ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಹಾಪುರ | ಲಂಚ ಆರೋಪ; ದರ್ಶನಾಪುರ ರಾಜೀನಾಮೆಗೆ ಆಗ್ರಹ

Last Updated 26 ಮಾರ್ಚ್ 2023, 7:16 IST
ಅಕ್ಷರ ಗಾತ್ರ

ಶಹಾಪುರ: ‘ಶಾಸಕ ಶರಣಬಸ್ಪಗೌಡ ದರ್ಶನಾಪುರ ವಿರುದ್ಧ ಕೇಳಿ ಬಮದಿರುವ ಲಂಚ ಆರೋಪದಿಂದ ಕ್ಷೇತ್ರದ ಜನತೆ ತಲೆ ತಗ್ಗಿಸುವಂತೆ ಆಗಿದೆ. ನೈತಿಕ ಹೊಣೆ ಹೊತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಮತ್ತು ಮುಂದಿನ ಚುನಾವಣೆಯಲ್ಲಿ ರಾಜಕೀಯ ನಿವೃತ್ತಿ ಪಡೆಯಬೇಕು’ ಎಂದು ಮಾಜಿ ಶಾಸಕ ಗುರು ಪಾಟೀಲ ಶಿರವಾಳ ಆಗ್ರಹಿಸಿದರು.

ನಗರದಲ್ಲಿ ಪ್ರತಿಭಟನಾ ಮರವಣಿಗೆಯಲ್ಲಿ ಅವರು ಮಾತನಾಡಿದರು. ಬಿಜೆಪಿಯದ್ದು 40 ಪರ್ಸೆಂಟ್ ಸರ್ಕಾರವೆಂದು ಆರೋಪ
ಮಾಡುವ ದರ್ಶನಾಪುರ ಅವರು ಲಂಚದ ಬಗ್ಗೆ ಬೇಡಿಕೆ ಇಟ್ಟಿದ್ದಾರೆ ಇಲ್ಲ ಎಂಬುದರ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಈ ವೇಳೆ ಮುಖಂಡರಾದ ಅಮಾತೆಪ್ಪ ಕಂದಕೂರ, ಡಾ.ಚಂದ್ರಶೇಖರ ಸುಬೇದಾರ, ದೇವು ಕೋನೇರ, ಗುರು ಕಾಮಾ, ರಾಜೂಗೌರ ಉಕ್ಕಿನಾಳ, ಶ್ರೀಕಾಂತ ಸುಬೇದಾರ, ಮರೆಪ್ಪ ಹಯ್ಯಾಳಕರ್, ಮಲ್ಲಿಕಾರ್ಜುನ ಗಂಧದಮಠ, ಸತೀಶ ಪಂಚಭಾವಿ, ಅಪ್ಪಣ್ಣ ದಶವಂತ, ಅಶೋಕ ನಾಯಕ, ರಾಮಚಂದ್ರ ಕಾಶಿರಾಜ ವನದುರ್ಗ, ಮರೆಪ್ಪ ಪ್ಯಾಟಿ, ಶೇಖರ ದೊರಿ, ಮಲ್ಲಿಕಾರ್ಜುನ ಕಂದಕೂರ, ಭೀಮಶಂಕರ ಕಟ್ಟಿಮನಿ, ರಾಘವೇಂದ್ರ ಯಕ್ಷಿಂತಿ, ಅಮರೇಶ ನಂದಿಕೋಲ, ಅಮೃತ ಹೂಗಾರ, ಸೋಮಶೇಖರ ಗುತ್ತಿಪೇಟ, ಡಾ,ವೆಂಕಟೇಶ, ಸಂತೋಷ ಭಾಸುತ್ಕರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT