ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟು ₹500 ಕೋಟಿ ವೆಚ್ಚದಲ್ಲಿ ಕೆರೆ ತುಂಬಿಸುವ ಯೋಜನೆಯಡಿ ಕಾಮಗಾರಿ ಆರಂಭಿಸಿವೆ. ಆದರೆ, ಜಿಲ್ಲೆಯ 10 ಹಳ್ಳಿಗಳನ್ನು ಕೈಬಿಟ್ಟು, ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ನಾಲ್ಕು ಹಳ್ಳಿಗಳನ್ನು ಈ ಯೋಜನೆ ವ್ಯಾಪ್ತಿಗೆ ಒಳಪಡಿಸಲಾಗಿದೆ. ಇದಕ್ಕೆ ಸಂಸದ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಚಿವ ಶರಣಗೌಡ ಪ್ರಕಾಶ ಪಾಟೀಲ ಅವರ ರಾಜಕೀಯ ಕುಯುಕ್ತಿ ಕಾರಣವಾಗಿದೆ’ ಎಂದು ಆರೋಪಿಸಿದರು.