<p><strong>ಹುಣಸಗಿ (ಯಾದಗಿರಿ ಜಿಲ್ಲೆ):</strong> ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ’ ಬಳಿಕ ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಪುರ ಬಳಿಯ ಬಸವಸಾಗರ ಜಲಾಶಯ ಪ್ರಮುಖ ಮೂರು ಗೇಟ್ ಬಳಿ ಪೋಲಿಸರ ಕಣ್ಗಾವಲು ಹೆಚ್ಚಿಸಲಾಗಿದೆ. </p><p>ಯಾದಗಿರಿ, ವಿಜಯಪುರ, ರಾಯಚೂರು ಪಾಯಿಂಟ್ ಬಳಿ ಹೆಚ್ಚಿನ ಪೊಲೀಸ್ ಭದ್ರತೆ ಮಾಡಲಾಗಿದೆ. </p><p>ಒಂದೊಂದು ಗೇಟ್ ಬಳಿ ಒಬ್ಬ ಪಿಎಸ್ಐ, 9 ಜನ ಪೊಲೀಸ್ ಸಿಬ್ಬಂದಿಗಳಿಂದ ಭದ್ರತೆ ಮಾಡಲಾಗಿದ್ದು, 24 ಗಂಟೆ ಎರಡು ಪಾಳೆಯದಲ್ಲಿ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. </p><p>ಶಸ್ತ್ರಾಸ್ತ್ರ ಸಹಿತ ಭದ್ರತೆಯಲ್ಲಿರುವ ಪೋಲಿಸರ ಜತೆಗೆ ಡ್ಯಾಂ ಆವರಣದ ಬಳಿಯು ಸಿಸಿಟಿವಿ ಕ್ಯಾಮರಾಗಳ ಕಣ್ಗಾವಲು ಮಾಡಲಾಗಿದೆ. </p><p>ರಾಜ್ಯದಲ್ಲಿಯೇ ಅತಿ ಹೆಚ್ಚು ನೀರಾವರಿ ಕ್ಷೇತ್ರ ಹೊಂದಿರುವ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ ಗುರುವಾರದಿಂದ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಸರ್ಕಾರದ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ನಿಗಮದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.</p><p>ಈ ಕುರಿತು ನಾರಾಯಣಪುರ ಬಸವಸಾಗರ ಡ್ಯಾಂ ಡಿವಿಜನ್ ಕಾರ್ಯನಿರ್ವಾಹಕ ಎಂಜಿನಿಯರ್ ಎಚ್.ಬಿ.ಕೊಣ್ಣುರ ‘ಪ್ರಜಾವಾಣಿ’ ಜತೆ ಮಾತನಾಡಿ, ‘ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಯ ಗಡಿ ಭಾಗದಲ್ಲಿ ಜಲಾಶಯ ಮುಖ್ಯ ಗೇಟ್ ಸೇರಿದಂತೆ ಒಟ್ಟು ಮೂರು ಕೇಂದ್ರಗಳಲ್ಲಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಈ ಮೊದಲು 12 ಜನ ಮೀಸಲು ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದರು. ಈಗ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಜಲಾಶಯದ ಮುಖ್ಯ ದ್ವಾರದ ಬಳಿ ತೀವ್ರ ನಿಗಾ ವಹಿಸಲಾಗಿದೆ’ ಎಂದರು ಹೇಳಿದರು.</p><p>‘ಹಿರಿಯ ಅಧಿಕಾರಿಗಳ ಸೂಚನೆಯಂತೆ ಜಲಾಶಯಕ್ಕೆ ಸೂಕ್ತ ಭದ್ರತೆ ಒದಗಿಸಲಾಗಿದ್ದು, ಅಗತ್ಯ ಬಿದ್ದಲ್ಲಿ ತಕ್ಷಣವೇ ಮುಂದಿನ ಕ್ರಮ ಕೈಗೊಳ್ಳುವುದಾಗಿ’ ಹುಣಸಗಿ ಸಿಪಿಐ ರವಿಕುಮಾರ ನೈಕೋಡಿ ಮಾಹಿತಿ ನೀಡಿದರು.</p><p>ಈ ಸಂದರ್ಭದಲ್ಲಿ ಡ್ಯಾಂ ಡಿವಿಜನ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಘವೇಂದ್ರ ಕುಲಕರ್ಣಿ, ವಿದ್ಯಾಧರ, ಬಾಲಚಂದ್ರ ಉಪಸ್ಥಿತರಿದ್ದರು. </p><p>ಯಾದಗಿರಿ, ವಿಜಯಪುರ, ರಾಯಚೂರು ಹಾಗೂ ಕಲಬುರಗಿ ಜಿಲ್ಲೆಯ ಬಹುತೇಕ ರೈತರಿಗೆ ಈ ಜಲಾಶಯ ಜೀವ ನಾಡಿಯಾಗಿದೆ. ಸದ್ಯ ನಾರಾಯಣಪುರ ಎಡದಂಡೆ ಮುಖ್ಯ ಕಾಲುವೆಯ ಮೂಲಕ ಇಂಡಿ ಶಾಖಾಕಾಲುವೆಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸಗಿ (ಯಾದಗಿರಿ ಜಿಲ್ಲೆ):</strong> ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ’ ಬಳಿಕ ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಪುರ ಬಳಿಯ ಬಸವಸಾಗರ ಜಲಾಶಯ ಪ್ರಮುಖ ಮೂರು ಗೇಟ್ ಬಳಿ ಪೋಲಿಸರ ಕಣ್ಗಾವಲು ಹೆಚ್ಚಿಸಲಾಗಿದೆ. </p><p>ಯಾದಗಿರಿ, ವಿಜಯಪುರ, ರಾಯಚೂರು ಪಾಯಿಂಟ್ ಬಳಿ ಹೆಚ್ಚಿನ ಪೊಲೀಸ್ ಭದ್ರತೆ ಮಾಡಲಾಗಿದೆ. </p><p>ಒಂದೊಂದು ಗೇಟ್ ಬಳಿ ಒಬ್ಬ ಪಿಎಸ್ಐ, 9 ಜನ ಪೊಲೀಸ್ ಸಿಬ್ಬಂದಿಗಳಿಂದ ಭದ್ರತೆ ಮಾಡಲಾಗಿದ್ದು, 24 ಗಂಟೆ ಎರಡು ಪಾಳೆಯದಲ್ಲಿ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. </p><p>ಶಸ್ತ್ರಾಸ್ತ್ರ ಸಹಿತ ಭದ್ರತೆಯಲ್ಲಿರುವ ಪೋಲಿಸರ ಜತೆಗೆ ಡ್ಯಾಂ ಆವರಣದ ಬಳಿಯು ಸಿಸಿಟಿವಿ ಕ್ಯಾಮರಾಗಳ ಕಣ್ಗಾವಲು ಮಾಡಲಾಗಿದೆ. </p><p>ರಾಜ್ಯದಲ್ಲಿಯೇ ಅತಿ ಹೆಚ್ಚು ನೀರಾವರಿ ಕ್ಷೇತ್ರ ಹೊಂದಿರುವ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ ಗುರುವಾರದಿಂದ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಸರ್ಕಾರದ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ನಿಗಮದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.</p><p>ಈ ಕುರಿತು ನಾರಾಯಣಪುರ ಬಸವಸಾಗರ ಡ್ಯಾಂ ಡಿವಿಜನ್ ಕಾರ್ಯನಿರ್ವಾಹಕ ಎಂಜಿನಿಯರ್ ಎಚ್.ಬಿ.ಕೊಣ್ಣುರ ‘ಪ್ರಜಾವಾಣಿ’ ಜತೆ ಮಾತನಾಡಿ, ‘ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಯ ಗಡಿ ಭಾಗದಲ್ಲಿ ಜಲಾಶಯ ಮುಖ್ಯ ಗೇಟ್ ಸೇರಿದಂತೆ ಒಟ್ಟು ಮೂರು ಕೇಂದ್ರಗಳಲ್ಲಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಈ ಮೊದಲು 12 ಜನ ಮೀಸಲು ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದರು. ಈಗ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಜಲಾಶಯದ ಮುಖ್ಯ ದ್ವಾರದ ಬಳಿ ತೀವ್ರ ನಿಗಾ ವಹಿಸಲಾಗಿದೆ’ ಎಂದರು ಹೇಳಿದರು.</p><p>‘ಹಿರಿಯ ಅಧಿಕಾರಿಗಳ ಸೂಚನೆಯಂತೆ ಜಲಾಶಯಕ್ಕೆ ಸೂಕ್ತ ಭದ್ರತೆ ಒದಗಿಸಲಾಗಿದ್ದು, ಅಗತ್ಯ ಬಿದ್ದಲ್ಲಿ ತಕ್ಷಣವೇ ಮುಂದಿನ ಕ್ರಮ ಕೈಗೊಳ್ಳುವುದಾಗಿ’ ಹುಣಸಗಿ ಸಿಪಿಐ ರವಿಕುಮಾರ ನೈಕೋಡಿ ಮಾಹಿತಿ ನೀಡಿದರು.</p><p>ಈ ಸಂದರ್ಭದಲ್ಲಿ ಡ್ಯಾಂ ಡಿವಿಜನ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಘವೇಂದ್ರ ಕುಲಕರ್ಣಿ, ವಿದ್ಯಾಧರ, ಬಾಲಚಂದ್ರ ಉಪಸ್ಥಿತರಿದ್ದರು. </p><p>ಯಾದಗಿರಿ, ವಿಜಯಪುರ, ರಾಯಚೂರು ಹಾಗೂ ಕಲಬುರಗಿ ಜಿಲ್ಲೆಯ ಬಹುತೇಕ ರೈತರಿಗೆ ಈ ಜಲಾಶಯ ಜೀವ ನಾಡಿಯಾಗಿದೆ. ಸದ್ಯ ನಾರಾಯಣಪುರ ಎಡದಂಡೆ ಮುಖ್ಯ ಕಾಲುವೆಯ ಮೂಲಕ ಇಂಡಿ ಶಾಖಾಕಾಲುವೆಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>