<p><strong>ಯಾದಗಿರಿ</strong>: ‘ನಗರದ ಅಮರ ಲೇಔಟ್ನಲ್ಲಿ ಪಲ್ಲಾಸ್ ಮಲ್ಟಿ ಸ್ಪೆಷಲಿಸ್ಟ್ಆಸ್ಪತ್ರೆ ಉದ್ಘಾಟನೆ ಸಮಾರಂಭ ನವೆಂಬರ್ 26ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ’ ಎಂದು ಆಸ್ಪತ್ರೆಯ ಡಾ. ಪಲ್ಲಾ ಅಭಿಷೇಕರೆಡ್ಡಿ ಹೇಳಿದರು.<br /><br />‘ಕಾರ್ಯಕ್ರಮಕ್ಕೆ ಗುರುಮಠಕಲ್ ಖಾಸಾ ಮಠದ ಪೀಠಾಧಿಪತಿ ಶಾಂತವೀರ ಸ್ವಾಮೀಜಿ, ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ, ನಾಗನಗೌಡ ಕಂದಕೂರ, ಮಾಜಿ ಶಾಸಕರಾದ ಡಾ.ಎ.ಬಿ.ಮಾಲಕರೆಡ್ಡಿ, ಡಾ.ವೀರಬಸವಂತರೆಡ್ಡಿ ಮುದ್ನಾಳ, ಡಾ.ಎಸ್ವೀರಭದ್ರಪ್ಪ ಅವರು ಆಗಮಿಸಲಿದ್ದಾರೆ’ ಎಂದು ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.<br /><br />‘ಕರ್ನಾಟಕದ ಆಸ್ಪತ್ರೆಗಳಲ್ಲಿ ಲೇಜರ್ ಶಸ್ತ್ರ ಚಿಕಿತ್ಸೆ ಲಭ್ಯವಿಲ್ಲ. ಜಿಲ್ಲೆಯ ಜನರು ಮೂಲವ್ಯಾಧಿ, ಫಿಸ್ತೂಲಾ ಇನ್ನಿತರ ರೋಗಗಳ ಶಸ್ತ್ರಚಿಕಿತ್ಸೆಗಾಗಿ ದೂರದ ಹೈದರಾಬಾದ್, ಬೆಂಗಳೂರು, ಸೊಲ್ಲಾಪುರ ನಗರದ ಆಸ್ಪತ್ರೆಗಳಿಗೆ ತೆರಳುತ್ತಾರೆ. ಹೀಗಾಗಿ ನಮ್ಮಲ್ಲಿಯೇ ಆ ಸೌಲಭ್ಯ ಕಲ್ಪಿಸಲು ಉದ್ದೇಶಿಸಲಾಗಿದೆ’ ಎಂದರು.</p>.<p>‘ಶಸ್ತ್ರಚಿಕಿತ್ಸಾ ವೈದ್ಯನಾಗಿ ಕಲಬುರ್ಗಿಯ ಸರ್ಕಾರಿ ಜಿಮ್ಸ್ ಹಾಗೂ ಚಿರಾಗ್ ಆಸ್ಪತ್ರೆಯಲ್ಲಿ 2 ವರ್ಷ, ಬೆಂಗಳೂರು, ಗುರುಗಾಂವ್ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಕೆಲಸ ಮಾಡಿದ್ದೇನೆ. ಯಾದಗಿರಿ, ಗುರುಮಠಕಲ್, ಶಹಾಪುರ ಆಸ್ಪತ್ರೆಗಳಲ್ಲಿ 2 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ’ ಎಂದು ತಿಳಿಸಿದರು.</p>.<p>‘ಮುಂದಿನ ವರ್ಷದಲ್ಲಿ ಸ್ನೇಹಿತ ವೈದ್ಯರ ಸಹಕಾರದಿಂದ ಗ್ರಾಮೀಣ ಭಾಗದಲ್ಲಿ ಆರೋಗ್ಯ ತಪಾಸಣೆ ಉಚಿತ ಶಿಬಿರ ಹಮ್ಮಿಕೊಳ್ಳುವ ಯೋಜನೆ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಡಾ. ಪಲ್ಲಾ ಪೂರ್ಣಿಮಾ, ಜಗನ್ನಾಥರೆಡ್ಡಿ ಸಂಬರ್, ಪಲ್ಲಾ ಲಕ್ಷ್ಮೀಕಾಂತರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ‘ನಗರದ ಅಮರ ಲೇಔಟ್ನಲ್ಲಿ ಪಲ್ಲಾಸ್ ಮಲ್ಟಿ ಸ್ಪೆಷಲಿಸ್ಟ್ಆಸ್ಪತ್ರೆ ಉದ್ಘಾಟನೆ ಸಮಾರಂಭ ನವೆಂಬರ್ 26ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ’ ಎಂದು ಆಸ್ಪತ್ರೆಯ ಡಾ. ಪಲ್ಲಾ ಅಭಿಷೇಕರೆಡ್ಡಿ ಹೇಳಿದರು.