<p><strong>ಯಾದಗಿರಿ:</strong> ‘ಕರ್ತವ್ಯ ಭವನದಲ್ಲಿ ಮೊದಲ ಬಾರಿಗೆ ಮಂಡನೆಯಾದ ಕೇಂದ್ರ ಸರ್ಕಾರದ ಬಜೆಟ್ ಅಸ್ಪಷ್ಟತೆಗಿಂತ ಕ್ರಿಯೆ, ಆಡಂಬರಕ್ಕಿಂತ ಸುಧಾರಣೆ ಮತ್ತು ಜನಪ್ರಿಯತೆಗಿಂತ ಜನಹಿತ ತತ್ವ ಆಧರಿಸಿದೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ವಿಭೂತಿಹಳ್ಳಿ ಹೇಳಿದರು.</p>.<p>‘ಆತ್ಮನಿರ್ಭರತೆ ಮತ್ತು ವಿಕಸಿತ ಭಾರತ ಸ್ವಾವಲಂಬನೆ ಗುರಿಯನ್ನು ಇರಿಸಿಕೊಂಡು ಉದ್ಯೋಗ ಸೃಷ್ಟಿ, ಕೃಷಿ ಉತ್ಪಾದಕತೆ ಮತ್ತು ಕೊಳ್ಳುವ ಶಕ್ತಿಯನ್ನು ಹೆಚ್ಚಿಸಲು ಒತ್ತು ನೀಡಲಾಗಿದೆ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸುವುದು, ನಾಗರಿಕರ ಆಶಯಗಳನ್ನು ಈಡೇರಿಸುವುದು ಮತ್ತು ಆಡಳಿತದಲ್ಲಿ ಎಐನಂತಹ ಸುಧಾರಿತ ತಂತ್ರಜ್ಞಾನ ಬಜೆಟ್ನ ಆಧಾರ ಸ್ತಂಭಗಳಾಗಿವೆ. 350ಕ್ಕೂ ಹೆಚ್ಚು ಸುಧಾರಣೆಗಳ ಮೇಲೆ ಈ ಬಜೆಟ್ ನಿಂತಿದೆ. ವಿತ್ತೀಯ ಕೊರತೆಯನ್ನು ಜಿಡಿಪಿಯ ಶೇ 4.3ಕ್ಕೆ ಇಳಿಸಲಾಗಿದೆ. 2030–31ರ ವೇಳೆಗೆ ಸಾಲದ ಪ್ರಮಾಣವನ್ನು ಶೇ 50ಕ್ಕೆ ತರುವ ಗುರಿ ಹಾಕಿಕೊಳ್ಳಲಾಗಿದೆ’ ಎಂದರು.</p>.<p>‘16ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ ಶೇ 41ರಷ್ಟು ತೆರಿಗೆ ಪಾಲು ಮತ್ತು ₹ 1.4 ಲಕ್ಷ ಕೋಟಿ ಅನುದಾನ ನೀಡಲಾಗುತ್ತಿದೆ. ₹ 12 ಲಕ್ಷದ ವರೆಗೆ ಶೂನ್ಯ ಆದಾಯ ತೆರಿಗೆ ಸೌಲಭ್ಯ ಮುಂದುವರಿಸಲಾಗಿದೆ. ಸೇವಾ ವಲಯದಲ್ಲಿ ಭಾರತದ ಪಾಲು 2047ರ ವೇಳೆಗೆ ಶೇ 10ಕ್ಕೆ ಹೆಚ್ಚಿಸಲು ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ’ ಎಂದು ಹೇಳಿದರು.</p>.<p>‘ಸಣ್ಣ ಉದ್ಯಮಗಳ ಬೆಳವಣಿಗೆಗಾಗಿ ₹10 ಸಾವಿರ ಕೋಟಿ ಮೊತ್ತದ ವಿಶೇಷ ನಿಧಿ ಮುಕ್ತ ಮೈಕ್ರೊ ಉದ್ಯಮಗಳಿಗೆ ಸ್ವಾವಲಂಬಿ ಭಾರತ ನಿಧಿಗೆ ಹೆಚ್ಚುವರಿಯಾಗಿ ₹ 2 ಸಾವಿರ ಕೋಟಿ ನೀಡಲಾಗಿದೆ. ಬಯೊಫಾರ್ಮಾ ಹಬ್ಗಾಗಿ ಮುಂದಿನ 5 ವರ್ಷಗಳಿಗೆ ₹ 10 ಸಾವಿರ ಕೋಟಿ ಮೀಸಲಿಡಲಾಗಿದೆ’ ಎಂದರು.</p>.<p>ಬಿಜೆಪಿ ಮುಖಂಡ ಮಹೇಶರೆಡ್ಡಿ ಮುದ್ನಾಳ ಮಾತನಾಡಿ, ‘ದೇಶದಾದ್ಯಂತ ಏಳು ಹೊಸ ಹೈಸ್ಪೀಡ್ ರೈಲು ಕಾರಿಡಾರ್ಗಳನ್ನು ಘೋಷಿಸಿದ್ದು, ಅದರಲ್ಲಿ ಹೈದರಾಬಾದ್– ಬೆಂಗಳೂರು ಮತ್ತು ಚೆನ್ನೈ– ಬೆಂಗಳೂರಿಗೂ ಎರಡು ಕಾರಿಡಾರ್ ಲಭಿಸಿದೆ. ಭಾರತದ ಸೆಮಿಕಂಡಕ್ಟರ್ ವ್ಯವಸ್ಥೆಯ ಬಲವರ್ಧನೆಗೂ ಆದ್ಯತೆ ಕೊಡಲಾಗಿದೆ’ ಎಂದರು.</p>.<p>ಮುಖಂಡರಾದ ನಾಗರತ್ನ ಕುಪ್ಪಿ ಮಾತನಾಡಿ, ‘ಜಿಲ್ಲೆಯಲ್ಲಿ ನಿಲುಗಡೆಯಾಗದ ರೈಲುಗಳನ್ನು ನಿಲ್ಲಿಸುವ ನಿಟ್ಟಿನಲ್ಲಿ ಇನ್ನಷ್ಟು ಕಾರ್ಯಪ್ರವೃತ್ತರಾಗುತ್ತೇವೆ’ ಎಂದು ಹೇಳಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ದೇವಿಂದ್ರನಾಥ ನಾದ, ಶರಣಗೋಪಾಲರೆಡ್ಡಿ, ವಿರುಪಾಕ್ಷಯ್ಯ ಸ್ವಾಮಿ ಸೇರಿ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ‘ಕರ್ತವ್ಯ ಭವನದಲ್ಲಿ ಮೊದಲ ಬಾರಿಗೆ ಮಂಡನೆಯಾದ ಕೇಂದ್ರ ಸರ್ಕಾರದ ಬಜೆಟ್ ಅಸ್ಪಷ್ಟತೆಗಿಂತ ಕ್ರಿಯೆ, ಆಡಂಬರಕ್ಕಿಂತ ಸುಧಾರಣೆ ಮತ್ತು ಜನಪ್ರಿಯತೆಗಿಂತ ಜನಹಿತ ತತ್ವ ಆಧರಿಸಿದೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ವಿಭೂತಿಹಳ್ಳಿ ಹೇಳಿದರು.</p>.<p>‘ಆತ್ಮನಿರ್ಭರತೆ ಮತ್ತು ವಿಕಸಿತ ಭಾರತ ಸ್ವಾವಲಂಬನೆ ಗುರಿಯನ್ನು ಇರಿಸಿಕೊಂಡು ಉದ್ಯೋಗ ಸೃಷ್ಟಿ, ಕೃಷಿ ಉತ್ಪಾದಕತೆ ಮತ್ತು ಕೊಳ್ಳುವ ಶಕ್ತಿಯನ್ನು ಹೆಚ್ಚಿಸಲು ಒತ್ತು ನೀಡಲಾಗಿದೆ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸುವುದು, ನಾಗರಿಕರ ಆಶಯಗಳನ್ನು ಈಡೇರಿಸುವುದು ಮತ್ತು ಆಡಳಿತದಲ್ಲಿ ಎಐನಂತಹ ಸುಧಾರಿತ ತಂತ್ರಜ್ಞಾನ ಬಜೆಟ್ನ ಆಧಾರ ಸ್ತಂಭಗಳಾಗಿವೆ. 350ಕ್ಕೂ ಹೆಚ್ಚು ಸುಧಾರಣೆಗಳ ಮೇಲೆ ಈ ಬಜೆಟ್ ನಿಂತಿದೆ. ವಿತ್ತೀಯ ಕೊರತೆಯನ್ನು ಜಿಡಿಪಿಯ ಶೇ 4.3ಕ್ಕೆ ಇಳಿಸಲಾಗಿದೆ. 