ಶಹಾಪುರ: ಕೋಲಾರ ಜಿಲ್ಲೆಯ ಉಳ್ಳೇರಹಳ್ಳಿ ಗ್ರಾಮದಲ್ಲಿ ಗುಜ್ಜುಕೋಲು ಮುಟ್ಟಿದ ಪರಿಶಿಷ್ಟ ಜಾತಿ ಬಾಲಕನಿಗೆ ದಂಡ ವಿಧಿಸಿದ ಘಟನೆಯನ್ನು ಖಂಡಿಸಿ ಗುರುವಾರ ರಾಜ್ಯ ದಲಿತ ಸಂಘರ್ಷ ಸಮಿತಿಯ ಮುಖಂಡರು ತಹಶೀಲ್ದಾರ ಮಧುರಾಜ ಕೂಡ್ಲೂಗಿ ಅವರಿಗೆ ಮನವಿ ಸಲ್ಲಿಸಿದರು.
ಮುಗ್ದ ಮಕ್ಕಳ ಮೇಲೆ ಜಾತಿಯ ವಿಷ ಬೀಜದ ನೆರಳು ಹಾಕಿರುವ ದುಷ್ಟಶಕ್ತಿಗಳನ್ನು ಬಂಧಿಸಿ ಗಡಿಪಾರು ಮಾಡಬೇಕು. ಇಂತಹ ಘಟನೆ ನಡೆದಾಗ ಅಧಿಕಾರಿಗಳು ಭೇಟಿ ನೀಡಿ ಕಣ್ಣೋರೊಸುವ ತಂತ್ರ ಬೇಡ. ಕಾನೂನು ಪಾಲನೆಯ ಮೂಲ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಮುಖಂಡರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕ ಶಿವುಪುತ್ರ ಜವಳಿ, ಶಿವುಕುಮಾರ ತಳವಾರ, ಮಲ್ಲಿಕಾರ್ಜುನ ಹುರಸಗುಂಡಗಿ. ಬಾಲರಾಜ ಖಾನಾಪುರ,ಮರೆಪ್ಪ ಕ್ರಾಂತಿ ಸೇರಿದಂತೆ ಸ್ಥಳೀಯರು ಇದ್ದರು.