ಯಾದಗಿರಿ: ‘ಜಗತ್ತಿನಲ್ಲಿ ಅಂತರ್ಜಾಲವನ್ನು ಕೇವಲ ಶೇ 4ರಷ್ಟು ಮಾತ್ರ ಸಕ್ರಮ ಕಾರ್ಯಗಳಿಗೆ ಬಳಸುತ್ತಿದ್ದು, ಇನ್ನುಳಿದ ಶೇ 96 ರಷ್ಟು ಅಕ್ರಮವಾಗಿ ಬಳಸುತ್ತಿದ್ದಾರೆ. ಹ್ಯಾಕಿಂಗ್ ತಡೆಗಟ್ಟಲು ಒಟಿಪಿ ಕ್ರಮ ಬಳಸುತ್ತಿರುವುದು ನಮ್ಮ ದೇಶ ಮಾತ್ರ’ ಎಂದು ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿ ವಿವೇಕ ಹೊನಗುಂಟಿಕರ್ ತಿಳಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇ-ಆಡಳಿತ ಮತ್ತು ದತ್ತಾಂಶ ವಿಶ್ಲೇಷಣಾ ಕೇಂದ್ರ, ಆಡಳಿತ ಸಂಸ್ಥೆ ಮೈಸೂರು, ಬೆಂಗಳೂರಿನ ಇ-ಆಡಳಿತ ಕೇಂದ್ರ ಹಾಗೂ ಜಿಲ್ಲಾ ತರಬೇತಿ ಸಂಸ್ಥೆ, ಸಹಯೋಗದೊಂದಿಗೆ ಎನ್ಇಜಿಡಿ ಸಾಮರ್ಥ್ಯಭಿವೃದ್ಧಿ ಯೋಜನೆಯಡಿ ಆಯೋಜಿಸಿದ್ದ ಸೈಬರ್ ಸೆಕ್ಯೂರಿಟಿ ಮತ್ತು ಇ-ಆಡಳಿತ ವಿಶೇಷ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.