<p><strong>ಯಾದಗಿರಿ: </strong>‘ಜಿಲ್ಲೆಯ ಚಂಡರಕಿ ಗ್ರಾಮ ವಾಸ್ತವ್ಯಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಜಿಲ್ಲೆಗೆ ಮೆಡಿಕಲ್ ಕಾಲೇಜು ಅಗತ್ಯವಿಲ್ಲ ಎಂದು ಹೇಳಿದ್ದರು. ಹೀಗಾಗಿ ಈ ಜಿಲ್ಲೆಯ ಜನರ ಶಾಪವೇ ಮುಖ್ಯಮಂತ್ರಿ ಕುರ್ಚಿ ಅಲ್ಲಾಡಲು ಕಾರಣವಾಗಿದೆ’ ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಆರೋಪಿಸಿದರು.</p>.<p>ಬುಧವಾರ ಮೆಡಿಕಲ್ ಕಾಲೇಜಿಗೆ ಆಗ್ರಹಿಸಿ ಯಾದಗಿರಿ ಬಂದ್ ಅಂಗವಾಗಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.</p>.<p>‘ಜಿಲ್ಲೆಯ ಜನರ ಶಾಪವೇ ಮುಖ್ಯಮಂತ್ರಿಗೆ ಈ ಸ್ಥಿತಿ ಬಂದಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಮಂಜೂರಾಗಿರುವ ಮೆಡಿಕಲ್ ಕಾಲೇಜು ಬೇಡ ಎಂದು ಹೇಳಿರುವುದು ಜಿಲ್ಲೆಯ ಜನರ ಆಕ್ರೋಶ ಮತ್ತು ಶಾಪಕ್ಕೆ ಕಾರಣವಾಗಿದೆ’ ಎಂದು ವಿಶ್ಲೇಷಿಸಿದರು.</p>.<p>‘ಯಾದಗಿರಿ ಬಂದ್ ಯಶಸ್ವಿಯಾಗಿದ್ದು, ಇನ್ನು ಮುಂದೆಯಾದರೂ ಸರ್ಕಾರ ವೈದ್ಯಕೀಯ ಕಾಲೇಜಿಗೆ ಅನುದಾನ ನೀಡಬೇಕು. ಇದರಿಂದ ಬೇರೆ ಜಿಲ್ಲೆಗೆ ರೋಗಿಗಳನ್ನು ಶಿಫಾರಸು ಮಾಡುವುದು ತಗ್ಗಲಿದೆ. ಇಲ್ಲದಿದ್ದರೆ ಬಿಜೆಪಿ ಸರ್ಕಾರದಲ್ಲಿ ಮೆಡಿಕಲ್ ಕಾಲೇಜು ಆರಂಭವಾಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಮಾಜಿ ಶಾಸಕ ಎ.ಬಿ.ಮಾಲಕರೆಡ್ಡಿ ಮಾತನಾಡಿ, ‘ಜಿಲ್ಲೆಯ ಜನರ ಬೇಡಿಕೆ ಈಡೇರಿಸದಿದ್ದರೆ ಪ್ರತ್ಯೇಕ ಕರ್ನಾಟಕ ಕೇಳಬೇಕಾಗುತ್ತಿದೆ. ಹೀಗಾಗಿ ಮೆಡಿಕಲ್ ಕಾಲೇಜಿಗಾಗಿ ಅನುದಾನ ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>‘ಜಿಲ್ಲೆಯ ಚಂಡರಕಿ ಗ್ರಾಮ ವಾಸ್ತವ್ಯಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಜಿಲ್ಲೆಗೆ ಮೆಡಿಕಲ್ ಕಾಲೇಜು ಅಗತ್ಯವಿಲ್ಲ ಎಂದು ಹೇಳಿದ್ದರು. ಹೀಗಾಗಿ ಈ ಜಿಲ್ಲೆಯ ಜನರ ಶಾಪವೇ ಮುಖ್ಯಮಂತ್ರಿ ಕುರ್ಚಿ ಅಲ್ಲಾಡಲು ಕಾರಣವಾಗಿದೆ’ ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಆರೋಪಿಸಿದರು.</p>.<p>ಬುಧವಾರ ಮೆಡಿಕಲ್ ಕಾಲೇಜಿಗೆ ಆಗ್ರಹಿಸಿ ಯಾದಗಿರಿ ಬಂದ್ ಅಂಗವಾಗಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.</p>.<p>‘ಜಿಲ್ಲೆಯ ಜನರ ಶಾಪವೇ ಮುಖ್ಯಮಂತ್ರಿಗೆ ಈ ಸ್ಥಿತಿ ಬಂದಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಮಂಜೂರಾಗಿರುವ ಮೆಡಿಕಲ್ ಕಾಲೇಜು ಬೇಡ ಎಂದು ಹೇಳಿರುವುದು ಜಿಲ್ಲೆಯ ಜನರ ಆಕ್ರೋಶ ಮತ್ತು ಶಾಪಕ್ಕೆ ಕಾರಣವಾಗಿದೆ’ ಎಂದು ವಿಶ್ಲೇಷಿಸಿದರು.</p>.<p>‘ಯಾದಗಿರಿ ಬಂದ್ ಯಶಸ್ವಿಯಾಗಿದ್ದು, ಇನ್ನು ಮುಂದೆಯಾದರೂ ಸರ್ಕಾರ ವೈದ್ಯಕೀಯ ಕಾಲೇಜಿಗೆ ಅನುದಾನ ನೀಡಬೇಕು. ಇದರಿಂದ ಬೇರೆ ಜಿಲ್ಲೆಗೆ ರೋಗಿಗಳನ್ನು ಶಿಫಾರಸು ಮಾಡುವುದು ತಗ್ಗಲಿದೆ. ಇಲ್ಲದಿದ್ದರೆ ಬಿಜೆಪಿ ಸರ್ಕಾರದಲ್ಲಿ ಮೆಡಿಕಲ್ ಕಾಲೇಜು ಆರಂಭವಾಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಮಾಜಿ ಶಾಸಕ ಎ.ಬಿ.ಮಾಲಕರೆಡ್ಡಿ ಮಾತನಾಡಿ, ‘ಜಿಲ್ಲೆಯ ಜನರ ಬೇಡಿಕೆ ಈಡೇರಿಸದಿದ್ದರೆ ಪ್ರತ್ಯೇಕ ಕರ್ನಾಟಕ ಕೇಳಬೇಕಾಗುತ್ತಿದೆ. ಹೀಗಾಗಿ ಮೆಡಿಕಲ್ ಕಾಲೇಜಿಗಾಗಿ ಅನುದಾನ ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>