<p><strong>ಸುರಪುರ</strong>: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳು ಮಂಗಳವಾರ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ವಿಭಾಗೀಯ ಪ್ರಮುಖ ಉಪೇಂದ್ರನಾಯಕ ಸುಬೇದಾರ ಮಾತನಾಡಿ, ‘ಗುಲಬರ್ಗಾ ವಿಶ್ವವಿದ್ಯಾಲಯ ಸರಿಯಾದ ಸಮಯಕ್ಕೆ ಪರೀಕ್ಷೆ ನಡೆಯುತ್ತಿಲ್ಲ. ಉದ್ದೇಶಪೂರ್ವಕವಾಗಿ ಅಂಕಗಳ ಬದಲಾವಣೆ, ಆವಕದಲ್ಲಿ ಕೊಟ್ಟ ಅರ್ಜಿಯ ನಿರ್ಲಕ್ಷ್ಯ, ಕುಂಟು ನೆಪ ಹೇಳಿ ಫಲಿತಾಂಶ ತಡೆ ಹಿಡಿಯುವುದು, ಘಟಿಕೋತ್ಸವ ಸರಿಯಾದ ಸಮಯಕ್ಕೆ ಮಾಡುತ್ತಿಲ್ಲ’ ಎಂದು ಆರೋಪಿಸಿದರು.</p>.<p>‘ಪದವಿ ಪರೀಕ್ಷಾ ಕೇಂದ್ರಗಳಿಗೆ ಅನರ್ಹ ಮೇಲ್ವಿಚಾರಕರನ್ನು ನೇಮಿಸುವುದು, ಹೊಸ ಪದವಿ ಕಾಲೇಜುಗಳ ಅನುಮತಿಯಲ್ಲಿ ಭ್ರಷ್ಟಾಚಾರ ಹೀಗೆ ವಿಶ್ವವಿದ್ಯಾಲಯ ಸಮಸ್ಯೆಗಳ ಸರಮಾಲೆಯನ್ನೇ ಹೊದ್ದು ನಿಂತಿದೆ. ರಾಜ್ಯಪಾಲರು ಈ ಬಗ್ಗೆ ಗಮನ ಹರಿಸಬೇಕು’ ಎಂದು ಮನವಿ ಮಾಡಿದರು.</p>.<p>ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.</p>.<p>ಹನುಮಂತ ಸಿಂಗೆ, ವಿನೋದಕುಮಾರ, ಮಾರುತಿ, ದ್ಯಾವಣ್ಣ, ಮಹೆಬೂಬ, ವಿಶ್ವನಾಥ, ಭಾರ್ಗವನಾಯಕ, ಪಿಡ್ಡಪ್ಪ, ಶ್ರೀನಿವಾಸ, ಮುಸ್ಕಾನ, ರಾಧಿಕಾ, ಕಾವ್ಯಾ, ಬಸಮ್ಮ, ಉಮಾಶ್ರೀ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ</strong>: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳು ಮಂಗಳವಾರ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ವಿಭಾಗೀಯ ಪ್ರಮುಖ ಉಪೇಂದ್ರನಾಯಕ ಸುಬೇದಾರ ಮಾತನಾಡಿ, ‘ಗುಲಬರ್ಗಾ ವಿಶ್ವವಿದ್ಯಾಲಯ ಸರಿಯಾದ ಸಮಯಕ್ಕೆ ಪರೀಕ್ಷೆ ನಡೆಯುತ್ತಿಲ್ಲ. ಉದ್ದೇಶಪೂರ್ವಕವಾಗಿ ಅಂಕಗಳ ಬದಲಾವಣೆ, ಆವಕದಲ್ಲಿ ಕೊಟ್ಟ ಅರ್ಜಿಯ ನಿರ್ಲಕ್ಷ್ಯ, ಕುಂಟು ನೆಪ ಹೇಳಿ ಫಲಿತಾಂಶ ತಡೆ ಹಿಡಿಯುವುದು, ಘಟಿಕೋತ್ಸವ ಸರಿಯಾದ ಸಮಯಕ್ಕೆ ಮಾಡುತ್ತಿಲ್ಲ’ ಎಂದು ಆರೋಪಿಸಿದರು.</p>.<p>‘ಪದವಿ ಪರೀಕ್ಷಾ ಕೇಂದ್ರಗಳಿಗೆ ಅನರ್ಹ ಮೇಲ್ವಿಚಾರಕರನ್ನು ನೇಮಿಸುವುದು, ಹೊಸ ಪದವಿ ಕಾಲೇಜುಗಳ ಅನುಮತಿಯಲ್ಲಿ ಭ್ರಷ್ಟಾಚಾರ ಹೀಗೆ ವಿಶ್ವವಿದ್ಯಾಲಯ ಸಮಸ್ಯೆಗಳ ಸರಮಾಲೆಯನ್ನೇ ಹೊದ್ದು ನಿಂತಿದೆ. ರಾಜ್ಯಪಾಲರು ಈ ಬಗ್ಗೆ ಗಮನ ಹರಿಸಬೇಕು’ ಎಂದು ಮನವಿ ಮಾಡಿದರು.</p>.<p>ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.</p>.<p>ಹನುಮಂತ ಸಿಂಗೆ, ವಿನೋದಕುಮಾರ, ಮಾರುತಿ, ದ್ಯಾವಣ್ಣ, ಮಹೆಬೂಬ, ವಿಶ್ವನಾಥ, ಭಾರ್ಗವನಾಯಕ, ಪಿಡ್ಡಪ್ಪ, ಶ್ರೀನಿವಾಸ, ಮುಸ್ಕಾನ, ರಾಧಿಕಾ, ಕಾವ್ಯಾ, ಬಸಮ್ಮ, ಉಮಾಶ್ರೀ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>