿವೃದ್ದಿಗೆ ಹದಿನೇಳು ಪೋಷಕಾಂಶಗಳ ಅಗತ್ಯವಿರುತ್ತದೆ. ಇವುಗಳಲ್ಲಿ ಯಾವುದೇ ಒಂದು ಪೋಷಕಾಂಶದ ಕೊರತೆಯಾದರೆ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕಡಿಮೆಯಾಗುತ್ತದೆ’ ಎಂದು ಪಟ್ಟಣದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಗಣಪತಿ ಹೇಳಿದರು.</p>.<p>ವಡಗೇರಾ ಪಟ್ಟಣದ ಗ್ರಾಮ ಪಂಚಾಯಿತಿ ಆವರಣದಲ್ಲಿ ಡಿಎಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಕೆ ವಿಧಾನ ಕುರಿತು ರೈತರಿಗಾಗಿ ಹಮ್ಮಿಕೊಂಡಿದ್ದ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ರೈತರು ಕೇವಲ ಒಂದೋ ಅಥವಾ ಎರಡು ಪೋಷಕಾಂಶ ಒದಗಿಸುವ ಯೂರಿಯಾ ಹಾಗೂ ಡಿಎಪಿಯನ್ನು ರೂಢಿಗತವಾಗಿ ಬಳುಸುತ್ತಿರುವುದರಿಂದ ಬೆಳೆಗಳಿಗೆ ಬೇಕಾದ ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ದೊರೆಯುವುದಿಲ್ಲ’ ಎಂದು ತಿಳಿಸಿದರು.</p>.<p>ಬಾಹ್ಯ ಪೋಷಕಾಂಶವನ್ನು ಬೆಳೆಗಳಿಗೆ ನೀಡುವದು ಅನಿವಾರ್ಯ. ಬಾಹ್ಯ ಪೋಷಕಾಂಶಗಳಾದ ಸಾವಯವ ಗೊಬ್ಬರ, ಕೊಟ್ಟಿಗೆ ಗೊಬ್ಬರ, ಹಸಿರೆಲೆ ಗೊಬ್ಬರ, ಹಿಂಡಿ ಇತ್ಯಾದಿಗಳ ಜತೆ ರಸಗೊಬ್ಬರಗಳಲ್ಲಿ ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ನೇರವಾಗಿ ದೊರೆಯುತ್ತವೆ. ಅದಕ್ಕಾಗಿ ಇವುಗಳನ್ನು ಬಳಕೆ ಮಾಡಿ ಎಂದು ರೈತರಿಗೆ ಸಲಹೆ ನೀಡಿದರು.</p>.<p>ರೈತರು ರಸಗೊಬ್ಬರಕ್ಕೆ ಒಂದೇ ಸಂಸ್ಥೆ ಅಥವಾ ಒಂದೇ ರಸಗೊಬ್ಬರಕ್ಕೆ ಆದ್ಯತೆ ನೀಡದೇ ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಪೋಟ್ಯಾಷ್ ಒದಗಿಸುವ ಇತರೆ ಸಂಯುಕ್ತ ಗೊಬ್ಬರಗಳಾದ 15:15:15, 10:26:12:32:16, 22:22:14, 14:35:14, 17:17:17, 14:28:14, 19:19:19 ಹಾಗೂ20:10:10 ರಸಗೊಬ್ಬರಗಳನ್ನು ಬಳಸಬೇಕು ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>