ಉಪಾಧ್ಯಕ್ಷ ಗೋಲ್ಲಾಳಪ್ಪ ಕಟಿಗಾರ್ ಮಾತನಾಡಿ, ಗ್ರಾಮಲೆಕ್ಕಾಧಿಕಾರಿಗಳು ಕೈಪಿಡಿಯಂತೆ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವರದಿ ಜಾರಿ ಮಾಡುವ ಅವಶ್ಯಕತೆ ಇಲ್ಲ. ಈಗಾಗಲೇ ಕಂದಾಯ ಇಲಾಖೆ ಕಾರ್ಯದರ್ಶಿಗಳಿಗೆ ಆಕ್ಷೇಪಣೆ ಸಲ್ಲಿಸಲಾಗಿದೆ. ಸರ್ಕಾರ ಗ್ರಾಮಲೆಕ್ಕಾಧಿಕಾರಿಗಳ ಅಧಿಕಾರ ಮತ್ತು ಕರ್ತವ್ಯಗಳನ್ನು ಪರಿಶೀಲಿಸಿ, ವರದಿ ಜಾರಿಗೊಳಿಸದಂತೆ ನಿರ್ಣಯ ತೆಗೆದು ಕೊಳ್ಳಬೇಕು ಎಂದು ಒತ್ತಾಯಿಸಿದರು.