ಈ ಬಗ್ಗೆ ಮಾಹಿತಿ ನೀಡಿರುವ ಮಹಿಳಾ ಪೊಲೀಸ್ ಠಾಣೆಯ ಸಿಪಿಐ ರಾಘವೇಂದ್ರ ಅವರು, ‘ಮಹಿಳೆಗೆ ವಿವಾಹವಾಗಿದ್ದು ಇಬ್ಬರು ಮಕ್ಕಳಿದ್ದಾರೆ. ಪತಿ ಬೇರೆ ಜಿಲ್ಲೆಯಲ್ಲಿದ್ದು, ಎರಡು ತಿಂಗಳಿಂದ ಹಣ ಕಳುಹಿಸದ ಕಾರಣ ನೊಂದ ಮಹಿಳೆ ನದಿಗೆ ಹಾರಲು ಯತ್ನಿಸಿದ್ದಾರೆ. ಪೊಲೀಸ್ ಸಿಬ್ಬಂದಿ ಗಮನಿಸಿ ವಿಚಾರಿಸಿದ್ದಾರೆ. ಮಹಿಳೆಗೆ ಆಪ್ತಸಮಾಲೋಚನೆ ಮಾಡಿದ್ದು, ಮನೆಗೆ ಕಳುಹಿಸಲಾಗಿದೆ’ ಎಂದರು.