<p><strong>ಸೈದಾಪುರ:</strong> ಸಮೀಪದ ಆನೂರು (ಬಿ)ಗ್ರಾಮದಲ್ಲಿ ಸಮಸ್ಯೆಗಳು ತಾಂಡವವಾಡುತ್ತಿದ್ದರೂ ಜನಪ್ರತಿ<br />ನಿಧಿಗಳು ಗಾಢನಿದ್ರೆಯಲ್ಲಿರುವಂತೆ ಕಾಣುತ್ತಿದೆ. ಗ್ರಾಮದಲ್ಲಿ 700 ರಿಂದ 800 ಜನಸಂಖ್ಯೆ ಇದ್ದು ಮೂಲ ಸೌಕರ್ಯಗಳ ಕೊರತೆ ಎದ್ದು ಕಾಣಿಸುತ್ತಿದೆ.</p>.<p>2018ರಲ್ಲಿ ನಿರ್ಮಾಣವಾದ ಶುದ್ಧ ನೀರಿನ ಘಟಕವು ಪ್ರಾರಂಭವಾದ ಕೇವಲ ಒಂದು ವರ್ಷದಲ್ಲಿ ಸ್ಥಗಿತಗೊಂಡಿದೆ. ಇದಕ್ಕೆಸಮರ್ಪಕವಾದ ವಿದ್ಯುತ್ ಪೂರೈಕೆ ವ್ಯವಸ್ಥೆ ಇಲ್ಲ. ಹಾಗೆಯೇ ಇದಕ್ಕೆ ಸೀಮಿತವಾದ ನೀರಿನ ಕೊಳವೆ ಬಾವಿ ಇಲ್ಲ.</p>.<p>ನೀರು ಶುದ್ಧೀಕರಿಸುವ ಯಂತ್ರೋಪಕರಣಗಳು ಕಳಪೆಯಾಗಿವೆ. ಒಂದು ವರ್ಷದಲ್ಲಿ ಹಾಳಾಗಿವೆ. ಇದನ್ನು ಸರಿಪಡಿಸಲು ಅಧಿಕಾರಿಗಳಾಗಲೀ ಜನಪ್ರತಿನಿಧಿಗಳಾಗಲೀ ಮುತುವರ್ಜಿ ವಹಿಸಿಲ್ಲ. ಜನರು ದೂರದ ಕೊಳವೆ ಬಾವಿಯ ನೀರನ್ನು ಕುಡಿಯಲು ಮತ್ತು ಬಳಸಲು ಅವಲಂಬಿಸಿದ್ದಾರೆ.</p>.<p><strong>ಸರ್ಕಾರಿ ಶಾಲೆಗೆ ಸ್ಥಳದ ಕೊರತೆ:</strong>ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಾಜರಾತಿ ಉತ್ತಮವಾಗಿ ಇದೆ. ಆದರೆ ಮಕ್ಕಳು ಸರಿಯಾದ ಆಟದ ಮೈದಾನ, ತರಗತಿ ಕೋಣೆಗಳ ಕೊರತೆ ಅನುಭವಿಸುತ್ತಿದ್ದಾರೆ. ಅದ್ದರಿಂದ ಸರ್ಕಾರ ಬೇರೆ ಕಡೆ ಸ್ಥಳ ಗುರುತಿಸಿ ಹೊಸ ಶಾಲೆ ನಿರ್ಮಾಣ ಮಾಡಬೇಕು ಎಂಬುದು ಸ್ಥಳೀಯರ ಒತ್ತಾಯವಾಗಿದೆ.</p>.<p><strong>ಚರಂಡಿ ಸಮಸ್ಯೆ:</strong> ಸರಿಯಾದ ಚರಂಡಿ ಇಲ್ಲದೆ ಇರುವುದರಿಂದ ಚರಂಡಿ ನೀರು ರಸ್ತೆಯ ಮೇಲೆ ಹರಿದು, ಮನೆಯ ಮುಂದಿನ ಅಂಗಳಗಲ್ಲಿ ಕೊಳಚೆ ನೀರು ತುಂಬಿ ಕೆಟ್ಟ ವಾಸನೆ ಬೀರುತ್ತಿದೆ. ಆರೋಗ್ಯದ ಮೇಲೆ ತೀವ್ರವಾದ ದುಷ್ಪರಿಣಾಮ ಬೀರುತ್ತಿದೆ.</p>.<p><strong>ಹದಗೆಟ್ಟ ರಸ್ತೆ ಸಂಚಾರ ವ್ಯವಸ್ಥೆ:</strong> ಗ್ರಾಮದ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ. ವಾಹನಸಂಚಾರಕ್ಕೆ ಸುರಕ್ಷಿತವಾಗಿಲ್ಲ. ವಾಹನ ಸವಾರರು ಹರಸಾಹಸ ಪಡುತ್ತ , ಹಿಡಿಶಾಪ ಹಾಕುತ್ತ ಸಾಗುತ್ತಿರುವ ದೃಶ್ಯ ಸಾಮಾನ್ಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೈದಾಪುರ:</strong> ಸಮೀಪದ ಆನೂರು (ಬಿ)ಗ್ರಾಮದಲ್ಲಿ ಸಮಸ್ಯೆಗಳು ತಾಂಡವವಾಡುತ್ತಿದ್ದರೂ ಜನಪ್ರತಿ<br />ನಿಧಿಗಳು ಗಾಢನಿದ್ರೆಯಲ್ಲಿರುವಂತೆ ಕಾಣುತ್ತಿದೆ. ಗ್ರಾಮದಲ್ಲಿ 700 ರಿಂದ 800 ಜನಸಂಖ್ಯೆ ಇದ್ದು ಮೂಲ ಸೌಕರ್ಯಗಳ ಕೊರತೆ ಎದ್ದು ಕಾಣಿಸುತ್ತಿದೆ.</p>.<p>2018ರಲ್ಲಿ ನಿರ್ಮಾಣವಾದ ಶುದ್ಧ ನೀರಿನ ಘಟಕವು ಪ್ರಾರಂಭವಾದ ಕೇವಲ ಒಂದು ವರ್ಷದಲ್ಲಿ ಸ್ಥಗಿತಗೊಂಡಿದೆ. ಇದಕ್ಕೆಸಮರ್ಪಕವಾದ ವಿದ್ಯುತ್ ಪೂರೈಕೆ ವ್ಯವಸ್ಥೆ ಇಲ್ಲ. ಹಾಗೆಯೇ ಇದಕ್ಕೆ ಸೀಮಿತವಾದ ನೀರಿನ ಕೊಳವೆ ಬಾವಿ ಇಲ್ಲ.</p>.<p>ನೀರು ಶುದ್ಧೀಕರಿಸುವ ಯಂತ್ರೋಪಕರಣಗಳು ಕಳಪೆಯಾಗಿವೆ. ಒಂದು ವರ್ಷದಲ್ಲಿ ಹಾಳಾಗಿವೆ. ಇದನ್ನು ಸರಿಪಡಿಸಲು ಅಧಿಕಾರಿಗಳಾಗಲೀ ಜನಪ್ರತಿನಿಧಿಗಳಾಗಲೀ ಮುತುವರ್ಜಿ ವಹಿಸಿಲ್ಲ. ಜನರು ದೂರದ ಕೊಳವೆ ಬಾವಿಯ ನೀರನ್ನು ಕುಡಿಯಲು ಮತ್ತು ಬಳಸಲು ಅವಲಂಬಿಸಿದ್ದಾರೆ.</p>.<p><strong>ಸರ್ಕಾರಿ ಶಾಲೆಗೆ ಸ್ಥಳದ ಕೊರತೆ:</strong>ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಾಜರಾತಿ ಉತ್ತಮವಾಗಿ ಇದೆ. ಆದರೆ ಮಕ್ಕಳು ಸರಿಯಾದ ಆಟದ ಮೈದಾನ, ತರಗತಿ ಕೋಣೆಗಳ ಕೊರತೆ ಅನುಭವಿಸುತ್ತಿದ್ದಾರೆ. ಅದ್ದರಿಂದ ಸರ್ಕಾರ ಬೇರೆ ಕಡೆ ಸ್ಥಳ ಗುರುತಿಸಿ ಹೊಸ ಶಾಲೆ ನಿರ್ಮಾಣ ಮಾಡಬೇಕು ಎಂಬುದು ಸ್ಥಳೀಯರ ಒತ್ತಾಯವಾಗಿದೆ.</p>.<p><strong>ಚರಂಡಿ ಸಮಸ್ಯೆ:</strong> ಸರಿಯಾದ ಚರಂಡಿ ಇಲ್ಲದೆ ಇರುವುದರಿಂದ ಚರಂಡಿ ನೀರು ರಸ್ತೆಯ ಮೇಲೆ ಹರಿದು, ಮನೆಯ ಮುಂದಿನ ಅಂಗಳಗಲ್ಲಿ ಕೊಳಚೆ ನೀರು ತುಂಬಿ ಕೆಟ್ಟ ವಾಸನೆ ಬೀರುತ್ತಿದೆ. ಆರೋಗ್ಯದ ಮೇಲೆ ತೀವ್ರವಾದ ದುಷ್ಪರಿಣಾಮ ಬೀರುತ್ತಿದೆ.</p>.<p><strong>ಹದಗೆಟ್ಟ ರಸ್ತೆ ಸಂಚಾರ ವ್ಯವಸ್ಥೆ:</strong> ಗ್ರಾಮದ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ. ವಾಹನಸಂಚಾರಕ್ಕೆ ಸುರಕ್ಷಿತವಾಗಿಲ್ಲ. ವಾಹನ ಸವಾರರು ಹರಸಾಹಸ ಪಡುತ್ತ , ಹಿಡಿಶಾಪ ಹಾಕುತ್ತ ಸಾಗುತ್ತಿರುವ ದೃಶ್ಯ ಸಾಮಾನ್ಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>