<p><strong>ಹೋರುಂಚ (ಯರಗೋಳ):</strong> ಗ್ರಾಮದಲ್ಲಿ ಕಳೆದ 15 ದಿನಗಳಿಂದ ಬಿಡದೆ ಸುರಿಯುತ್ತಿರುವ ಮಳೆಯಿಂದ ಗ್ರಾಮದ ರಸ್ತೆ ಮೇಲೆ ಮಳೆ ನೀರು ಸಂಗ್ರಹವಾಗಿ ರಸ್ತೆಗಳು ಕೆಸರುಮಯವಾಗಿವೆ. ಗ್ರಾಮಸ್ಥರಿಗೆ ದಿನನಿತ್ಯದ ಸಂಚಾರಕ್ಕೆ ತೊಂದರೆಯಾಗುತ್ತಿದೆ.</p>.<p>ಗ್ರಾಮಸ್ಥರು ಸೇರಿ ಭಾನುವಾರ ಕೆಸರು ಗದ್ದೆಯಾದ ರಸ್ತೆ ಮೇಲೆ ಭತ್ತ ನಾಟಿ ಮಾಡುವ ಮೂಲಕ ವಿನೂತನ ಪ್ರತಿಭಟನೆ ಮಾಡಿ ತಮ್ಮ ಆಕ್ರೋಶ ಹೊರಹಾಕಿದರು.</p>.<p>ಅಲ್ಲಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಹೋರುಂಚ ಗ್ರಾಮದಲ್ಲಿ ನಾಲ್ಕು ಜನ, ತಾಂಡದಲ್ಲಿ ಇಬ್ಬರು ಗ್ರಾಮ ಪಂಚಾಯಿತಿ ಚುನಾಯಿತ ಸದಸ್ಯರಿದ್ದು, 800 ಜನಸಂಖ್ಯೆ ಇದೆ. ಸಾರ್ವಜನಿಕರು ನಿತ್ಯದ ಕೆಲಸ ಕಾರ್ಯಗಳಿಗೆ ಯಾದಗಿರಿ ಬರಬೇಕಾದರೆ ಹೋರುಂಚ -ಅಲ್ಲಿಪುರ ಮಾರ್ಗವಾಗಿ ಬರುತ್ತಾರೆ. ಹೋರುಂಚ ತಾಂಡದಿಂದ ಹೋರುಂಚ ಗ್ರಾಮಕ್ಕೆ 3 ಕಿಲೋಮೀಟರ್ ಅಂತರವಿದ್ದು, ರಸ್ತೆ ಮೇಲಿನ ಡಾಂಬರ್ ಸಂಪೂರ್ಣ ಕಿತ್ತು ಹೋಗಿದ್ದು, ತಗ್ಗುಗಳು ಬಿದ್ದು ಮಳೆ ನೀರು ಸಂಗ್ರಹವಾಗುತ್ತಿದೆ.</p>.<p>‘ಬೈಕ್, ಆಟೊಗಳ ಮೂಲಕ ಪ್ರಯಾಣಿಸುವಾಗ ಹಲವು ಬಾರಿ ಅಪಘಾತಗಳು ಸಂಭವಿಸಿವೆ. ಇದರಿಂದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಹೋಗಲು ಭಯಪಡುತ್ತಿದ್ದು, ಜೀವ ಕೈಯಲ್ಲಿ ಹಿಡಿದು ಸಂಚಾರ ಮಾಡಬೇಕಾದ ಅನಿವಾರ್ಯತೆ ಇದೆ. ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ, ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದರೂ ರಸ್ತೆ ದುರಸ್ತಿ ಮಾಡುತ್ತಿಲ್ಲ’ ಎನ್ನುವುದು ಗ್ರಾಮಸ್ಥರು.</p>.<p>ಸಾಮಾಜಿಕ ಜಾಲತಾಣಗಳಲ್ಲಿ ರಸ್ತೆ ಮೇಲೆ ಗ್ರಾಮಸ್ಥರು ಭತ್ತ ನಾಟಿ ಮಾಡುವ ದೃಶ್ಯಗಳು ಹರಿದಾಡುತ್ತಿವೆ.</p>.<div><blockquote>ಹದಗೆಟ್ಟ ರಸ್ತೆಯ ಸ್ಥಳ ವೀಕ್ಷಣೆ ಮಾಡಿ ಗ್ರಾಮ ಪಂಚಾಯತಿ ಅನುದಾನದಲ್ಲಿ ಇತಿಮಿತಿಯಲ್ಲಿ ದುರಸ್ತಿ ಮಾಡಲಾಗುವುದು </blockquote><span class="attribution">ಶರಣಪ್ಪ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೋರುಂಚ (ಯರಗೋಳ):</strong> ಗ್ರಾಮದಲ್ಲಿ ಕಳೆದ 15 ದಿನಗಳಿಂದ ಬಿಡದೆ ಸುರಿಯುತ್ತಿರುವ ಮಳೆಯಿಂದ ಗ್ರಾಮದ ರಸ್ತೆ ಮೇಲೆ ಮಳೆ ನೀರು ಸಂಗ್ರಹವಾಗಿ ರಸ್ತೆಗಳು ಕೆಸರುಮಯವಾಗಿವೆ. ಗ್ರಾಮಸ್ಥರಿಗೆ ದಿನನಿತ್ಯದ ಸಂಚಾರಕ್ಕೆ ತೊಂದರೆಯಾಗುತ್ತಿದೆ.