<p><strong>ಯಾದಗಿರಿ:</strong> ‘ಆರೋಗ್ಯ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಫಾರ್ಮಸಿಸ್ಟ್ ಅವರ ಪಾತ್ರ ಅತಿಮಹತ್ವದ್ದಾಗಿದೆ’ ಎಂದು ಜಿಪಂ ಸಿಇಒ ಲವೀಶ್ ಓರ್ಡಿಯಾ ಹೇಳಿದರು.</p>.<p>ನಗರದ ಡಿಎಚ್ಒ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಸಣ್ಣಪುಟ್ಟ ರೋಗಗಳಿಗೆ ಇವರೇ ಪ್ರಥಮ ಚಿಕಿತ್ಸಾಕಾರರಾಗಿರುತ್ತಾರೆ. ಇದರಿಂದಾಗಿ ಆರೋಗ್ಯ ಸಂಸ್ಥೆಯ ಅವಿಭಾಜ್ಯ ಅಂಗವಾಗಿ ಕೆಲಸ ಮಾಡುತ್ತಿರುವುದು ಒಳ್ಳೆಯ ಸಂಗತಿ’ ಎಂದರು.</p>.<p>ಜಿಲ್ಲಾ ಸರ್ಜನ್ ಡಾ.ರಿಜ್ವಾನ್ ಆಫ್ರೀನ್ ಮಾತನಾಡಿ, ‘ಜನರ ಆರೋಗ್ಯ ಕಾಪಾಡುವಲ್ಲಿ ಫಾರ್ಮಸಿ ಅಧಿಕಾರಿಗಳ ಹೊಣೆಗಾರಿಕೆಯೂ ಕೂಡ ಅಷ್ಟೇ ಮುಖ್ಯವಾಗಿದೆ. ವೈಜ್ಞಾನಿಕ ಔಷಧಿಗಳ ಬೇಡಿಕೆಯನ್ನು ಸಲ್ಲಿಸಬೇಕು ಮತ್ತು ಅವುಗಳನ್ನು ಹಾಳಾಗಂತೆಯೇ ನೋಡಿಕೊಳ್ಳಬೇಕು’ ಎಂದರು.</p>.<p>ಡಿಎಚ್ಒ ಡಾ.ಮಹೇಶ ಬಿರಾದಾರ ಮಾತನಾಡಿ, ‘ನಮ್ಮಲ್ಲಿ ಬರುವ ರೋಗಿಗಳನ್ನು ಗೌರವದಿಂದ ನೋಡಿಕೊಂಡು ಅವರ ಕಾಯಿಲೆಗೆ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಅವರ ಆತ್ಮವಿಶ್ವಾಸ ಹೆಚ್ಚುವಂತೆ ನೋಡಕೊಳ್ಳಬೇಕು. ಪ್ರತಿಯೊಬ್ಬರು ಆರೋಗ್ಯ ಕಾಪಾಡುವಲ್ಲಿ ವಿಶೇಷ ಕಾಳಜಿ ವಹಿಸಬೇಕು’ ಎಂದರು.</p>.<p>ಸೇವಾ ನಿವೃತ್ತಿ ಹೊಂದಿದ ನಿರ್ಮಲಾ, ಪ್ರಕಾಶ ನೆಲ್ಲಗಿ, ಮಹ್ಮದ್ ಅಲಿ, ಶಾಂತಕುಮಾರ ಮತ್ತು ಫಾರ್ಮಸಿ ವಿಭಾಗದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಮಹ್ಮದ್ ಇಲಿಯಾಸ್, ಭೀಮನಗೌಡ ಅವರನ್ನು ಸನ್ಮಾನಿಸಲಾಯಿತು.</p>.<p>ಆರೋಗ್ಯ ಇಲಾಖೆ ಡಾ.ಶರಣಬಸಪ್ಪ ಗಣಜಲಖೇಡ, ಡಾ.ಎಂ.ಎಸ್. ಪಾಟೀಲ, ಡಾ.ಸಂಜೀವಕುಮಾರ, ಡಾ.ಮಲ್ಲಪ್ಪ, ಡಾ.ಪದ್ಮಾನಂದ, ಡಾ.ಜ್ಯೋತಿ ಕಟ್ಟಿಮನಿ, ಡಾ.ರಾಜಾ ವೆಂಕಟಪ್ಪ ನಾಯಕ್, ಡಾ.ಹಣಮಂತರೆಡ್ಡಿ, ಜಿಲ್ಲಾ ಫಾರ್ಮಸಿಸ್ಟ್ ಸಂಘದ ಪದಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ‘ಆರೋಗ್ಯ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಫಾರ್ಮಸಿಸ್ಟ್ ಅವರ ಪಾತ್ರ ಅತಿಮಹತ್ವದ್ದಾಗಿದೆ’ ಎಂದು ಜಿಪಂ ಸಿಇಒ ಲವೀಶ್ ಓರ್ಡಿಯಾ ಹೇಳಿದರು.</p>.<p>ನಗರದ ಡಿಎಚ್ಒ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಸಣ್ಣಪುಟ್ಟ ರೋಗಗಳಿಗೆ ಇವರೇ ಪ್ರಥಮ ಚಿಕಿತ್ಸಾಕಾರರಾಗಿರುತ್ತಾರೆ. ಇದರಿಂದಾಗಿ ಆರೋಗ್ಯ ಸಂಸ್ಥೆಯ ಅವಿಭಾಜ್ಯ ಅಂಗವಾಗಿ ಕೆಲಸ ಮಾಡುತ್ತಿರುವುದು ಒಳ್ಳೆಯ ಸಂಗತಿ’ ಎಂದರು.</p>.<p>ಜಿಲ್ಲಾ ಸರ್ಜನ್ ಡಾ.ರಿಜ್ವಾನ್ ಆಫ್ರೀನ್ ಮಾತನಾಡಿ, ‘ಜನರ ಆರೋಗ್ಯ ಕಾಪಾಡುವಲ್ಲಿ ಫಾರ್ಮಸಿ ಅಧಿಕಾರಿಗಳ ಹೊಣೆಗಾರಿಕೆಯೂ ಕೂಡ ಅಷ್ಟೇ ಮುಖ್ಯವಾಗಿದೆ. ವೈಜ್ಞಾನಿಕ ಔಷಧಿಗಳ ಬೇಡಿಕೆಯನ್ನು ಸಲ್ಲಿಸಬೇಕು ಮತ್ತು ಅವುಗಳನ್ನು ಹಾಳಾಗಂತೆಯೇ ನೋಡಿಕೊಳ್ಳಬೇಕು’ ಎಂದರು.</p>.<p>ಡಿಎಚ್ಒ ಡಾ.ಮಹೇಶ ಬಿರಾದಾರ ಮಾತನಾಡಿ, ‘ನಮ್ಮಲ್ಲಿ ಬರುವ ರೋಗಿಗಳನ್ನು ಗೌರವದಿಂದ ನೋಡಿಕೊಂಡು ಅವರ ಕಾಯಿಲೆಗೆ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಅವರ ಆತ್ಮವಿಶ್ವಾಸ ಹೆಚ್ಚುವಂತೆ ನೋಡಕೊಳ್ಳಬೇಕು. ಪ್ರತಿಯೊಬ್ಬರು ಆರೋಗ್ಯ ಕಾಪಾಡುವಲ್ಲಿ ವಿಶೇಷ ಕಾಳಜಿ ವಹಿಸಬೇಕು’ ಎಂದರು.</p>.<p>ಸೇವಾ ನಿವೃತ್ತಿ ಹೊಂದಿದ ನಿರ್ಮಲಾ, ಪ್ರಕಾಶ ನೆಲ್ಲಗಿ, ಮಹ್ಮದ್ ಅಲಿ, ಶಾಂತಕುಮಾರ ಮತ್ತು ಫಾರ್ಮಸಿ ವಿಭಾಗದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಮಹ್ಮದ್ ಇಲಿಯಾಸ್, ಭೀಮನಗೌಡ ಅವರನ್ನು ಸನ್ಮಾನಿಸಲಾಯಿತು.</p>.<p>ಆರೋಗ್ಯ ಇಲಾಖೆ ಡಾ.ಶರಣಬಸಪ್ಪ ಗಣಜಲಖೇಡ, ಡಾ.ಎಂ.ಎಸ್. ಪಾಟೀಲ, ಡಾ.ಸಂಜೀವಕುಮಾರ, ಡಾ.ಮಲ್ಲಪ್ಪ, ಡಾ.ಪದ್ಮಾನಂದ, ಡಾ.ಜ್ಯೋತಿ ಕಟ್ಟಿಮನಿ, ಡಾ.ರಾಜಾ ವೆಂಕಟಪ್ಪ ನಾಯಕ್, ಡಾ.ಹಣಮಂತರೆಡ್ಡಿ, ಜಿಲ್ಲಾ ಫಾರ್ಮಸಿಸ್ಟ್ ಸಂಘದ ಪದಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>