ಈ ವೇಳೆ ಸಂಘದ ಅಧ್ಯಕ್ಷೆ ಡಿ.ಉಮಾದೇವಿ ಮಾತನಾಡಿ, ‘ಲಾಕ್ಡೌನ್ನಿಂದಾಗಿ ಜನ ಮನೆಗಳಲ್ಲೇ ಸುರಕ್ಷಿತವಾಗಿರುವ ವಿಷಮ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ತಮ್ಮ ಜೀವದ ಹಂಗು ತೊರೆದು ಉತ್ತಮವಾಗಿ ಕಾರ್ಯನಿರ್ವಹಿಸುತ್ತಾ ರೋಗ ಹರಡುವಿಕೆಯನ್ನು ತಡೆಗಟ್ಟಲು ಈಗಲೂ ಶ್ರಮಿಸುತ್ತಿದ್ದಾರೆ. ಆಶಾ ಕಾರ್ಯಕರ್ತೆಯರ ಮೇಲಿನ ಹಲ್ಲೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು, ಆಶಾ ಸಮುದಾಯಕ್ಕೆ ತುಂಬಾ ಭಯ-ಆತಂಕವನ್ನು ಉಂಟುಮಾಡಿದೆ ಎಂದರು.