‘ಲೋಕೊಪಯೋಗಿ ಸಚಿವ ಎಚ್.ಡಿ.ರೇವಣ್ಣ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಮಾರ್ಚ್ 7 ರಂದು ಅಧಿಸೂಚನೆ ಹೊರಡಿಸಿದ್ದಾರೆ. ಆದರೆ, ಅಧಿಸೂಚನೆಯಲ್ಲಿ ನಿಯಮದಂತೆ ಶೇ 8ರಷ್ಟು ಮೀಸಲಾತಿಯನ್ನು ಪರಿಗಣಿಸಿಲ್ಲ. ಈಗಾಗಲೇ ಮಾರ್ಚ್10ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿರುವುದರಿಂದ ಪದವೀಧರ ಯುವಕರು ಆತಂಕಪಡುವಂತಾಗಿದೆ. ಈ ಕುರಿತು ಮುಖ್ಯಮಂತ್ರಿ, ಸಚಿವರಿಗೆ, ಅಧಿಕಾರಿಗಳ ಮಟ್ಟದಲ್ಲೂ ಮನವಿ ನೀಡಿದ್ದರೂ ಪ್ರಯೋಜನವಾಗಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.