<p>ಸುರಪುರ: ‘ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಉಪನ್ಯಾಸಕರ ಜೊತೆಗೆ ಪಾಲಕರ ಸಹಕಾರವೂ ಮುಖ್ಯ’ ಎಂದು ಡಯಟ್ ನಿವೃತ್ತ ಉಪನ್ಯಾಸಕ ಮಲ್ಲಿಕಾರ್ಜುನ ಪಾಟೀಲ ಹೇಳಿದರು.</p>.<p>ಶರಣಬಸವ ಸ್ವಾತಂತ್ರ್ಯ ಪದವಿಪೂರ್ವ ಕಾಲೇಜಿನಲ್ಲಿ ಭಾನುವಾರ ಏರ್ಪಡಿಸಿದ್ದ ಪಾಲಕರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಉಪನ್ಯಾಸಕರು ಚೆನ್ನಾಗಿ ಪಾಠ ಮಾಡುತ್ತಾರೆ. ಆದರೆ ಬಹುತೇಕ ಪಾಲಕರು ಆ ಪಾಠವನ್ನು ಮನನ ಮಾಡಿಕೊಳ್ಳಲು ಬಿಡುವುದಿಲ್ಲ. ಮನೆಗೆಲಸ ಹಚ್ಚುವುದು ಇಲ್ಲವೇ ಟಿವಿ ನೋಡಲು ಅವಕಾಶ ಮಾಡಿಕೊಡುವುದು ಮಾಡುತ್ತಾರೆ. ಇದರಿಂದ ಮಕ್ಕಳ ಶೈಕ್ಷಣಿಕ ಪ್ರಗತಿ ಆಗುವುದಿಲ್ಲ’ ಎಂದರು.</p>.<p>‘ಈಗ ಕಾಲೇಜಿನಲ್ಲಿ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಇದೇ ಮೊದಲ ಬಾರಿಗೆ ಕ್ರೀಡೋ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ಕಲಿಕಾ ವಿಧಾನಗಳಲ್ಲಿ ಅಮೂಲಾಗ್ರ ಬದಲಾವಣೆ ತರುತ್ತಿದೆ. ಇದರಿಂದ ಫಲಿತಾಂಶ ಹೆಚ್ಚಳ, ಹಿಂದುಳಿದ ವಿದ್ಯಾರ್ಥಿಗಳ ಸುಧಾರಣೆಯಾಗುತ್ತದೆ’ ಎಂದರು.</p>.<p>ದ್ವಿತೀಯ ಪಿಯುಸಿಯಲ್ಲಿ ಶೇ 97.67 ಅಂಕ ಪಡೆದ ಮತ್ತು ಜೆಇಇ ಪರೀಕ್ಷೆಯಲ್ಲಿ 1197ನೇ ರ್ಯಾಂಕ್ ಪಡೆದ ಕಾಲೇಜಿನ ವಿದ್ಯಾರ್ಥಿ ರಾಣಿ ಯಶೋಧಾ ರಾಜಾ ಅಪ್ಪಾರಾವನಾಯಕ ಅವರನ್ನು ಸನ್ಮಾನಿಸಲಾಯಿತು.</p>.<p>ಪ್ರಾಚಾರ್ಯ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಪಾಲಕರು, ಮಕ್ಕಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸುರಪುರ: ‘ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಉಪನ್ಯಾಸಕರ ಜೊತೆಗೆ ಪಾಲಕರ ಸಹಕಾರವೂ ಮುಖ್ಯ’ ಎಂದು ಡಯಟ್ ನಿವೃತ್ತ ಉಪನ್ಯಾಸಕ ಮಲ್ಲಿಕಾರ್ಜುನ ಪಾಟೀಲ ಹೇಳಿದರು.</p>.<p>ಶರಣಬಸವ ಸ್ವಾತಂತ್ರ್ಯ ಪದವಿಪೂರ್ವ ಕಾಲೇಜಿನಲ್ಲಿ ಭಾನುವಾರ ಏರ್ಪಡಿಸಿದ್ದ ಪಾಲಕರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಉಪನ್ಯಾಸಕರು ಚೆನ್ನಾಗಿ ಪಾಠ ಮಾಡುತ್ತಾರೆ. ಆದರೆ ಬಹುತೇಕ ಪಾಲಕರು ಆ ಪಾಠವನ್ನು ಮನನ ಮಾಡಿಕೊಳ್ಳಲು ಬಿಡುವುದಿಲ್ಲ. ಮನೆಗೆಲಸ ಹಚ್ಚುವುದು ಇಲ್ಲವೇ ಟಿವಿ ನೋಡಲು ಅವಕಾಶ ಮಾಡಿಕೊಡುವುದು ಮಾಡುತ್ತಾರೆ. ಇದರಿಂದ ಮಕ್ಕಳ ಶೈಕ್ಷಣಿಕ ಪ್ರಗತಿ ಆಗುವುದಿಲ್ಲ’ ಎಂದರು.</p>.<p>‘ಈಗ ಕಾಲೇಜಿನಲ್ಲಿ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಇದೇ ಮೊದಲ ಬಾರಿಗೆ ಕ್ರೀಡೋ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ಕಲಿಕಾ ವಿಧಾನಗಳಲ್ಲಿ ಅಮೂಲಾಗ್ರ ಬದಲಾವಣೆ ತರುತ್ತಿದೆ. ಇದರಿಂದ ಫಲಿತಾಂಶ ಹೆಚ್ಚಳ, ಹಿಂದುಳಿದ ವಿದ್ಯಾರ್ಥಿಗಳ ಸುಧಾರಣೆಯಾಗುತ್ತದೆ’ ಎಂದರು.</p>.<p>ದ್ವಿತೀಯ ಪಿಯುಸಿಯಲ್ಲಿ ಶೇ 97.67 ಅಂಕ ಪಡೆದ ಮತ್ತು ಜೆಇಇ ಪರೀಕ್ಷೆಯಲ್ಲಿ 1197ನೇ ರ್ಯಾಂಕ್ ಪಡೆದ ಕಾಲೇಜಿನ ವಿದ್ಯಾರ್ಥಿ ರಾಣಿ ಯಶೋಧಾ ರಾಜಾ ಅಪ್ಪಾರಾವನಾಯಕ ಅವರನ್ನು ಸನ್ಮಾನಿಸಲಾಯಿತು.</p>.<p>ಪ್ರಾಚಾರ್ಯ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಪಾಲಕರು, ಮಕ್ಕಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>