<p><strong>ಯಾದಗಿರಿ</strong>: ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಮುದ್ನಾಳ ಪೆಟ್ರೋಲ್ ಬಂಕ್ ಬಳಿ ತೈಲ ಬೆಲೆ ಏರಿಕೆ ಖಂಡಿಸಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.</p>.<p>ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅವಿನಾಶ್ ಜಗನ್ನಾಥ್ ಮಾತನಾಡಿ,ಕೋವಿಡ್ ಸಂದರ್ಭದಲ್ಲಿ ಜನಸಾಮಾನ್ಯರು ಜೀವನ ನಡೆಸುವುದೇ ಕಷ್ಟಕರವಾಗಿದೆ. ಆ ವೇಳೆ ಕೇಂದ್ರ ಸರ್ಕಾರವು ತೈಲ ಬೆಲೆ ಏರಿಕೆ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಗಗನಕ್ಕೇರಿದ ತೈಲಬೆಲೆ ಕಾರಣದಿಂದ ದಿನ ದಿನಬಳಕೆ ವಸ್ತುಗಳ ದರವೂ ಗಗನಕ್ಕೆ ಮುಟ್ಟಲಿದ್ದು, ಕೂಡಲೇ ಕೇಂದ್ರ ಸರ್ಕಾರವು ತೈಲ ಬೆಲೆಯ ಮೇಲಿನ ಸುಂಕವನ್ನು ಇಳಿಸಬೇಕು. ಆಗ ಮಾತ್ರ ಸಾಮಾನ್ಯ ವರ್ಗದ ಜನರಿಗೆ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದರು.</p>.<p>ವಿಧಾನ ಪರಿಷತ್ ಮಾಜಿ ಸದಸ್ಯಚೆನ್ನಾರಡ್ಡಿ ತುನ್ನೂರ, ಸೇವಾದಳ ಅಧ್ಯಕ್ಷ ಲಕ್ಷ್ಮಣ್ ರಾಥೋಡ್, ಮುಖಂಡರಾದ ವೆಂಕಟೇಶ್ ನಾಗುಂಡಿ, ವಿಶ್ವನಾಥ್ ಮಾಲಿಪಾಟೀಲ, ಕೃಷ್ಣಾ ದಾಸನಕೇರಿ, ಅಭಿಷೇಕ್ ದಾಸನಕೇರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಮುದ್ನಾಳ ಪೆಟ್ರೋಲ್ ಬಂಕ್ ಬಳಿ ತೈಲ ಬೆಲೆ ಏರಿಕೆ ಖಂಡಿಸಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.</p>.<p>ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅವಿನಾಶ್ ಜಗನ್ನಾಥ್ ಮಾತನಾಡಿ,ಕೋವಿಡ್ ಸಂದರ್ಭದಲ್ಲಿ ಜನಸಾಮಾನ್ಯರು ಜೀವನ ನಡೆಸುವುದೇ ಕಷ್ಟಕರವಾಗಿದೆ. ಆ ವೇಳೆ ಕೇಂದ್ರ ಸರ್ಕಾರವು ತೈಲ ಬೆಲೆ ಏರಿಕೆ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಗಗನಕ್ಕೇರಿದ ತೈಲಬೆಲೆ ಕಾರಣದಿಂದ ದಿನ ದಿನಬಳಕೆ ವಸ್ತುಗಳ ದರವೂ ಗಗನಕ್ಕೆ ಮುಟ್ಟಲಿದ್ದು, ಕೂಡಲೇ ಕೇಂದ್ರ ಸರ್ಕಾರವು ತೈಲ ಬೆಲೆಯ ಮೇಲಿನ ಸುಂಕವನ್ನು ಇಳಿಸಬೇಕು. ಆಗ ಮಾತ್ರ ಸಾಮಾನ್ಯ ವರ್ಗದ ಜನರಿಗೆ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದರು.</p>.<p>ವಿಧಾನ ಪರಿಷತ್ ಮಾಜಿ ಸದಸ್ಯಚೆನ್ನಾರಡ್ಡಿ ತುನ್ನೂರ, ಸೇವಾದಳ ಅಧ್ಯಕ್ಷ ಲಕ್ಷ್ಮಣ್ ರಾಥೋಡ್, ಮುಖಂಡರಾದ ವೆಂಕಟೇಶ್ ನಾಗುಂಡಿ, ವಿಶ್ವನಾಥ್ ಮಾಲಿಪಾಟೀಲ, ಕೃಷ್ಣಾ ದಾಸನಕೇರಿ, ಅಭಿಷೇಕ್ ದಾಸನಕೇರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>