ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುರುಮಠಕಲ್: ನಾರಾಯಣಪೇಟದಲ್ಲಿ ಸೇಡಂ ಘಟಕದ ಬಸ್ ಪಲ್ಟಿ, 20 ಜನರಿಗೆ ಗಾಯ

Last Updated 4 ಡಿಸೆಂಬರ್ 2021, 6:49 IST
ಅಕ್ಷರ ಗಾತ್ರ

ಗುರುಮಠಕಲ್ (ಯಾದಗಿರಿ ಜಿಲ್ಲೆ): ಕಲಬುರಗಿ ಜಿಲ್ಲೆಯ ಸೇಡಂ ಬಸ್ ಘಟಕದ ಸೇಡಂ-ಹೈದರಾಬಾದ್ ಮಾರ್ಗದ ಕೆ.ಎ.32 ಎಫ್ 2419 ಬಸ್ ಪಲ್ಟಿಯಾಗಿ 20 ಜನರಿಗೆ ಗಾಯಗಳಾದ ಘಟನೆ ಶನಿವಾರ ಜರುಗಿದೆ.

ಶನಿವಾರ ಬೆಳಿಗ್ಗೆ ಸೇಡಂ ನಗರದಿಂದ ಗುರುಮಠಕಲ್ ತಾಲ್ಲೂಕಿನ ಚಂಡರಿಕಿ ಮಾರ್ಗವಾಗಿ ಹೈದರಾಬಾದ್‌ ನಗರಕ್ಕೆ ತೆರಳುವಾಗ ತೆಲಂಗಾಣ ರಾಜ್ಯದ ನಾರಾಯಣಪೇಟ ನಗರದ ಹೊರವಲಯದಲ್ಲಿ ಪಲ್ಟಿಯಾಗಿದ್ದು, 20 ಜನರಿಗೆ ಗಾಯಗಳಾಗಿವೆ.

ಗಾಯಾಳುಗಳಿಗೆ ನಾರಾಯಣಪೇಟ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಸೇಡಂ ಹಾಗೂ ಗುರುಮಠಕಲ್ ಬಸ್ ಘಟಕಗಳ ವ್ಯವಸ್ಥಾಪಕರಿಗೆ ಕರೆ ಮಾಡಿದಾಗ ಸಂಪರ್ಕ ಸಾಧ್ಯವಾಗುತ್ತಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT