<p><strong>ಗುರುಮಠಕಲ್: </strong>ಪೆಟ್ರೋಲ್, ಡೀಸೆಲ್ ಸೇರಿದಂತೆ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ತೈಲ ಉತ್ಪನ್ನಗಳನ್ನು ಜಿಎಸ್ಟಿ ವ್ಯಾಪ್ತಿಗೆ ತರಬೇಕು ಎಂದು ಆಗ್ರಹಿಸಿ ಬಿಎಸ್ಪಿ ತಾಲ್ಲೂಕು ಘಟಕದ ಕಾರ್ಯಕರ್ತರು ಗುರುವಾರ ತಹಶೀಲ್ದಾರ್ ಮಹಮ್ಮದ್ ಶಕೀಲ್ ಅವರಿಗೆ ಮನವಿ ಪತ್ರ ನೀಡಿದರು.</p>.<p>ಮನವಿ ಪತ್ರದಲ್ಲಿ ʼಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅವೈಜ್ಞಾನಿಕವಾಗಿ ತೈಲ ಉತ್ಪನ್ನಗಳ ಮೇಲೆ ಶೇ 300 ರಷ್ಟು ತೆರಿಗೆ ವಿಧಿಸಿರುವುದರಿಂದ ಬೆಲೆ ಏರಿಕೆಯಾಗುತ್ತಿದೆ. ಪೆಟ್ರೋಲ್ ಮೇಲೆ ಈ ಪ್ರಮಾಣದ ತೆರಿಗೆಯನ್ನು ವಿಧಿಸಿರುವ ಇನ್ನೊಂದು ದೇಶವನ್ನು ನಾವು ಕಾಣಲು ಸಾಧ್ಯವೇ ಇಲ್ಲ. ಆದ್ದರಿಂದ ಅವೈಜ್ಞಾನಿಕ ತೆರಿಗೆಯನ್ನು ಕೂಡಲೆ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.</p>.<p>ಅಡುಗೆ ಎಣ್ಣೆಯ ದರ ₹ 200ಕ್ಕೆ ತಲುಪಿದೆ. ಜನರು ಲಾಕ್ಡೌನ್ನಿಂದಾಗಿ ಈಗಾಗಲೇ ತುಂಬಾ ನಷ್ಟಲ್ಲಿದ್ದಾರೆ. ಕೋವಿಡ್ ಎರಡನೇ ಅಲೆಯನ್ನು ನಿಯಂತ್ರಿಸುವಲ್ಲಿಯೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿದು, ಜನರು ವೈದ್ಯಕೀಯ ಸೌಲಭ್ಯಗಳಿಗೆ ಪರದಾಡುವಂತಾಗಿದೆ. ಜನರನ್ನು ಶೋಷಿಸುತ್ತಿರುವ ಈ ಅವೈಜ್ಞಾನಿಕ ತೆರಿಗೆಯ ಕ್ರಮವನ್ನು ಕೈಬಿಡಬೇಕುʼ ಎಂದು ಕೋರಲಾಗಿದೆ.</p>.<p>ಬಿಎಸ್ಪಿಯ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಭೀಮಶಪ್ಪ ಗಾಡದನ, ಜಿಲ್ಲಾ ಕಾರ್ಯದರ್ಶಿ ಅಶೋಕ ಗಿರಿಗಿರಿ, ಬ್ಲಾಕ್ ಘಟಕದ ಅಧ್ಯಕ್ಷ ಮಹದೇವಪ್ಪ ಚಪೆಟ್ಲಾ, ಪ್ರಧಾನ ಕಾರ್ಯದರ್ಶಿ ಪ್ರಕಾಶ ಬಂಟು, ಭೀಮು ಗಿರಿಗಿರಿ, ಜಾನ್ ಪೆರಿಯಾರ್, ಅಬ್ಬಸ್ ಖಾನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುರುಮಠಕಲ್: </strong>ಪೆಟ್ರೋಲ್, ಡೀಸೆಲ್ ಸೇರಿದಂತೆ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ತೈಲ ಉತ್ಪನ್ನಗಳನ್ನು ಜಿಎಸ್ಟಿ ವ್ಯಾಪ್ತಿಗೆ ತರಬೇಕು ಎಂದು ಆಗ್ರಹಿಸಿ ಬಿಎಸ್ಪಿ ತಾಲ್ಲೂಕು ಘಟಕದ ಕಾರ್ಯಕರ್ತರು ಗುರುವಾರ ತಹಶೀಲ್ದಾರ್ ಮಹಮ್ಮದ್ ಶಕೀಲ್ ಅವರಿಗೆ ಮನವಿ ಪತ್ರ ನೀಡಿದರು.</p>.<p>ಮನವಿ ಪತ್ರದಲ್ಲಿ ʼಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅವೈಜ್ಞಾನಿಕವಾಗಿ ತೈಲ ಉತ್ಪನ್ನಗಳ ಮೇಲೆ ಶೇ 300 ರಷ್ಟು ತೆರಿಗೆ ವಿಧಿಸಿರುವುದರಿಂದ ಬೆಲೆ ಏರಿಕೆಯಾಗುತ್ತಿದೆ. ಪೆಟ್ರೋಲ್ ಮೇಲೆ ಈ ಪ್ರಮಾಣದ ತೆರಿಗೆಯನ್ನು ವಿಧಿಸಿರುವ ಇನ್ನೊಂದು ದೇಶವನ್ನು ನಾವು ಕಾಣಲು ಸಾಧ್ಯವೇ ಇಲ್ಲ. ಆದ್ದರಿಂದ ಅವೈಜ್ಞಾನಿಕ ತೆರಿಗೆಯನ್ನು ಕೂಡಲೆ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.</p>.<p>ಅಡುಗೆ ಎಣ್ಣೆಯ ದರ ₹ 200ಕ್ಕೆ ತಲುಪಿದೆ. ಜನರು ಲಾಕ್ಡೌನ್ನಿಂದಾಗಿ ಈಗಾಗಲೇ ತುಂಬಾ ನಷ್ಟಲ್ಲಿದ್ದಾರೆ. ಕೋವಿಡ್ ಎರಡನೇ ಅಲೆಯನ್ನು ನಿಯಂತ್ರಿಸುವಲ್ಲಿಯೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿದು, ಜನರು ವೈದ್ಯಕೀಯ ಸೌಲಭ್ಯಗಳಿಗೆ ಪರದಾಡುವಂತಾಗಿದೆ. ಜನರನ್ನು ಶೋಷಿಸುತ್ತಿರುವ ಈ ಅವೈಜ್ಞಾನಿಕ ತೆರಿಗೆಯ ಕ್ರಮವನ್ನು ಕೈಬಿಡಬೇಕುʼ ಎಂದು ಕೋರಲಾಗಿದೆ.</p>.<p>ಬಿಎಸ್ಪಿಯ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಭೀಮಶಪ್ಪ ಗಾಡದನ, ಜಿಲ್ಲಾ ಕಾರ್ಯದರ್ಶಿ ಅಶೋಕ ಗಿರಿಗಿರಿ, ಬ್ಲಾಕ್ ಘಟಕದ ಅಧ್ಯಕ್ಷ ಮಹದೇವಪ್ಪ ಚಪೆಟ್ಲಾ, ಪ್ರಧಾನ ಕಾರ್ಯದರ್ಶಿ ಪ್ರಕಾಶ ಬಂಟು, ಭೀಮು ಗಿರಿಗಿರಿ, ಜಾನ್ ಪೆರಿಯಾರ್, ಅಬ್ಬಸ್ ಖಾನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>