ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡು ದಿನದ ಶಿಶು ರಕ್ಷಣೆ ಮಾಡಿದ ಅಧಿಕಾರಿಗಳು

Last Updated 12 ಅಕ್ಟೋಬರ್ 2020, 12:16 IST
ಅಕ್ಷರ ಗಾತ್ರ
ಎರಡು ದಿನದ ಶಿಶು ರಕ್ಷಣೆ ಮಾಡಿದ ಅಧಿಕಾರಿಗಳು
ADVERTISEMENT
""

ಯಾದಗಿರಿ: ತಾಲ್ಲೂಕಿನ ಅಬ್ಬೆತುಮಕೂರ ಗ್ರಾಮದ ಬಿ.ಇಡಿ ಕಾಲೇಜು ಮುಂಭಾಗದ ವಿಶ್ವಾರಾಧ್ಯರ ಗದ್ದುಗೆ ಬಳಿ ಬಟ್ಟೆಯಲ್ಲಿ ಸುತ್ತಿಟ್ಟಿದ್ದ ನವಜಾತಶಿಶುವನ್ನು ಅಧಿಕಾರಿಗಳು ರಕ್ಷಿಸಿದ್ದಾರೆ.

ಗಂಡು ಮಗು 2.5 ಕೆಜಿ ತೂಕವಿದ್ದು, ಆರೋಗ್ಯವಾಗಿದೆ‌. ಜಿಲ್ಲಾಸ್ಪತ್ರೆಯ ಎಸ್ಎನ್ಸಿಯುನಲ್ಲಿ ದಾಖಲಿಸಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪ್ರಭಾಕರ‍ ಕವಿತಾಳ, ಶಿಶು ಯೋಜನಾಧಿಕಾರಿ ಅಭಿವೃದ್ಧಿ ಅಧಿಕಾರಿ‍ ರಾಧಾ ಮಣ್ಣೂರ ಸೇರಿದಂತೆ ಪೊಲೀಸ್, ಮಕ್ಕಳ ಸಹಾಯವಾಣಿ ಅಧಿಕಾರಿಗಳು ಇದ್ದರು.

ಇತ್ತಿಚೆಗೆ ತಾಲ್ಲೂಕಿನ ಮುಂಡರಗಿ ಸಮೀಪದ ಮಳ್ಳುಕಂಟಿಯಲ್ಲಿಯೂ ಒಂದು ದಿನದ ನವಜಾತು ಶಿಶುವನ್ನು ರಕ್ಷಿಸಲಾಗಿತ್ತು.

ಎರಡು ದಿನದ ಶಿಶು ರಕ್ಷಣೆ ಮಾಡಿದ ಅಧಿಕಾರಿಗಳು

ಈ‌ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪ್ರಭಾಕರ‍ ಕವಿತಾಳ ಅವರು 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿ, ‘ಇಬ್ಬರು ಶಿಶುಗಳ ಪೋಷಕರ ಪತ್ತೆಗಾಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಿಶ್ವಾರಾಧ್ಯ ಗದ್ದುಗೆ ಬಳಿ ಸಿಸಿಟಿವಿ ಕ್ಯಾಮರಾ ಇದ್ದು, ಪೊಲೀಸರೊಂದಿಗೆ ಸೇರಿ ಯಾರು ಶಿಶುವನ್ನು ತಂದಿಟ್ಟಿದ್ದಾರೆ ಎಂದು ಪರಿಶೀಲಿಸಲಾಗುವುದು. ಮಂಗಳವಾರ ನವಜಾತು ಶಿಶುವನ್ನು ಕಲುಬುರ್ಗಿಗೆ ಕಳಿಸಿಕೊಡಲಾಗುತ್ತಿದೆ’ಎಂದು‌ ಮಾಹಿತಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT