<p><strong>ಸೈದಾಪುರ:</strong> ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಗೆಲ್ಲಬೇಕು ಎಂದು ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.</p>.<p>ಸಮೀಪದ ಮಾಧ್ವಾರ ಗ್ರಾಮದ ಮಲ್ಲಪ್ಪ ಮೇಸ್ತ್ರಿ ಅವರ ನೇತೃತ್ವದಲ್ಲಿ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರ ತಿರುಪತಿ ಸಮೀಪದ ಕಾಳಹಸ್ತಿಯಲ್ಲಿ ಆರ್ಸಿಬಿ ತಂಡದ ಆಟಗಾರರ ಫೊಟೋ ಹಿಡಿದು ಶಾಸ್ತ್ರೋಕ್ತವಾಗಿ ವಿಶೇಷ ಪೂಜೆ ಮಾಡಿಸಲಾಯಿತು.</p>.<p>ಕಳೆದ ಒಂದು ದಶಕದಿಂದ ಟ್ರೋಫಿ ಪಡೆಯುವಲ್ಲಿ ವಿಫಲವಾಗುತ್ತಿರುವ ಆರ್ಸಿಬಿ ತಂಡದ ಆಟಗಾರರು ದೋಷ ಮುಕ್ತರಾಗಿ ಈ ಬಾರಿ ಚಾಂಪಿಯನ್ ಪಟ್ಟ ಪಡೆಯಬೇಕು ಎಂದು ಹರಕೆ ಹೊತ್ತು ಪ್ರಾರ್ಥನೆ ಸಲ್ಲಿಸಿದರು. ತದನಂತರ ತಿರುಪತಿ ತಿಮ್ಮಪ್ಪ ದೇವಸ್ಥಾನಕ್ಕೆ ತೆರಳಿ ಅಲ್ಲಿಯೂ ಆಟಗಾರರ ಫೊಟೋ ಹಿಡಿದು ಈ ಬಾರಿಯ ಕಪ್ ಕರ್ನಾಟಕಕ್ಕೆ ಬರಲಿ, ಕನ್ನಡಿಗರಿಗೆ ಸಿಗಲಿ, ದಶಕದ ನಮ್ಮ ಕನಸು ನನಸಾಗಲಿ ಎಂದು ಭಗವಂತನಲ್ಲಿ ಬೇಡಿಕೊಂಡರು.</p>.<p>ಈ ಸಂದರ್ಭದಲ್ಲಿ ಕೆ.ಬಿ ರಾಘವೇಂದ್ರ ಸೈದಾಪುರ, ಮಹೇಶ ಜೇಗರ್ ಸೇರಿದಂತೆ ಬೆಂಗಳೂರು ಮೂಲದ ಹತ್ತಾರು ಕ್ರೀಡಾಭಿಮಾನಿಗಳು ಹಾಗೂ ತಿರುಪತಿ ತಿಮ್ಮಪ್ಪನ ಭಕ್ತರು ಆರ್ಸಿಬಿ ತಂಡಕ್ಕೆ ಶುಭವಾಗಲಿ ಎಂದು ಜಯಘೋಷ ಕೂಗಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೈದಾಪುರ:</strong> ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಗೆಲ್ಲಬೇಕು ಎಂದು ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.</p>.<p>ಸಮೀಪದ ಮಾಧ್ವಾರ ಗ್ರಾಮದ ಮಲ್ಲಪ್ಪ ಮೇಸ್ತ್ರಿ ಅವರ ನೇತೃತ್ವದಲ್ಲಿ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರ ತಿರುಪತಿ ಸಮೀಪದ ಕಾಳಹಸ್ತಿಯಲ್ಲಿ ಆರ್ಸಿಬಿ ತಂಡದ ಆಟಗಾರರ ಫೊಟೋ ಹಿಡಿದು ಶಾಸ್ತ್ರೋಕ್ತವಾಗಿ ವಿಶೇಷ ಪೂಜೆ ಮಾಡಿಸಲಾಯಿತು.</p>.<p>ಕಳೆದ ಒಂದು ದಶಕದಿಂದ ಟ್ರೋಫಿ ಪಡೆಯುವಲ್ಲಿ ವಿಫಲವಾಗುತ್ತಿರುವ ಆರ್ಸಿಬಿ ತಂಡದ ಆಟಗಾರರು ದೋಷ ಮುಕ್ತರಾಗಿ ಈ ಬಾರಿ ಚಾಂಪಿಯನ್ ಪಟ್ಟ ಪಡೆಯಬೇಕು ಎಂದು ಹರಕೆ ಹೊತ್ತು ಪ್ರಾರ್ಥನೆ ಸಲ್ಲಿಸಿದರು. ತದನಂತರ ತಿರುಪತಿ ತಿಮ್ಮಪ್ಪ ದೇವಸ್ಥಾನಕ್ಕೆ ತೆರಳಿ ಅಲ್ಲಿಯೂ ಆಟಗಾರರ ಫೊಟೋ ಹಿಡಿದು ಈ ಬಾರಿಯ ಕಪ್ ಕರ್ನಾಟಕಕ್ಕೆ ಬರಲಿ, ಕನ್ನಡಿಗರಿಗೆ ಸಿಗಲಿ, ದಶಕದ ನಮ್ಮ ಕನಸು ನನಸಾಗಲಿ ಎಂದು ಭಗವಂತನಲ್ಲಿ ಬೇಡಿಕೊಂಡರು.</p>.<p>ಈ ಸಂದರ್ಭದಲ್ಲಿ ಕೆ.ಬಿ ರಾಘವೇಂದ್ರ ಸೈದಾಪುರ, ಮಹೇಶ ಜೇಗರ್ ಸೇರಿದಂತೆ ಬೆಂಗಳೂರು ಮೂಲದ ಹತ್ತಾರು ಕ್ರೀಡಾಭಿಮಾನಿಗಳು ಹಾಗೂ ತಿರುಪತಿ ತಿಮ್ಮಪ್ಪನ ಭಕ್ತರು ಆರ್ಸಿಬಿ ತಂಡಕ್ಕೆ ಶುಭವಾಗಲಿ ಎಂದು ಜಯಘೋಷ ಕೂಗಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>