ಸಾವಿತ್ರಮ್ಮ ವೆಂಕಟಪ್ಪ ನಕ್ಕ (35) ಅವರಿಗೆ ಮಂಗಳವಾರ ಬೆಳಿಗ್ಗೆ 5ರ ಸುಮಾರಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ಬೆಳಿಗ್ಗೆ 7.30ರ ವೇಳೆಗೆ ನೆರೆಯ ನಾರಾಯಣಪೇಟ್ ಸರ್ಕಾರಿ ಆಸ್ಪತ್ರೆಗೆ ತೆರಳಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ಕೂಡಲೇ ಹೈದರಾಬಾದ್ ಆಸ್ಪತ್ರೆಗೆ ಶಿಫಾರಸ್ಸು ಮಾಡಿದ್ದು, ಮಾರ್ಗ ಮಧ್ಯ ತೆಲಂಗಾಣದ ಮಹಬೂಬನಗರ ನಗರದ ಬಳಿ ಸಾವಿತ್ರಮ್ಮ ಮೃತಪಟ್ಟಿದ್ದಾರೆ.