ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಸ್ತೇದಾರ್ ಸೋಮನಾಥ ಅಂಗಡಿ ಅಮಾನತು

Last Updated 21 ನವೆಂಬರ್ 2022, 8:39 IST
ಅಕ್ಷರ ಗಾತ್ರ

ಯಾದಗಿರಿ: ನಗರದ ತಹಶೀಲ್ದಾರ್ ಕಚೇರಿಯ ಭೂಮಿ ಸಂಕಲನ (ಭೂಮಿ ಕೇಂದ್ರ) ವಿಭಾಗದ ಶಿರಸ್ತೇದಾರ್ ಸೋಮನಾಥ ಅಂಗಡಿ ಅವರನ್ನು ಅಮಾನತು ಮಾಡಲಾಗಿದೆ.

ಕರ್ತವ್ಯ ಲೋಪ ಕಾರಣದ ಮೇಲೆ ಪ್ರಾಧಿಕಾರ ಸಮಿತಿಯ ಪ್ರಾದೇಶಿಕ ಆಯುಕ್ತರು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಕೆಳ ಹಂತದ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಮೇಲಾಧಿಕಾರಿಗಳಿಗೆ ಮತ್ತು ಸಮಿತಿಯ ಗಮನಕ್ಕೆ ತಪ್ಪು ಮಾಹಿತಿ ನೀಡಿ ಆಕ್ರಮ ಸಕ್ರಮ ಯೋಜನೆ ಅಡಿ ಭೂಮಿ ಮಂಜೂರಾತಿ ಮಾಡಿಸಿ ಕರ್ತವ್ಯ ಲೋಪ ಎಸಗಿದ್ದು ಕಂಡು ಬರುತ್ತಿದೆ. ಕರ್ನಾಟಕ ನಾಗರಿಕ ಸೇವೆಗಳ ಕಲಂ 1957 ನಿಯಮ 10 (1) ಡಿ ಅನ್ವಯ ಮತ್ತು 1958 ನಿಯಮ 98ರಡಿ ಕ್ರಮ ಜರುಗಿಸಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT