<p><strong>ಸೈದಾಪುರ:</strong> ‘ಪೊಲೀಸರು ಮತ್ತು ಸಾರ್ವಜನಿಕರ ನಡುವಿನ ಸಂಬಂಧವನ್ನು ಬಲಪಡಿಸುವುದು ಹಾಗೂ ಉತ್ತಮ ನಾಗರಿಕರನ್ನು ರೂಪಿಸುವುದು ತೆರೆದ ಮನೆಯ ಗುರಿಯಾಗಿದೆ’ ಎಂದು ಸೈದಾಪುರ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಧಿಕಾರಿ ಶಿವಪ್ಪ ಯಮನಪ್ಪ ಮರಡಿ ತಿಳಿಸಿದರು.</p>.<p>ಪಟ್ಟಣದ ಪೊಲೀಸ ಠಾಣೆಗೆ ತೆರೆದ ಮನೆ ಕಾರ್ಯಕ್ರಮದಡಿಯಲ್ಲಿ ಶ್ರೀ ಭಗವಾನ್ ಮಾಹವೀರ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳು ಭೇಟಿ ನೀಡಿದಾಗ ಮಾಹಿತಿ ನೀಡಿ ಮಾತನಾಡಿದರು.</p>.<p>‘ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಜೊತೆಗೆ ನಮ್ಮ ಆಸ್ತಿಪಾಸ್ತಿಯನ್ನು ರಕ್ಷಣೆ ಮಾಡುವ ಜವಬ್ದಾರಿಯನ್ನು ಹೊತ್ತುಕೊಂಡು ಹಗಲಿರುಳು ಕಾಯುವ ಪೊಲೀಸರ ಬಗ್ಗೆ ಜನಸಾಮಾನ್ಯರಲ್ಲಿ ಭಯದ ವಾತಾವರಣ ಸೃಷ್ಠಿಯಾಗಿದೆ. ಹೀಗಾಗಿ ಸಾರ್ವಜನಿರಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿರುವ ಭಯವನ್ನು ಹೋಗಲಾಡಿಸಿ, ಸಕರಾತ್ಮಕ ಭಾವನೆ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ’ ಎಂದರು.</p>.<p>‘ಜೊತೆಗೆ ಪೊಲೀಸರ ದೈನಂದಿನ ಕರ್ತವ್ಯದ ಕಾರ್ಯವೈಖರಿಗಳು, ಮಕ್ಕಳ ಮೇಲಿನ ದೈಹಿಕ , ಮಾನಸಿಕ ದೌರ್ಜನ್ಯಗಳನ್ನು ತಡೆಯುವ ರೀತಿಯನ್ನು ಪೊಲೀಸರು ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವರು. ಇದರಿಂದ ವಿದ್ಯಾರ್ಥಿಗಳು ಜಾಗೃತರಾಗಿ ಸಮಸ್ಯೆಯನ್ನು ಎದುರಿಸುವ ದಿಟ್ಟ ಧೈರ್ಯವನ್ನು ಹೊಂದುತ್ತಾರೆ. ಪೊಲೀಸರೆಂದರೆ ಜನಸ್ನೇಹಿಗಳು ಎಂಬುದನ್ನು ನೀವು ಅರಿತುಕೊಳ್ಳಬೇಕು ಹಾಗೂ ಇತರರಿಗೂ ನೀವು ತಿಳಿಸಬೇಕು’ ಎಂದು ತಿಳಿಸಿದರು.</p>.<p>ಪಿಎಸ್ಐ ಭೀಮರಾಯ ಕೂಡ್ಲೂರು, ಮುಖ್ಯಪೇದೆ ರಾಜಕುಮಾರ, ಶೇಖರ್, ಪೇದೆ ಸಕ್ರೆಪ್ಪ, ಗುಂಡಪ್ಪ, ಮಹಿಳಾ ಪೇದೆ ಅನ್ನ ಪೂರ್ಣ ಸೇರಿದಂತೆ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೈದಾಪುರ:</strong> ‘ಪೊಲೀಸರು ಮತ್ತು ಸಾರ್ವಜನಿಕರ ನಡುವಿನ ಸಂಬಂಧವನ್ನು ಬಲಪಡಿಸುವುದು ಹಾಗೂ ಉತ್ತಮ ನಾಗರಿಕರನ್ನು ರೂಪಿಸುವುದು ತೆರೆದ ಮನೆಯ ಗುರಿಯಾಗಿದೆ’ ಎಂದು ಸೈದಾಪುರ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಧಿಕಾರಿ ಶಿವಪ್ಪ ಯಮನಪ್ಪ ಮರಡಿ ತಿಳಿಸಿದರು.</p>.<p>ಪಟ್ಟಣದ ಪೊಲೀಸ ಠಾಣೆಗೆ ತೆರೆದ ಮನೆ ಕಾರ್ಯಕ್ರಮದಡಿಯಲ್ಲಿ ಶ್ರೀ ಭಗವಾನ್ ಮಾಹವೀರ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳು ಭೇಟಿ ನೀಡಿದಾಗ ಮಾಹಿತಿ ನೀಡಿ ಮಾತನಾಡಿದರು.</p>.<p>‘ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಜೊತೆಗೆ ನಮ್ಮ ಆಸ್ತಿಪಾಸ್ತಿಯನ್ನು ರಕ್ಷಣೆ ಮಾಡುವ ಜವಬ್ದಾರಿಯನ್ನು ಹೊತ್ತುಕೊಂಡು ಹಗಲಿರುಳು ಕಾಯುವ ಪೊಲೀಸರ ಬಗ್ಗೆ ಜನಸಾಮಾನ್ಯರಲ್ಲಿ ಭಯದ ವಾತಾವರಣ ಸೃಷ್ಠಿಯಾಗಿದೆ. ಹೀಗಾಗಿ ಸಾರ್ವಜನಿರಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿರುವ ಭಯವನ್ನು ಹೋಗಲಾಡಿಸಿ, ಸಕರಾತ್ಮಕ ಭಾವನೆ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ’ ಎಂದರು.</p>.<p>‘ಜೊತೆಗೆ ಪೊಲೀಸರ ದೈನಂದಿನ ಕರ್ತವ್ಯದ ಕಾರ್ಯವೈಖರಿಗಳು, ಮಕ್ಕಳ ಮೇಲಿನ ದೈಹಿಕ , ಮಾನಸಿಕ ದೌರ್ಜನ್ಯಗಳನ್ನು ತಡೆಯುವ ರೀತಿಯನ್ನು ಪೊಲೀಸರು ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವರು. ಇದರಿಂದ ವಿದ್ಯಾರ್ಥಿಗಳು ಜಾಗೃತರಾಗಿ ಸಮಸ್ಯೆಯನ್ನು ಎದುರಿಸುವ ದಿಟ್ಟ ಧೈರ್ಯವನ್ನು ಹೊಂದುತ್ತಾರೆ. ಪೊಲೀಸರೆಂದರೆ ಜನಸ್ನೇಹಿಗಳು ಎಂಬುದನ್ನು ನೀವು ಅರಿತುಕೊಳ್ಳಬೇಕು ಹಾಗೂ ಇತರರಿಗೂ ನೀವು ತಿಳಿಸಬೇಕು’ ಎಂದು ತಿಳಿಸಿದರು.</p>.<p>ಪಿಎಸ್ಐ ಭೀಮರಾಯ ಕೂಡ್ಲೂರು, ಮುಖ್ಯಪೇದೆ ರಾಜಕುಮಾರ, ಶೇಖರ್, ಪೇದೆ ಸಕ್ರೆಪ್ಪ, ಗುಂಡಪ್ಪ, ಮಹಿಳಾ ಪೇದೆ ಅನ್ನ ಪೂರ್ಣ ಸೇರಿದಂತೆ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>