<p><strong>ಯಾದಗಿರಿ: </strong>ನಗರ ಸೇರಿದಂತೆ ಜಿಲ್ಲೆಯಾದ್ಯಂತ ಈದ್ ಉಲ್ ಫಿತ್ರ್ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.</p>.<p>ನಗರದಜಿಲ್ಲಾಧಿಕಾರಿ ಕಚೇರಿ ಹಿಂಭಾಗದ ಗುಡ್ಡದ ಈದ್ಗಾ ಮೈದಾನ ಬಳಿ ಜಮಾಯಿಸಿದ ಸಾವಿರಾರು ಮುಸ್ಲಿಮರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಅಲ್ಲದೇ ಗಂಜ್ ಪ್ರದೇಶ, ಹಳೆ ಬಸ್ ನಿಲ್ದಾಣ ಬಳಿ ಇರುವ ಈದ್ಗಾ ಮೈದಾನಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.</p>.<p>ಬೆಳಗ್ಗೆ 10 ಗಂಟೆಗೆ ಆರಂಭವಾದ ಪ್ರಾರ್ಥನೆಯಲ್ಲಿ ಸುಮಾರು 3 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. ವಿಶೇಷ ಪ್ರಾರ್ಥನೆ ನಂತರ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.</p>.<p>ಇದಕ್ಕೂ ಮುನ್ನ ನಗರದ ವಿವಿಧ ಮಸೀದಿಗಳಲ್ಲಿ ಈದ್ನ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.</p>.<p>ಹೊಸ ಬಟ್ಟೆ ತೊಟ್ಟ ಚಿಣ್ಣರು ಗಮನ ಸೆಳೆದರು. ಈದ್ಗಾ ಮೈದಾನ ಬಳಿ ‘ಇತಾರ್’ ಎನ್ನುವ ವಿಶೇಷ ಸುಗಂಧ ದ್ರವ್ಯ ಮೂಗಿಗೆ ಬಡಿಯುತ್ತಿತ್ತು.</p>.<p>ಒಂದು ತಿಂಗಳು ಕಾಲ ಉಪವಾಸ ವ್ರತ ಕೈಗೊಂಡ ಮುಸ್ಲಿಮರು ಬುಧವಾರ ಹಬ್ಬದ ಸಂಭ್ರಮದಲ್ಲಿ ತೊಡಗಿಸಿಕೊಂಡಿದ್ದರು. ಬೇರೆ ಸಮುದಾಯದವರನ್ನು ಊಟಕ್ಕೆ ಆಹ್ವಾನಿಸಿ ಹಬ್ಬದ ಆಚರಣೆಗೆ ಮೆರಗು ತಂದರು.</p>.<p>‘ದೇಶದಲ್ಲಿ ಮಳೆ ಸಮೃದ್ಧಿಯಾಗಿ ಸುರಿಯಲಿ. ಪ್ರಾಣಿ, ಪಕ್ಷಿಗಳು ನೀರಿಲ್ಲದೇ ಪರದಾಡುತ್ತಿದ್ದಾವೆ. ಹೀಗಾಗಿ ಶೀಘ್ರ ಮಳೆಯಾಗಲಿ ಪ್ರಾರ್ಥನೆ ಸಲ್ಲಿಸಲಾಯಿತು’ ಎಂದು ಈದ್ಗಾ ಸಮಿತಿ ಅಧ್ಯಕ್ಷ ಹಾಗೂ ನಗರಸಭೆ ಸದಸ್ಯ ಮನಸ್ಸೂರ ಅಹ್ಮದ್ ಆಫ್ಘಾನಿ ಹೇಳಿದರು.</p>.<p>ಧರ್ಮಗುರುಗಳಾದ ಖಾಜಿ ಮಹ್ಮದ್ ಸಿದ್ಧಿಕಿ, ಗೌಸ್ ಮೂಸಾ ಈದ್ಗಾ ಮೈದಾನ ಬಳಿ ಧರ್ಮಭೋದನೆ ಮಾಡಿದರು.</p>.<p>ಈದ್ಗಾ ಮೈದಾನ ಬಳಿ ನಗರಸಭೆ ವತಿಯಿಂದ ನೀರಿನ ಟ್ಯಾಂಕರ್ ವ್ಯವಸ್ಥೆ ಕಲ್ಪಿಸಲಾಗಿತ್ತು.<br /><br />ನಮಾಜ್ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಈದ್ಗಾ ಮೈದಾನ ಬಳಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಪಿಎಸ್ಐ–1, ಎಎಸ್ಐ–2, ಮುಖ್ಯಪೇದೆ–2, ಪೊಲೀಸ್ ಕಾನ್ಸ್ಟೇಬಲ್–3, ಗೃಹರಕ್ಷಕ ದಳ–2 ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>ನಗರ ಸೇರಿದಂತೆ ಜಿಲ್ಲೆಯಾದ್ಯಂತ ಈದ್ ಉಲ್ ಫಿತ್ರ್ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.