ಕಳೆದ ಒಂದು ವಾರದಿಂದ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಐಸೋಲೇಶನ್ ವಾರ್ಡ್ಗೆ ದಾಖಲು ಮಾಡಲಾಗಿದೆ. ಕಳೆದ ನಾಲ್ಕು ದಿನಗಳಿಂದ ಕಲಬುರ್ಗಿಯ ಖಾಸಗಿ ಆಸ್ಪತ್ರೆಯಲ್ಲಿ ಗುರುಮಠಕಲ್ ತಾಲ್ಲೂಕಿನ ಚಿಂತನಹಳ್ಳಿ ಗ್ರಾಮದವರು ಚಿಕಿತ್ಸೆ ಪಡೆಯುತ್ತಿದ್ದರು. ಸ್ವ್ಯಾಬ್ ಪಡೆದು ಕಲಬುರ್ಗಿ ಪ್ರಯೋಗಾಲಯಕ್ಕೆ ವೈದ್ಯರು ಕಳುಹಿಸಿದ್ದಾರೆ. ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿರುವ ಕೊರೊನಾ ವಿಶೇಷ ವಾರ್ಡ್ಗೆ ಮೊದಲ ವ್ಯಕ್ತಿ ದಾಖಲಾಗಿದ್ದಾರೆ.