‘ಎರಡು ಬದಿಯಲ್ಲಿ ಗಿಡಗಳನ್ನು ಕಡಿದು ತೆರವು ಗೊಳಿಸಲಾಗಿದೆ. ಆದರೆ, ಇದಕ್ಕೆ ಶಾಶ್ವತ ಪರಿಹಾರ ಮಾಡಬೇಕಾಗಿತ್ತು. ಈಗ ಸೇತುವೆ ಮೇಲೆ ಬಂದ ಗಿಡಗಂಟೆ ಮಾತ್ರ ತೆರವುಗೊಳಿಸಲಾಗಿದೆ. ಆದರೆ, ಬುಡ ಹಾಗೇ ಇದೆ. ಇದು ಮತ್ತೊಮ್ಮೆ ಬೆಳೆಯಲಿದೆ. ಹೀಗಾಗಿ ಇದನ್ನು ಬುಡಸಮೇತ ಕಿತ್ತು ಹಾಕಿ ಶಾಶ್ವತ ಪರಿಹಾರ ಮಾಡಬೇಕು. ಆಗ ಮಾತ್ರ ಸೇತುವೆಗೆ ಸಮಸ್ಯೆ ಆಗುವುದಿಲ್ಲ’ ಎಂದು ಟೋಕರಿ ಕೋಲಿ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಉಮೇಶ ಮುದ್ನಾಳ ಆಗ್ರಹಿಸಿದ್ದಾರೆ.