</p>.<p>ನಗರದಜಿಲ್ಲಾಧಿಕಾರಿ ಕಚೇರಿ ಹಿಂಭಾಗದ ಗುಡ್ಡದ ಈದ್ಗಾ ಮೈದಾನ ಬಳಿ ಜಮಾಯಿಸಿದ ಸಾವಿರಾರು ಮುಸ್ಲಿಮರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಅಲ್ಲದೇ ಗಂಜ್ ಪ್ರದೇಶ, ಹಳೆ ಬಸ್ ನಿಲ್ದಾಣ ಬಳಿ ಇರುವ ಈದ್ಗಾ ಮೈದಾನಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.</p>.<p>ಬೆಳಗ್ಗೆ 10 ಗಂಟೆಗೆ ಆರಂಭವಾದ ಪ್ರಾರ್ಥನೆಯಲ್ಲಿ ಸುಮಾರು 3 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. ವಿಶೇಷ ಪ್ರಾರ್ಥನೆ ನಂತರ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.</p>.<p>ಇದಕ್ಕೂ ಮುನ್ನ ನಗರದ ವಿವಿಧ ಮಸೀದಿಗಳಲ್ಲಿ ಈದ್ನ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.</p>.<p>ಹೊಸ ಬಟ್ಟೆ ತೊಟ್ಟ ಚಿಣ್ಣರು ಗಮನ ಸೆಳೆದರು. ಈದ್ಗಾ ಮೈದಾನ ಬಳಿ ‘ಇತಾರ್’ ಎನ್ನುವ ವಿಶೇಷ ಸುಗಂಧ ದ್ರವ್ಯ ಮೂಗಿಗೆ ಬಡಿಯುತ್ತಿತ್ತು.</p>.<p>ಒಂದು ತಿಂಗಳು ಕಾಲ ಉಪವಾಸ ವ್ರತ ಕೈಗೊಂಡ ಮುಸ್ಲಿಮರು ಬುಧವಾರ ಹಬ್ಬದ ಸಂಭ್ರಮದಲ್ಲಿ ತೊಡಗಿಸಿಕೊಂಡಿದ್ದರು. ಬೇರೆ ಸಮುದಾಯದವರನ್ನು ಊಟಕ್ಕೆ ಆಹ್ವಾನಿಸಿ ಹಬ್ಬದ ಆಚರಣೆಗೆ ಮೆರಗು ತಂದರು.</p>.<p>‘ದೇಶದಲ್ಲಿ ಮಳೆ ಸಮೃದ್ಧಿಯಾಗಿ ಸುರಿಯಲಿ. ಪ್ರಾಣಿ, ಪಕ್ಷಿಗಳು ನೀರಿಲ್ಲದೇ ಪರದಾಡುತ್ತಿದ್ದಾವೆ. ಹೀಗಾಗಿ ಶೀಘ್ರ ಮಳೆಯಾಗಲಿ ಪ್ರಾರ್ಥನೆ ಸಲ್ಲಿಸಲಾಯಿತು’ ಎಂದು ಈದ್ಗಾ ಸಮಿತಿ ಅಧ್ಯಕ್ಷ ಹಾಗೂ ನಗರಸಭೆ ಸದಸ್ಯ ಮನಸ್ಸೂರ ಅಹ್ಮದ್ ಆಫ್ಘಾನಿ ಹೇಳಿದರು.</p>.<p>ಧರ್ಮಗುರುಗಳಾದ ಖಾಜಿ ಮಹ್ಮದ್ ಸಿದ್ಧಿಕಿ, ಗೌಸ್ ಮೂಸಾ ಈದ್ಗಾ ಮೈದಾನ ಬಳಿ ಧರ್ಮಭೋದನೆ ಮಾಡಿದರು.</p>.<p>ಈದ್ಗಾ ಮೈದಾನ ಬಳಿ ನಗರಸಭೆ ವತಿಯಿಂದ ನೀರಿನ ಟ್ಯಾಂಕರ್ ವ್ಯವಸ್ಥೆ ಕಲ್ಪಿಸಲಾಗಿತ್ತು.<br /><br />ನಮಾಜ್ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಈದ್ಗಾ ಮೈದಾನ ಬಳಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಪಿಎಸ್ಐ–1, ಎಎಸ್ಐ–2, ಮುಖ್ಯಪೇದೆ–2, ಪೊಲೀಸ್ ಕಾನ್ಸ್ಟೇಬಲ್–3, ಗೃಹರಕ್ಷಕ ದಳ–2 ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>