</p>.<p>ಗ್ರಾಮಸ್ಥರು ಸೇರಿ ಭಾನುವಾರ ಕೆಸರು ಗದ್ದೆಯಾದ ರಸ್ತೆ ಮೇಲೆ ಭತ್ತ ನಾಟಿ ಮಾಡುವ ಮೂಲಕ ವಿನೂತನ ಪ್ರತಿಭಟನೆ ಮಾಡಿ ತಮ್ಮ ಆಕ್ರೋಶ ಹೊರಹಾಕಿದರು.</p>.<p>ಅಲ್ಲಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಹೋರುಂಚ ಗ್ರಾಮದಲ್ಲಿ ನಾಲ್ಕು ಜನ, ತಾಂಡದಲ್ಲಿ ಇಬ್ಬರು ಗ್ರಾಮ ಪಂಚಾಯಿತಿ ಚುನಾಯಿತ ಸದಸ್ಯರಿದ್ದು, 800 ಜನಸಂಖ್ಯೆ ಇದೆ. ಸಾರ್ವಜನಿಕರು ನಿತ್ಯದ ಕೆಲಸ ಕಾರ್ಯಗಳಿಗೆ ಯಾದಗಿರಿ ಬರಬೇಕಾದರೆ ಹೋರುಂಚ -ಅಲ್ಲಿಪುರ ಮಾರ್ಗವಾಗಿ ಬರುತ್ತಾರೆ. ಹೋರುಂಚ ತಾಂಡದಿಂದ ಹೋರುಂಚ ಗ್ರಾಮಕ್ಕೆ 3 ಕಿಲೋಮೀಟರ್ ಅಂತರವಿದ್ದು, ರಸ್ತೆ ಮೇಲಿನ ಡಾಂಬರ್ ಸಂಪೂರ್ಣ ಕಿತ್ತು ಹೋಗಿದ್ದು, ತಗ್ಗುಗಳು ಬಿದ್ದು ಮಳೆ ನೀರು ಸಂಗ್ರಹವಾಗುತ್ತಿದೆ.</p>.<p>‘ಬೈಕ್, ಆಟೊಗಳ ಮೂಲಕ ಪ್ರಯಾಣಿಸುವಾಗ ಹಲವು ಬಾರಿ ಅಪಘಾತಗಳು ಸಂಭವಿಸಿವೆ. ಇದರಿಂದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಹೋಗಲು ಭಯಪಡುತ್ತಿದ್ದು, ಜೀವ ಕೈಯಲ್ಲಿ ಹಿಡಿದು ಸಂಚಾರ ಮಾಡಬೇಕಾದ ಅನಿವಾರ್ಯತೆ ಇದೆ. ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ, ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದರೂ ರಸ್ತೆ ದುರಸ್ತಿ ಮಾಡುತ್ತಿಲ್ಲ’ ಎನ್ನುವುದು ಗ್ರಾಮಸ್ಥರು.</p>.<p>ಸಾಮಾಜಿಕ ಜಾಲತಾಣಗಳಲ್ಲಿ ರಸ್ತೆ ಮೇಲೆ ಗ್ರಾಮಸ್ಥರು ಭತ್ತ ನಾಟಿ ಮಾಡುವ ದೃಶ್ಯಗಳು ಹರಿದಾಡುತ್ತಿವೆ.</p>.<div><blockquote>ಹದಗೆಟ್ಟ ರಸ್ತೆಯ ಸ್ಥಳ ವೀಕ್ಷಣೆ ಮಾಡಿ ಗ್ರಾಮ ಪಂಚಾಯತಿ ಅನುದಾನದಲ್ಲಿ ಇತಿಮಿತಿಯಲ್ಲಿ ದುರಸ್ತಿ ಮಾಡಲಾಗುವುದು </blockquote><span class="attribution">ಶರಣಪ್ಪ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>