ದಿನಗೂಲಿ ನೌಕರನಾಗಿರುವ ಮೃತರ ಕುಟುಂಬಕ್ಕೆ ಇಲಾಖೆಯಿಂದ ಪರಿಹಾರ ಒದಗಿಸಿ ಅವರ ಕುಟುಂಬದಲ್ಲಿ ಯಾರಿಗಾದರೂ ಒಬ್ಬರಿಗೆ ಕೆಲಸ ಒದಗಿಸಿಕೊಡಿ ಎಂದು ಆಗ್ರಹಿಸಿದರು. ಆದರೆ, ಅಧಿಕಾರಿಗಳು ಸರಿಯಾಗಿ ಸ್ಪಂದಿಸದ ಕಾರಣ ಸೋಮವಾರ ಮೃತ ದೇಹವನ್ನು ಟ್ರ್ಯಾಕ್ಟರ್ನಲ್ಲಿ ಹಾಕಿಕೊಂಡು ಬಂದು ವಡಗೇರಾ- ಯಾದಗಿರಿ ಮುಖ್ಯ ರಸ್ತೆಯ ಮೇಲೆ ಪ್ರತಿಭಟನೆ ನಡೆಸಿದಾಗ ಆಗ ಅರಣ್ಯ ಇಲಾಖೆಯ ಅಧಿಕಾರಿಗಳು ಮೃತ ಕುಟುಂಬಸ್ಥರಿಗೆ ಪರಿಹಾರ ಕೊಡುವ ಭರವಸೆ ನೀಡಿದಾಗ ಪ್ರತಿಭಟನೆ ಹಿಂದೆ ಪಡೆಯಲಾಯಿತು.