ಗ್ರಾಮದ ಸುತ್ತಮುತ್ತಲು ಉಪ್ಪಿನಾಂಶ ಇರುವ ನೀರು ಇರುವುದರಿಂದ ಕುಡಿಯಲು ಯೋಗ್ಯವಾಗಿಲ್ಲದ ಕಾರಣ ಶುದ್ಧ ಕುಡಿಯುವ ನೀರಿನ ಘಟಕದ ಮೇಲೆ ಅಲ್ಲಿನ ನಿವಾಸಿಗರು ಅವಲಂಬಿತರಾಗಿದ್ದರು. ಘಟಕ ಸ್ಥಗಿತಗೊಂಡಿದ್ದರಿಂದ ಗ್ರಾಮಸ್ಥರು ಗ್ರಾಮದಿಂದ ಎರಡು ಕಿ.ಮೀ ದೂರದ ಕೃಷ್ಣಾ ನದಿಗೆ ತೆರಳಿ ಅಲ್ಲಿ ಒರತೆ ತೆಗೆದು ಕುಡಿಯುವ ನೀರು ಸಂಗ್ರಹಿಸಿಕೊಂಡು ಬರುತ್ತಿದ್ದರು. ಮಳೆಗಾಲ ಆರಂಭವಾಗಿದ್ದರಿಂದ ಕಲುಷಿತ ನೀರು ಸೇವನೆಯಿಂದ ಸಾಂಕ್ರಾಮಿಕ ರೋಗದ ಭೀತಿಯನ್ನು ಗ್ರಾಮಸ್ಥರು ಎದುರಿಸುವಂತೆ ಆಗಿತ್ತು.