<p><strong>ಸುರಪುರ:</strong> ‘ಪುಸ್ತಕಗಳನ್ನುಅಭ್ಯಾಸ ಮಾಡಿ ಜ್ಞಾನಾರ್ಜನೆ ಬೆಳೆಸಿಕೊಳ್ಳುವುದರಿಂದ ವ್ಯಕ್ತಿತ್ವ ವಿಕಸನವಾಗುತ್ತದೆ’ ಎಂದು ಕನ್ನಡ ಉಪನ್ಯಾಸಕ ಡಾ.ಹಳ್ಳೆಪ್ಪ ಅಭಿಪ್ರಾಯಿಸಿದರು.</p>.<p>ನಗರದ ಜನನಿ ಮಹಿಳಾ ಕಾಲೇಜಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ವತಿಯಿಂದ ಜಾಣ-ಜಾಣೆಯರ ಬಳಗ ಮಾಲಿಕೆ-2 ರ ಅಡಿ ಶುಕ್ರವಾರ ಆಯೋಜಿಸಿದ್ದ ಪುಸ್ತಕ ಪ್ರಕಾಶನ ಕರಡಚ್ಚು ತಿದ್ದುವುದರ ಬಗ್ಗೆ ಸ್ಥಳೀಯ ಪ್ರಕಾಶಕರೊಂದಿಗೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಪುಸ್ತಕಗಳ ಅಧ್ಯಯನದಿಂದ ನೈತಿಕ ಬಲ, ವ್ಯಕ್ತಿತ್ವದ ಬೆಳವಣಿಗೆ ಜತೆಗೆ ಜಾಗತಿಕ ಚಿಂತನೆ ಬೆಳೆಯಲು ಸಾಧ್ಯವಾಗುತ್ತದೆ.ಹೀಗಾಗಿವಿದ್ಯಾರ್ಥಿಗಳು ಪುಸ್ತಕಗಳ ಅಧ್ಯಯನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು’ ಎಂದು ಸಲಹೆ ನೀಡಿದರು.</p>.<p>ಪ್ರಾಂಶುಪಾಲೆ ಬಸವರಾಜೇಶ್ವರಿ ದೇವತ್ಕಲ್ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ವಿದ್ಯಾರ್ಥಿಗಳು ಮುಂದಿನ ಸ್ನಾತಕೋತ್ತರ ಅಧ್ಯಯನ ಸಂದರ್ಭದಲ್ಲಿ ಸಾಹಿತ್ಯಿಕ ಕೃತಿಗಳು ಬಹಳ ಸಹಕಾರಿಯಾಗುತ್ತವೆ’ ಎಂದು ಹೇಳಿದರು.</p>.<p>ಉಪನ್ಯಾಸಕರಾದ ಡಾ. ಆದಿಶೇಷ ನೀಲಗಾರ, ಅಂಬ್ರೇಶ ಚಲ್ಲಾರ, ತಿರುಪತಿ ಕೆಂಭಾವಿ, ಸುವರ್ಣ ಅಂಟೋಳಿ, ಶಿವಕುಮಾರ ಕ್ವಾಟಿ ಇದ್ದರು.ಉಪನ್ಯಾಸಕ ಬೀರಲಿಂಗ ನಿರೂಪಿಸಿದರು. ವಿದ್ಯಾರ್ಥಿನಿ ಕರಿಷ್ಮಾ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ:</strong> ‘ಪುಸ್ತಕಗಳನ್ನುಅಭ್ಯಾಸ ಮಾಡಿ ಜ್ಞಾನಾರ್ಜನೆ ಬೆಳೆಸಿಕೊಳ್ಳುವುದರಿಂದ ವ್ಯಕ್ತಿತ್ವ ವಿಕಸನವಾಗುತ್ತದೆ’ ಎಂದು ಕನ್ನಡ ಉಪನ್ಯಾಸಕ ಡಾ.ಹಳ್ಳೆಪ್ಪ ಅಭಿಪ್ರಾಯಿಸಿದರು.</p>.<p>ನಗರದ ಜನನಿ ಮಹಿಳಾ ಕಾಲೇಜಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ವತಿಯಿಂದ ಜಾಣ-ಜಾಣೆಯರ ಬಳಗ ಮಾಲಿಕೆ-2 ರ ಅಡಿ ಶುಕ್ರವಾರ ಆಯೋಜಿಸಿದ್ದ ಪುಸ್ತಕ ಪ್ರಕಾಶನ ಕರಡಚ್ಚು ತಿದ್ದುವುದರ ಬಗ್ಗೆ ಸ್ಥಳೀಯ ಪ್ರಕಾಶಕರೊಂದಿಗೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಪುಸ್ತಕಗಳ ಅಧ್ಯಯನದಿಂದ ನೈತಿಕ ಬಲ, ವ್ಯಕ್ತಿತ್ವದ ಬೆಳವಣಿಗೆ ಜತೆಗೆ ಜಾಗತಿಕ ಚಿಂತನೆ ಬೆಳೆಯಲು ಸಾಧ್ಯವಾಗುತ್ತದೆ.ಹೀಗಾಗಿವಿದ್ಯಾರ್ಥಿಗಳು ಪುಸ್ತಕಗಳ ಅಧ್ಯಯನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು’ ಎಂದು ಸಲಹೆ ನೀಡಿದರು.</p>.<p>ಪ್ರಾಂಶುಪಾಲೆ ಬಸವರಾಜೇಶ್ವರಿ ದೇವತ್ಕಲ್ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ವಿದ್ಯಾರ್ಥಿಗಳು ಮುಂದಿನ ಸ್ನಾತಕೋತ್ತರ ಅಧ್ಯಯನ ಸಂದರ್ಭದಲ್ಲಿ ಸಾಹಿತ್ಯಿಕ ಕೃತಿಗಳು ಬಹಳ ಸಹಕಾರಿಯಾಗುತ್ತವೆ’ ಎಂದು ಹೇಳಿದರು.</p>.<p>ಉಪನ್ಯಾಸಕರಾದ ಡಾ. ಆದಿಶೇಷ ನೀಲಗಾರ, ಅಂಬ್ರೇಶ ಚಲ್ಲಾರ, ತಿರುಪತಿ ಕೆಂಭಾವಿ, ಸುವರ್ಣ ಅಂಟೋಳಿ, ಶಿವಕುಮಾರ ಕ್ವಾಟಿ ಇದ್ದರು.ಉಪನ್ಯಾಸಕ ಬೀರಲಿಂಗ ನಿರೂಪಿಸಿದರು. ವಿದ್ಯಾರ್ಥಿನಿ ಕರಿಷ್ಮಾ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>