ಯಾದಗಿರಿ: ‘ಆಪರೇಷನ್ ಕಮಲಕ್ಕಾಗಿ ಬಿ.ಎಸ್.ಯಡಿಯೂರಪ್ಪ ಅವರು ನನಗೆ ಹಣದ ಆಮಿಷವೊಡ್ಡಿದ ಪ್ರಕರಣ ಮುಂದುವರಿಸುವಂತೆಬಿಜೆಪಿಯ ಅಗ್ರಗಣ್ಯ ನಾಯಕರೊಬ್ಬರು ಹೇಳಿದ್ದಾರೆ. ನನ್ನ ಜೊತೆ ಫೋನ್ನಲ್ಲಿ ಸಂಭಾಷಣೆ ನಡೆಸಿರುವ ಈ ನಾಯಕರು, ಯಡಿಯೂರಪ್ಪಗೆಖೆಡ್ಡಾ ತೋಡುತ್ತಿದ್ದಾರೆ’ ಎಂದು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಅವರ ಪುತ್ರ, ಜೆಡಿಎಸ್ ರಾಜ್ಯ ಯುವ ಘಟಕದ ಮಹಾಪ್ರಧಾನ ಕಾರ್ಯದರ್ಶಿ ಶರಣಗೌಡ ಕಂದಕೂರ ಹೇಳಿದರು.