<p><strong>ಕೆಂಭಾವಿ</strong>: ಸುರಪುರ ಬಸ್ ಘಟಕದ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸರಿಯಾದ ಸಮಯಕ್ಕೆ ಬಸ್ ಬರುತ್ತಿಲ್ಲ ಎಂದು ಆರೋಪಿಸಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಬುಧವಾರ ಸುರಪುರ-ಹುನಗುಂದ ರಾಜ್ಯ ಹೆದ್ದಾರಿಯ ಕಿರದಳ್ಳಿ ಕ್ರಾಸ್ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.</p>.<p>ಪಟ್ಟಣಕ್ಕೆ ಹಲವು ಗ್ರಾಮಗಳಿಂದ ನೂರಾರು ಶಾಲಾ ಕಾಲೇಜು ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಬರುತ್ತಿದ್ದು, ಸಮಯಕ್ಕೆ ಬಸ್ ಬಾರದಿರುವುದರಿಂದ ತೊಂದರೆಯಾಗುತ್ತಿದೆ. ಈ ಕುರಿತು ಕಳೆದ ವಾರ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ಮಾಡಿದ್ದ ವಿದ್ಯಾರ್ಥಿಗಳು, ಅಧಿಕಾರಿಗಳ ನಿರ್ಲಕ್ಷಕ್ಕೆ ಮತ್ತೆ ಪ್ರತಿಭಟನೆ ನಡೆಸಿದರು.</p>.<p>‘ಅಧಿಕಾರಿಗಳ ಸಮಜಾಯಿಸಿ ಉತ್ತರದಿಂದ ನಾವೆಲ್ಲ ರೋಸಿ ಹೋಗಿದ್ದೇವೆ. ಹಿಂದೆ ಪ್ರತಿಭಟಿಸಿದಾಗ ನೀಡಿದ ಭರವಸೆ ನೀಡದರು. ಆದರೂ ಸರಿಯಾದ ಸಮಯಕ್ಕೆ ಬಸ್ಗಳು ಬಾರದೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದೇವೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ರಸ್ತೆ ತಡೆನಡೆಸಿ ಪ್ರತಿಭಟನೆ ಮಾಡಿದ್ದರಿಂದ ಕೆಲಕಾಲ ರಾಜ್ಯ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತು ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದರು.</p>.<p>ಪ್ರತಿಭಟನೆ ಸುದ್ದಿ ತಿಳಿದ ಸ್ಥಳಕ್ಕಾಗಮಿಸಿದ ಸಂಚಾರ ನಿಯಂತ್ರಕ ಮಾನಪ್ಪ ಮಾಳಳ್ಳಿಕರ್ ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸಿ ಶೀಘ್ರದಲ್ಲೆ ಸರಿಯಾದ ಸಮಯಕ್ಕೆ ಬಸ್ ಓಡಾಟ ನಡೆಸುವುದಾಗಿ ಲಿಖಿತ ರೂಪದಲ್ಲಿ ಭರವಸೆ ನೀಡಿದ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಭಾವಿ</strong>: ಸುರಪುರ ಬಸ್ ಘಟಕದ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸರಿಯಾದ ಸಮಯಕ್ಕೆ ಬಸ್ ಬರುತ್ತಿಲ್ಲ ಎಂದು ಆರೋಪಿಸಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಬುಧವಾರ ಸುರಪುರ-ಹುನಗುಂದ ರಾಜ್ಯ ಹೆದ್ದಾರಿಯ ಕಿರದಳ್ಳಿ ಕ್ರಾಸ್ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.</p>.<p>ಪಟ್ಟಣಕ್ಕೆ ಹಲವು ಗ್ರಾಮಗಳಿಂದ ನೂರಾರು ಶಾಲಾ ಕಾಲೇಜು ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಬರುತ್ತಿದ್ದು, ಸಮಯಕ್ಕೆ ಬಸ್ ಬಾರದಿರುವುದರಿಂದ ತೊಂದರೆಯಾಗುತ್ತಿದೆ. ಈ ಕುರಿತು ಕಳೆದ ವಾರ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ಮಾಡಿದ್ದ ವಿದ್ಯಾರ್ಥಿಗಳು, ಅಧಿಕಾರಿಗಳ ನಿರ್ಲಕ್ಷಕ್ಕೆ ಮತ್ತೆ ಪ್ರತಿಭಟನೆ ನಡೆಸಿದರು.</p>.<p>‘ಅಧಿಕಾರಿಗಳ ಸಮಜಾಯಿಸಿ ಉತ್ತರದಿಂದ ನಾವೆಲ್ಲ ರೋಸಿ ಹೋಗಿದ್ದೇವೆ. ಹಿಂದೆ ಪ್ರತಿಭಟಿಸಿದಾಗ ನೀಡಿದ ಭರವಸೆ ನೀಡದರು. ಆದರೂ ಸರಿಯಾದ ಸಮಯಕ್ಕೆ ಬಸ್ಗಳು ಬಾರದೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದೇವೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ರಸ್ತೆ ತಡೆನಡೆಸಿ ಪ್ರತಿಭಟನೆ ಮಾಡಿದ್ದರಿಂದ ಕೆಲಕಾಲ ರಾಜ್ಯ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತು ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದರು.</p>.<p>ಪ್ರತಿಭಟನೆ ಸುದ್ದಿ ತಿಳಿದ ಸ್ಥಳಕ್ಕಾಗಮಿಸಿದ ಸಂಚಾರ ನಿಯಂತ್ರಕ ಮಾನಪ್ಪ ಮಾಳಳ್ಳಿಕರ್ ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸಿ ಶೀಘ್ರದಲ್ಲೆ ಸರಿಯಾದ ಸಮಯಕ್ಕೆ ಬಸ್ ಓಡಾಟ ನಡೆಸುವುದಾಗಿ ಲಿಖಿತ ರೂಪದಲ್ಲಿ ಭರವಸೆ ನೀಡಿದ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>