<p><strong>ವಡಗೇರಾ:</strong> ‘ತಾಲ್ಲೂಕಿನ ಗಡ್ಡೆಸೂಗುರು ಹಾಗೂ ಹುಲ್ಕಲ್ (ಜೆ) ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಜಿಲ್ಲಾ ಮುಖ್ಯ ರಸ್ತೆ ಮೇಲೆ ದೊಡ್ಡ ಗುಂಡಿ ಬಿದ್ದಿರುವ ಕಾರಣ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ’ ಎಂದು ವಾಹನ ಸವಾರರು ದೂರಿದ್ದಾರೆ.</p>.<p>ಈ ಮಾರ್ಗದಲ್ಲಿ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಹನಗಳು ಸಂಚರಿಸುತ್ತವೆ. ಅಲ್ಲದೆ ತುಮಕೂರು ಗ್ರಾಮದ ಹತ್ತಿರವಿರುವ ಕೋರಗ್ರೀನ್ ಸಕ್ಕರೆ ಕಾರ್ಖಾನೆಗೆ ಸಾಕಷ್ಟು ಲಾರಿಗಳು ಸಂಚರಿಸುತ್ತವೆ. ಆದರೆ ರಸ್ತೆ ಮೇಲಿನ ಗುಂಡಿಗಳಿಂದ ಸವಾರರು ಪರಿತಪಿಸುವಂತಾಗಿದೆ.</p>.<p>ರಸ್ತೆ ಮೇಲಿನ ಗುಂಡಿಯನ್ನು ತಪ್ಪಿಸಲು ಹೋಗಿ ವಾಹನಗಳು ನಿಯಂತ್ರಣ ತಪ್ಪಿ ಅಪಘಾತಗಳು ಸಂಭವಿಸುತ್ತಿವೆ ಎನ್ನುತ್ತಾರೆ ವಾಹನ ಚಾಲಕರು.</p>.<p>‘ಇನ್ನೂ ದ್ವಿಚಕ್ರ ವಾಹನ ಸವಾರರು ಗುಂಡಿಯನ್ನು ತಪ್ಪಿಸಲು ಹೋಗಿ ಬಿದ್ದು ಕೈಕಾಲುಗಳನ್ನು ಮುರಿದು ಕೊಂಡಿದ್ದಾರೆ. ಗುಂಡಿ ಮುಚ್ಚಲು ಅನೇಕ ಬಾರಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ’ ಎಂದು ಗಡ್ಡೆಸೂಗುರು ಗ್ರಾಮದ ಜನರು ಆಕ್ರೋಶ ವ್ಯಕ್ತಪಡಿಸಿದರು.</p>.<p>ರಸ್ತೆ ಮೇಲೆ ಬಿದ್ದಿರುವ ಗುಂಡಿಯನ್ನು ಮುಚ್ಚಲು ಕ್ರಮಗಳನ್ನು ಕೈಗೊಂಡು ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ವಾಹನ ಚಾಲಕರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡಗೇರಾ:</strong> ‘ತಾಲ್ಲೂಕಿನ ಗಡ್ಡೆಸೂಗುರು ಹಾಗೂ ಹುಲ್ಕಲ್ (ಜೆ) ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಜಿಲ್ಲಾ ಮುಖ್ಯ ರಸ್ತೆ ಮೇಲೆ ದೊಡ್ಡ ಗುಂಡಿ ಬಿದ್ದಿರುವ ಕಾರಣ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ’ ಎಂದು ವಾಹನ ಸವಾರರು ದೂರಿದ್ದಾರೆ.</p>.<p>ಈ ಮಾರ್ಗದಲ್ಲಿ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಹನಗಳು ಸಂಚರಿಸುತ್ತವೆ. ಅಲ್ಲದೆ ತುಮಕೂರು ಗ್ರಾಮದ ಹತ್ತಿರವಿರುವ ಕೋರಗ್ರೀನ್ ಸಕ್ಕರೆ ಕಾರ್ಖಾನೆಗೆ ಸಾಕಷ್ಟು ಲಾರಿಗಳು ಸಂಚರಿಸುತ್ತವೆ. ಆದರೆ ರಸ್ತೆ ಮೇಲಿನ ಗುಂಡಿಗಳಿಂದ ಸವಾರರು ಪರಿತಪಿಸುವಂತಾಗಿದೆ.</p>.<p>ರಸ್ತೆ ಮೇಲಿನ ಗುಂಡಿಯನ್ನು ತಪ್ಪಿಸಲು ಹೋಗಿ ವಾಹನಗಳು ನಿಯಂತ್ರಣ ತಪ್ಪಿ ಅಪಘಾತಗಳು ಸಂಭವಿಸುತ್ತಿವೆ ಎನ್ನುತ್ತಾರೆ ವಾಹನ ಚಾಲಕರು.</p>.<p>‘ಇನ್ನೂ ದ್ವಿಚಕ್ರ ವಾಹನ ಸವಾರರು ಗುಂಡಿಯನ್ನು ತಪ್ಪಿಸಲು ಹೋಗಿ ಬಿದ್ದು ಕೈಕಾಲುಗಳನ್ನು ಮುರಿದು ಕೊಂಡಿದ್ದಾರೆ. ಗುಂಡಿ ಮುಚ್ಚಲು ಅನೇಕ ಬಾರಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ’ ಎಂದು ಗಡ್ಡೆಸೂಗುರು ಗ್ರಾಮದ ಜನರು ಆಕ್ರೋಶ ವ್ಯಕ್ತಪಡಿಸಿದರು.</p>.<p>ರಸ್ತೆ ಮೇಲೆ ಬಿದ್ದಿರುವ ಗುಂಡಿಯನ್ನು ಮುಚ್ಚಲು ಕ್ರಮಗಳನ್ನು ಕೈಗೊಂಡು ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ವಾಹನ ಚಾಲಕರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>