ಯಾದಗಿರಿ: ‘ನಗರದ ಅಮರ ಲೇಔಟ್ನಲ್ಲಿ ಪಲ್ಲಾಸ್ ಮಲ್ಟಿ ಸ್ಪೆಷಲಿಸ್ಟ್ಆಸ್ಪತ್ರೆ ಉದ್ಘಾಟನೆ ಸಮಾರಂಭ ನವೆಂಬರ್ 26ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ’ ಎಂದು ಆಸ್ಪತ್ರೆಯ ಡಾ. ಪಲ್ಲಾ ಅಭಿಷೇಕರೆಡ್ಡಿ ಹೇಳಿದರು.
‘ಕಾರ್ಯಕ್ರಮಕ್ಕೆ ಗುರುಮಠಕಲ್ ಖಾಸಾ ಮಠದ ಪೀಠಾಧಿಪತಿ ಶಾಂತವೀರ ಸ್ವಾಮೀಜಿ, ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ, ನಾಗನಗೌಡ ಕಂದಕೂರ, ಮಾಜಿ ಶಾಸಕರಾದ ಡಾ.ಎ.ಬಿ.ಮಾಲಕರೆಡ್ಡಿ, ಡಾ.ವೀರಬಸವಂತರೆಡ್ಡಿ ಮುದ್ನಾಳ, ಡಾ.ಎಸ್ವೀರಭದ್ರಪ್ಪ ಅವರು ಆಗಮಿಸಲಿದ್ದಾರೆ’ ಎಂದು ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ಕರ್ನಾಟಕದ ಆಸ್ಪತ್ರೆಗಳಲ್ಲಿ ಲೇಜರ್ ಶಸ್ತ್ರ ಚಿಕಿತ್ಸೆ ಲಭ್ಯವಿಲ್ಲ. ಜಿಲ್ಲೆಯ ಜನರು ಮೂಲವ್ಯಾಧಿ, ಫಿಸ್ತೂಲಾ ಇನ್ನಿತರ ರೋಗಗಳ ಶಸ್ತ್ರಚಿಕಿತ್ಸೆಗಾಗಿ ದೂರದ ಹೈದರಾಬಾದ್, ಬೆಂಗಳೂರು, ಸೊಲ್ಲಾಪುರ ನಗರದ ಆಸ್ಪತ್ರೆಗಳಿಗೆ ತೆರಳುತ್ತಾರೆ. ಹೀಗಾಗಿ ನಮ್ಮಲ್ಲಿಯೇ ಆ ಸೌಲಭ್ಯ ಕಲ್ಪಿಸಲು ಉದ್ದೇಶಿಸಲಾಗಿದೆ’ ಎಂದರು.