ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪ್ರಭಾಕರ ಕವಿತಾಳ ಅವರು 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿ, ‘ಇಬ್ಬರು ಶಿಶುಗಳ ಪೋಷಕರ ಪತ್ತೆಗಾಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಿಶ್ವಾರಾಧ್ಯ ಗದ್ದುಗೆ ಬಳಿ ಸಿಸಿಟಿವಿ ಕ್ಯಾಮರಾ ಇದ್ದು, ಪೊಲೀಸರೊಂದಿಗೆ ಸೇರಿ ಯಾರು ಶಿಶುವನ್ನು ತಂದಿಟ್ಟಿದ್ದಾರೆ ಎಂದು ಪರಿಶೀಲಿಸಲಾಗುವುದು. ಮಂಗಳವಾರ ನವಜಾತು ಶಿಶುವನ್ನು ಕಲುಬುರ್ಗಿಗೆ ಕಳಿಸಿಕೊಡಲಾಗುತ್ತಿದೆ’ಎಂದು ಮಾಹಿತಿ ನೀಡಿದರು.