ಈ ವೇಳೆ ಮಾತನಾಡಿದ ಮುಖಂಡರು, ರಾಜ್ಯದಲ್ಲಿ ನಗರ ಜನಸಂಖ್ಯೆಯ ಶೇ 40 ಜನರು 3,699 ಕೊಳಗೇರಿಗಳಲ್ಲಿ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಇದರಲ್ಲಿ 2,780 ಕೊಳಚೆ ಪ್ರದೇಶಗಳು ಕಾನೂನು ವ್ಯಾಪ್ತಿಗೆ ಒಳಪಟ್ಟಿದ್ದು, 1973ರಲ್ಲಿ ಜಾರಿಯಾದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಕಾಯ್ದೆ ಮತ್ತು 2016ರ ಕರ್ನಾಟಕ ಕೊಳಗೇರಿಗಳ ಸಮಗ್ರ ಅಭಿವೃದ್ಧಿ ನೀತಿ ಅನ್ವಯ ಜನಸಂಖ್ಯೆವಾರು ಪಾಲು ನೀಡಿ 2023-24ರ ಸಾಲಿನ ರಾಜ್ಯ ಬಜೆಟ್ನಲ್ಲಿ ಕೊಳಗೇರಿಗಳ ಸಮಗ್ರ ಅಭಿವೃದ್ಧಿಗೆ ₹1 ಸಾವಿರ ಕೋಟಿ ನೀಡಬೇಕು ಎಂದು ಒತ್ತಾಯಿಸಿದರು.