2030–31ರ ವೇಳೆಗೆ ಸಾಲದ ಪ್ರಮಾಣವನ್ನು ಶೇ 50ಕ್ಕೆ ತರುವ ಗುರಿ ಹಾಕಿಕೊಳ್ಳಲಾಗಿದೆ’ ಎಂದರು.</p>.<p>‘16ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ ಶೇ 41ರಷ್ಟು ತೆರಿಗೆ ಪಾಲು ಮತ್ತು ₹ 1.4 ಲಕ್ಷ ಕೋಟಿ ಅನುದಾನ ನೀಡಲಾಗುತ್ತಿದೆ. ₹ 12 ಲಕ್ಷದ ವರೆಗೆ ಶೂನ್ಯ ಆದಾಯ ತೆರಿಗೆ ಸೌಲಭ್ಯ ಮುಂದುವರಿಸಲಾಗಿದೆ. ಸೇವಾ ವಲಯದಲ್ಲಿ ಭಾರತದ ಪಾಲು 2047ರ ವೇಳೆಗೆ ಶೇ 10ಕ್ಕೆ ಹೆಚ್ಚಿಸಲು ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ’ ಎಂದು ಹೇಳಿದರು.</p>.<p>‘ಸಣ್ಣ ಉದ್ಯಮಗಳ ಬೆಳವಣಿಗೆಗಾಗಿ ₹10 ಸಾವಿರ ಕೋಟಿ ಮೊತ್ತದ ವಿಶೇಷ ನಿಧಿ ಮುಕ್ತ ಮೈಕ್ರೊ ಉದ್ಯಮಗಳಿಗೆ ಸ್ವಾವಲಂಬಿ ಭಾರತ ನಿಧಿಗೆ ಹೆಚ್ಚುವರಿಯಾಗಿ ₹ 2 ಸಾವಿರ ಕೋಟಿ ನೀಡಲಾಗಿದೆ. ಬಯೊಫಾರ್ಮಾ ಹಬ್ಗಾಗಿ ಮುಂದಿನ 5 ವರ್ಷಗಳಿಗೆ ₹ 10 ಸಾವಿರ ಕೋಟಿ ಮೀಸಲಿಡಲಾಗಿದೆ’ ಎಂದರು.</p>.<p>ಬಿಜೆಪಿ ಮುಖಂಡ ಮಹೇಶರೆಡ್ಡಿ ಮುದ್ನಾಳ ಮಾತನಾಡಿ, ‘ದೇಶದಾದ್ಯಂತ ಏಳು ಹೊಸ ಹೈಸ್ಪೀಡ್ ರೈಲು ಕಾರಿಡಾರ್ಗಳನ್ನು ಘೋಷಿಸಿದ್ದು, ಅದರಲ್ಲಿ ಹೈದರಾಬಾದ್– ಬೆಂಗಳೂರು ಮತ್ತು ಚೆನ್ನೈ– ಬೆಂಗಳೂರಿಗೂ ಎರಡು ಕಾರಿಡಾರ್ ಲಭಿಸಿದೆ. ಭಾರತದ ಸೆಮಿಕಂಡಕ್ಟರ್ ವ್ಯವಸ್ಥೆಯ ಬಲವರ್ಧನೆಗೂ ಆದ್ಯತೆ ಕೊಡಲಾಗಿದೆ’ ಎಂದರು.</p>.<p>ಮುಖಂಡರಾದ ನಾಗರತ್ನ ಕುಪ್ಪಿ ಮಾತನಾಡಿ, ‘ಜಿಲ್ಲೆಯಲ್ಲಿ ನಿಲುಗಡೆಯಾಗದ ರೈಲುಗಳನ್ನು ನಿಲ್ಲಿಸುವ ನಿಟ್ಟಿನಲ್ಲಿ ಇನ್ನಷ್ಟು ಕಾರ್ಯಪ್ರವೃತ್ತರಾಗುತ್ತೇವೆ’ ಎಂದು ಹೇಳಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ದೇವಿಂದ್ರನಾಥ ನಾದ, ಶರಣಗೋಪಾಲರೆಡ್ಡಿ, ವಿರುಪಾಕ್ಷಯ್ಯ ಸ್ವಾಮಿ ಸೇರಿ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>