<p><strong>ಸುರಪುರ: ‘ಕೆಂ</strong>ಭಾವಿ ಮತ್ತು ಕಕ್ಕೇರಾ ಪುರಸಭೆಗೆ ನಿಯುಕ್ತಿಗೊಂಡಿರುವ ಸುರಪುರದ ಪೌರ ಕಾರ್ಮಿಕರನ್ನು ಸುರಪುರ ನಗರಸಭೆಗೆ ವರ್ಗಾಯಿಸಬೇಕು’ ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ಬಣದ ಮುಖಂಡರು ಶನಿವಾರ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ<br />ನಡೆಸಿದರು.</p>.<p>ಸಮಿತಿಯ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ, ‘ಕೆಂಭಾವಿ ಮತ್ತು ಕಕ್ಕೇರಾ ಪುರಸಭೆಯ ಕರ್ತವ್ಯಕ್ಕೆ ನಿಯುಕ್ತಿಗೊಂಡಿರುವ ಸುರಪುರದ ಕೆಲ ಪೌರಕಾರ್ಮಿಕರು 4 ವರ್ಷಗಳಿಂದ ಪ್ರತಿ ದಿನ ಆಟೋದಲ್ಲಿ ಹೋಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪೌರ ಕಾರ್ಮಿಕರು ಪರಿಶಿಷ್ಟ ಜಾತಿ ಎಂಬ ಕಾರಣಕ್ಕೆ ಯಾರೊಬ್ಬರು ಮನೆ ಬಾಡಿಗೆ ನೀಡುತ್ತಿಲ್ಲ. ಹೀಗಾಗಿ ಕಾರ್ಮಿಕರು ಕರ್ತವ್ಯಕ್ಕೆ ಹಾಜರಾಗಲು ದಿನನಿತ್ಯ ಸಂಕಷ್ಟ ಎದುರಿಸುವಂತಾಗಿದೆ’ ಎಂದು ದೂರಿದರು.</p>.<p>‘ಬೆಳಗಿನ ಸಮಯದಲ್ಲಿ ಸ್ವಚ್ಛತೆಯ ಕೆಲಸವಿರುತ್ತದೆ. ಆ ಸಮಯದಲ್ಲಿ ಬಸ್ ಸೌಕರ್ಯ ಇಲ್ಲ. ಆಟೋದಲ್ಲಿ ಹೋಗುವ ಅನಿವಾರ್ಯತೆ ಇದೆ. ಇದರಿಂದ ಕಾರ್ಮಿಕರು ಜೀವನ ಸಾಗಿಸುವುದು ಕಷ್ಟವಾಗಿದೆ. ಅವರನ್ನು ಸುರಪುರ ನಗರಸಭೆಗೆ ವರ್ಗಾಯಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಸುರಪುರ ನಗರಸಭೆಯಲ್ಲಿ ಕೆಲ ನೌಕರರು 10 ವರ್ಷಕ್ಕೂ ಹೆಚ್ಚಿನ ಕಾಲದಿಂದ ಕೆಲಸ ಮಾಡುತ್ತಿದ್ದಾರೆ. ಬಹುತೇಕರು ಸ್ಥಳೀಯರಾಗಿದ್ದು ಕಚೇರಿಗೆ ಬರುವ ಜನರಿಗೆ ಸರಿಯಾಗಿ ಸ್ಪಂದಿಸುವುದಿಲ್ಲ. ಮನಸ್ಸೋ ಇಚ್ಛೆ ವರ್ತಿಸುತ್ತಾರೆ. ಆಸ್ತಿ ದಾಖಲಾತಿ ನೀಡಲು ಸಿಕ್ಕಾಪಟ್ಟೆ ಹಣ ಕೇಳುತ್ತಾರೆ. ಈ ಬಗ್ಗೆ ಕೇಳಿದರೆ ಹೆದರಿಸುತ್ತಾರೆ’ ಎಂದು ಆರೋಪಿಸಿದರು.</p>.<p>‘ವರ್ಗಾವಣೆ ಆಗಿದ್ದರು ರಾಜಕೀಯ ಪ್ರಭಾವ ಬಳಸಿ ನಿಯೋಜತ ಸ್ಥಳಕ್ಕೆ ಹೋಗದೆ ಇಲ್ಲಿಯೇ ಉಳಿದಿದ್ದಾರೆ. 10 ವರ್ಷ ಮೇಲ್ಪಟ್ಟು ಸೇವೆಯಲ್ಲಿರುವ ನೌಕರರನ್ನು ಬೇರೆಡೆಗೆ ವರ್ಗ ಮಾಡಬೇಕು. ನಿರ್ಲಕ್ಷ ವಹಿಸಿದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಅಮರಣಾಂತ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುವುದಾಗಿ’ ಎಚ್ಚರಿಸಿದರು.</p>.<p>ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ಅವರಿಗೆ ಮನವಿ ಪತ್ರ<br />ಸಲ್ಲಿಸಿದರು.</p>.<p>ರಾಮು ಶೆಳ್ಳಗಿ, ಮಾನಪ್ಪ ಬಿಜಾಸ್ಪೂರ, ಮೂರ್ತಿ ಬೊಮ್ಮನಳ್ಳಿ, ಧರ್ಮರಾಜ ಬಡಿಗೇರ, ಮಲ್ಲು ಬಿಲ್ಲವ್, ಮಲ್ಲಪ್ಪ ಕೆಸಿಪಿ, ಖಾಜಾಹುಸೇನ ಗುಡುಗುಂಟಿ, ರಮೇಶ ಅರಿಕೇರಿ, ಜಟ್ಟೆಪ್ಪ ನಾಗರಾಳ, ಮುತ್ತುರಾಜ, ಹುಲಗಪ್ಪ ಜಾಂಗೀರ, ರಾಮಣ್ಣ ಬಬಲಾದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ: ‘ಕೆಂ</strong>ಭಾವಿ ಮತ್ತು ಕಕ್ಕೇರಾ ಪುರಸಭೆಗೆ ನಿಯುಕ್ತಿಗೊಂಡಿರುವ ಸುರಪುರದ ಪೌರ ಕಾರ್ಮಿಕರನ್ನು ಸುರಪುರ ನಗರಸಭೆಗೆ ವರ್ಗಾಯಿಸಬೇಕು’ ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ಬಣದ ಮುಖಂಡರು ಶನಿವಾರ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ<br />ನಡೆಸಿದರು.</p>.<p>ಸಮಿತಿಯ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ, ‘ಕೆಂಭಾವಿ ಮತ್ತು ಕಕ್ಕೇರಾ ಪುರಸಭೆಯ ಕರ್ತವ್ಯಕ್ಕೆ ನಿಯುಕ್ತಿಗೊಂಡಿರುವ ಸುರಪುರದ ಕೆಲ ಪೌರಕಾರ್ಮಿಕರು 4 ವರ್ಷಗಳಿಂದ ಪ್ರತಿ ದಿನ ಆಟೋದಲ್ಲಿ ಹೋಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪೌರ ಕಾರ್ಮಿಕರು ಪರಿಶಿಷ್ಟ ಜಾತಿ ಎಂಬ ಕಾರಣಕ್ಕೆ ಯಾರೊಬ್ಬರು ಮನೆ ಬಾಡಿಗೆ ನೀಡುತ್ತಿಲ್ಲ. ಹೀಗಾಗಿ ಕಾರ್ಮಿಕರು ಕರ್ತವ್ಯಕ್ಕೆ ಹಾಜರಾಗಲು ದಿನನಿತ್ಯ ಸಂಕಷ್ಟ ಎದುರಿಸುವಂತಾಗಿದೆ’ ಎಂದು ದೂರಿದರು.</p>.<p>‘ಬೆಳಗಿನ ಸಮಯದಲ್ಲಿ ಸ್ವಚ್ಛತೆಯ ಕೆಲಸವಿರುತ್ತದೆ. ಆ ಸಮಯದಲ್ಲಿ ಬಸ್ ಸೌಕರ್ಯ ಇಲ್ಲ. ಆಟೋದಲ್ಲಿ ಹೋಗುವ ಅನಿವಾರ್ಯತೆ ಇದೆ. ಇದರಿಂದ ಕಾರ್ಮಿಕರು ಜೀವನ ಸಾಗಿಸುವುದು ಕಷ್ಟವಾಗಿದೆ. ಅವರನ್ನು ಸುರಪುರ ನಗರಸಭೆಗೆ ವರ್ಗಾಯಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಸುರಪುರ ನಗರಸಭೆಯಲ್ಲಿ ಕೆಲ ನೌಕರರು 10 ವರ್ಷಕ್ಕೂ ಹೆಚ್ಚಿನ ಕಾಲದಿಂದ ಕೆಲಸ ಮಾಡುತ್ತಿದ್ದಾರೆ. ಬಹುತೇಕರು ಸ್ಥಳೀಯರಾಗಿದ್ದು ಕಚೇರಿಗೆ ಬರುವ ಜನರಿಗೆ ಸರಿಯಾಗಿ ಸ್ಪಂದಿಸುವುದಿಲ್ಲ. ಮನಸ್ಸೋ ಇಚ್ಛೆ ವರ್ತಿಸುತ್ತಾರೆ. ಆಸ್ತಿ ದಾಖಲಾತಿ ನೀಡಲು ಸಿಕ್ಕಾಪಟ್ಟೆ ಹಣ ಕೇಳುತ್ತಾರೆ. ಈ ಬಗ್ಗೆ ಕೇಳಿದರೆ ಹೆದರಿಸುತ್ತಾರೆ’ ಎಂದು ಆರೋಪಿಸಿದರು.</p>.<p>‘ವರ್ಗಾವಣೆ ಆಗಿದ್ದರು ರಾಜಕೀಯ ಪ್ರಭಾವ ಬಳಸಿ ನಿಯೋಜತ ಸ್ಥಳಕ್ಕೆ ಹೋಗದೆ ಇಲ್ಲಿಯೇ ಉಳಿದಿದ್ದಾರೆ. 10 ವರ್ಷ ಮೇಲ್ಪಟ್ಟು ಸೇವೆಯಲ್ಲಿರುವ ನೌಕರರನ್ನು ಬೇರೆಡೆಗೆ ವರ್ಗ ಮಾಡಬೇಕು. ನಿರ್ಲಕ್ಷ ವಹಿಸಿದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಅಮರಣಾಂತ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುವುದಾಗಿ’ ಎಚ್ಚರಿಸಿದರು.</p>.<p>ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ಅವರಿಗೆ ಮನವಿ ಪತ್ರ<br />ಸಲ್ಲಿಸಿದರು.</p>.<p>ರಾಮು ಶೆಳ್ಳಗಿ, ಮಾನಪ್ಪ ಬಿಜಾಸ್ಪೂರ, ಮೂರ್ತಿ ಬೊಮ್ಮನಳ್ಳಿ, ಧರ್ಮರಾಜ ಬಡಿಗೇರ, ಮಲ್ಲು ಬಿಲ್ಲವ್, ಮಲ್ಲಪ್ಪ ಕೆಸಿಪಿ, ಖಾಜಾಹುಸೇನ ಗುಡುಗುಂಟಿ, ರಮೇಶ ಅರಿಕೇರಿ, ಜಟ್ಟೆಪ್ಪ ನಾಗರಾಳ, ಮುತ್ತುರಾಜ, ಹುಲಗಪ್ಪ ಜಾಂಗೀರ, ರಾಮಣ್ಣ ಬಬಲಾದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>