<p><strong>ಯಾದಗಿರಿ: </strong>ಪ್ರೀತಿಗೆ ಪೋಷಕರು ಅಡ್ಡಿ ವ್ಯಕ್ತಪಡಿಸಿದ್ದರಿಂದ ತಾಲ್ಲೂಕಿನ ಗೊಂದಡಗಿ ಗ್ರಾಮದ ಪ್ರೇಮಿಗಳಿಬ್ಬರು ಸೆಲ್ಫಿ ವಿಡಿಯೊದ ಮೂಲಕ ಪೋಷಕರ ಕ್ಷಮೆಯಾಚಿಸಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಗೊಂದಡಗಿ ಗ್ರಾಮದ ಹನುಮಂತ (25) ಮತ್ತು ಮಹಾದೇವಿ (17) ಆತ್ಮಹತ್ಯೆ ಮಾಡಿಕೊಂಡವರು.ಆಟೊಚಾಲಕನಾಗಿದ್ದ ಹನುಮಂತ ಮತ್ತು ಮಹಾದೇವಿ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಅನ್ಯ ಜಾತಿಯವರಾಗಿದ್ದ ಕಾರಣ ಪೋಷಕರು ಅಡ್ಡಿಪಡಿಸಿದ್ದರು ಎನ್ನಲಾಗಿದೆ.</p>.<p>‘ವಾರದ ಹಿಂದೆ ಪ್ರೀತಿಯ ವಿಷಯ ಮಹಾದೇವಿಯ ಮನೆಯವರಿಗೆ ತಿಳಿದಿತ್ತು. ಹನುಮಂತನನ್ನು ಮರೆತುಬಿಡುವಂತೆ ಮಹಾದೇವಿಯನ್ನು ಒತ್ತಾಯಿಸಿದ್ದರು. ನಂತರ ಸೋದರ ಮಾವನ ಜೊತೆಗೆ ವಿವಾಹ ಮಾಡಲು ತೀರ್ಮಾನಿಸಲಾಗಿತ್ತು. ಹೀಗಾಗಿ ಈ ಪ್ರೇಮಿಗಳು ಸೆಪ್ಟೆಂಬರ್ 8ರಂದು ಮಂಗಳವಾರ ಮನೆ ಬಿಟ್ಟು ತೆರಳಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಇಬ್ಬರ ಮೃತದೇಹ ಗ್ರಾಮದ ಹೊರವಲಯದಲ್ಲಿರುವ ಬಾವಿಯಲ್ಲಿ ಗುರುವಾರ ಪತ್ತೆಯಾಗಿವೆ. ಆತ್ಮಹತ್ಯೆ ಮಾಡಿಕೊಳ್ಳುವಮುನ್ನ ಇವರು ಮಾಡಿದ ಸೆಲ್ಫಿ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.</p>.<p>ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>ಪ್ರೀತಿಗೆ ಪೋಷಕರು ಅಡ್ಡಿ ವ್ಯಕ್ತಪಡಿಸಿದ್ದರಿಂದ ತಾಲ್ಲೂಕಿನ ಗೊಂದಡಗಿ ಗ್ರಾಮದ ಪ್ರೇಮಿಗಳಿಬ್ಬರು ಸೆಲ್ಫಿ ವಿಡಿಯೊದ ಮೂಲಕ ಪೋಷಕರ ಕ್ಷಮೆಯಾಚಿಸಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಗೊಂದಡಗಿ ಗ್ರಾಮದ ಹನುಮಂತ (25) ಮತ್ತು ಮಹಾದೇವಿ (17) ಆತ್ಮಹತ್ಯೆ ಮಾಡಿಕೊಂಡವರು.ಆಟೊಚಾಲಕನಾಗಿದ್ದ ಹನುಮಂತ ಮತ್ತು ಮಹಾದೇವಿ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಅನ್ಯ ಜಾತಿಯವರಾಗಿದ್ದ ಕಾರಣ ಪೋಷಕರು ಅಡ್ಡಿಪಡಿಸಿದ್ದರು ಎನ್ನಲಾಗಿದೆ.</p>.<p>‘ವಾರದ ಹಿಂದೆ ಪ್ರೀತಿಯ ವಿಷಯ ಮಹಾದೇವಿಯ ಮನೆಯವರಿಗೆ ತಿಳಿದಿತ್ತು. ಹನುಮಂತನನ್ನು ಮರೆತುಬಿಡುವಂತೆ ಮಹಾದೇವಿಯನ್ನು ಒತ್ತಾಯಿಸಿದ್ದರು. ನಂತರ ಸೋದರ ಮಾವನ ಜೊತೆಗೆ ವಿವಾಹ ಮಾಡಲು ತೀರ್ಮಾನಿಸಲಾಗಿತ್ತು. ಹೀಗಾಗಿ ಈ ಪ್ರೇಮಿಗಳು ಸೆಪ್ಟೆಂಬರ್ 8ರಂದು ಮಂಗಳವಾರ ಮನೆ ಬಿಟ್ಟು ತೆರಳಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಇಬ್ಬರ ಮೃತದೇಹ ಗ್ರಾಮದ ಹೊರವಲಯದಲ್ಲಿರುವ ಬಾವಿಯಲ್ಲಿ ಗುರುವಾರ ಪತ್ತೆಯಾಗಿವೆ. ಆತ್ಮಹತ್ಯೆ ಮಾಡಿಕೊಳ್ಳುವಮುನ್ನ ಇವರು ಮಾಡಿದ ಸೆಲ್ಫಿ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.</p>.<p>ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>