<br /><br />‘ಕಾರ್ಯಕ್ರಮಕ್ಕೆ ಗುರುಮಠಕಲ್ ಖಾಸಾ ಮಠದ ಪೀಠಾಧಿಪತಿ ಶಾಂತವೀರ ಸ್ವಾಮೀಜಿ, ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ, ನಾಗನಗೌಡ ಕಂದಕೂರ, ಮಾಜಿ ಶಾಸಕರಾದ ಡಾ.ಎ.ಬಿ.ಮಾಲಕರೆಡ್ಡಿ, ಡಾ.ವೀರಬಸವಂತರೆಡ್ಡಿ ಮುದ್ನಾಳ, ಡಾ.ಎಸ್ವೀರಭದ್ರಪ್ಪ ಅವರು ಆಗಮಿಸಲಿದ್ದಾರೆ’ ಎಂದು ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.<br /><br />‘ಕರ್ನಾಟಕದ ಆಸ್ಪತ್ರೆಗಳಲ್ಲಿ ಲೇಜರ್ ಶಸ್ತ್ರ ಚಿಕಿತ್ಸೆ ಲಭ್ಯವಿಲ್ಲ. ಜಿಲ್ಲೆಯ ಜನರು ಮೂಲವ್ಯಾಧಿ, ಫಿಸ್ತೂಲಾ ಇನ್ನಿತರ ರೋಗಗಳ ಶಸ್ತ್ರಚಿಕಿತ್ಸೆಗಾಗಿ ದೂರದ ಹೈದರಾಬಾದ್, ಬೆಂಗಳೂರು, ಸೊಲ್ಲಾಪುರ ನಗರದ ಆಸ್ಪತ್ರೆಗಳಿಗೆ ತೆರಳುತ್ತಾರೆ. ಹೀಗಾಗಿ ನಮ್ಮಲ್ಲಿಯೇ ಆ ಸೌಲಭ್ಯ ಕಲ್ಪಿಸಲು ಉದ್ದೇಶಿಸಲಾಗಿದೆ’ ಎಂದರು.</p>.<p>‘ಶಸ್ತ್ರಚಿಕಿತ್ಸಾ ವೈದ್ಯನಾಗಿ ಕಲಬುರ್ಗಿಯ ಸರ್ಕಾರಿ ಜಿಮ್ಸ್ ಹಾಗೂ ಚಿರಾಗ್ ಆಸ್ಪತ್ರೆಯಲ್ಲಿ 2 ವರ್ಷ, ಬೆಂಗಳೂರು, ಗುರುಗಾಂವ್ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಕೆಲಸ ಮಾಡಿದ್ದೇನೆ. ಯಾದಗಿರಿ, ಗುರುಮಠಕಲ್, ಶಹಾಪುರ ಆಸ್ಪತ್ರೆಗಳಲ್ಲಿ 2 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ’ ಎಂದು ತಿಳಿಸಿದರು.</p>.<p>‘ಮುಂದಿನ ವರ್ಷದಲ್ಲಿ ಸ್ನೇಹಿತ ವೈದ್ಯರ ಸಹಕಾರದಿಂದ ಗ್ರಾಮೀಣ ಭಾಗದಲ್ಲಿ ಆರೋಗ್ಯ ತಪಾಸಣೆ ಉಚಿತ ಶಿಬಿರ ಹಮ್ಮಿಕೊಳ್ಳುವ ಯೋಜನೆ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಡಾ. ಪಲ್ಲಾ ಪೂರ್ಣಿಮಾ, ಜಗನ್ನಾಥರೆಡ್ಡಿ ಸಂಬರ್, ಪಲ್ಲಾ ಲಕ್ಷ್ಮೀಕಾಂತರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>