<p>ಯಾದಗಿರಿ: ತಾಲ್ಲೂಕಿನ ಕಡೇಚೂರು– ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಕಂಪೆನಿಗಳಲ್ಲಿ ಸ್ಥಳೀಯರಿಗೆ ಕೆಲಸಕ್ಕೆ ತೆಗೆದುಕೊಳ್ಳದೆ ಹೊರ ಜಿಲ್ಲೆ ಮತ್ತು ಅನ್ಯ ರಾಜ್ಯಗಳ ಕಾರ್ಮಿಕರಿಗೆ ಕೆಲಸ ಕೊಟ್ಟು ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸೋಮವಾರ ಸಂತ್ರಸ್ತರು, ಮುಖಂಡರು ಪ್ರತಿಭಟನೆ ನಡೆಸಿದರು.</p>.<p>‘ಕೈಗಾರಿಕಾ ಪ್ರದೇಶದಲ್ಲಿ ಕೆಲ ಕಂಪೆನಿಗಳು ಆರಂಭವಾಗಿವೆ. ಅವುಗಳಲ್ಲಿ ಈ ಭಾಗದ ಬಡವರು, ಕೂಲಿ ಕಾರ್ಮಿಕರಿಗೆ ಕೆಲಸ ಕೊಟ್ಟರೆ ಅಭಿವೃದ್ಧಿ ಸಾಧ್ಯವಾಗುತ್ತದೆ. ಭೂಮಿ ಕಳೆದುಕೊಂಡ ರೈತರ ಕುಟುಂಬಕ್ಕೆ ನೌಕರಿ ಕೊಡದೆ ಅನ್ಯಾಯ ಮಾಡುತ್ತಿರುವುದನ್ನು ಸರಿಪಡಿಸಿ ನ್ಯಾಯ ಒದಗಿಸಬೇಕು’ ಎಂದು ಸೈದಾಪುರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಆಂಜನೇಯ ಕಟ್ಟಿಮನಿ ಹೇಳಿದರು.</p>.<p>ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಯೊಬ್ಬರಿಗೆ ಮನವಿ ಪತ್ರ ಸಲ್ಲಿಕೆ ಮಾಡಿದರು.</p>.<p>ಈ ವೇಳೆ ಕೆಪಿಸಿಸಿ ಎಸ್ಟಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಭೀಮರಾಯ ಠಾಣಗುಂದಿ, ಮುಖಂಡರಾದ ಹಣಮಂತ ದೊಡ್ಡಮನಿ, ತಿಮ್ಮಣ್ಣ ಬೆಳಗುಂದಿ, ವೀರೇಶ ಸಜ್ಜನ್, ಪ್ರಭುಲಿಂಗ ಗೊಂದೆಡಿಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಾದಗಿರಿ: ತಾಲ್ಲೂಕಿನ ಕಡೇಚೂರು– ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಕಂಪೆನಿಗಳಲ್ಲಿ ಸ್ಥಳೀಯರಿಗೆ ಕೆಲಸಕ್ಕೆ ತೆಗೆದುಕೊಳ್ಳದೆ ಹೊರ ಜಿಲ್ಲೆ ಮತ್ತು ಅನ್ಯ ರಾಜ್ಯಗಳ ಕಾರ್ಮಿಕರಿಗೆ ಕೆಲಸ ಕೊಟ್ಟು ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸೋಮವಾರ ಸಂತ್ರಸ್ತರು, ಮುಖಂಡರು ಪ್ರತಿಭಟನೆ ನಡೆಸಿದರು.</p>.<p>‘ಕೈಗಾರಿಕಾ ಪ್ರದೇಶದಲ್ಲಿ ಕೆಲ ಕಂಪೆನಿಗಳು ಆರಂಭವಾಗಿವೆ. ಅವುಗಳಲ್ಲಿ ಈ ಭಾಗದ ಬಡವರು, ಕೂಲಿ ಕಾರ್ಮಿಕರಿಗೆ ಕೆಲಸ ಕೊಟ್ಟರೆ ಅಭಿವೃದ್ಧಿ ಸಾಧ್ಯವಾಗುತ್ತದೆ. ಭೂಮಿ ಕಳೆದುಕೊಂಡ ರೈತರ ಕುಟುಂಬಕ್ಕೆ ನೌಕರಿ ಕೊಡದೆ ಅನ್ಯಾಯ ಮಾಡುತ್ತಿರುವುದನ್ನು ಸರಿಪಡಿಸಿ ನ್ಯಾಯ ಒದಗಿಸಬೇಕು’ ಎಂದು ಸೈದಾಪುರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಆಂಜನೇಯ ಕಟ್ಟಿಮನಿ ಹೇಳಿದರು.</p>.<p>ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಯೊಬ್ಬರಿಗೆ ಮನವಿ ಪತ್ರ ಸಲ್ಲಿಕೆ ಮಾಡಿದರು.</p>.<p>ಈ ವೇಳೆ ಕೆಪಿಸಿಸಿ ಎಸ್ಟಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಭೀಮರಾಯ ಠಾಣಗುಂದಿ, ಮುಖಂಡರಾದ ಹಣಮಂತ ದೊಡ್ಡಮನಿ, ತಿಮ್ಮಣ್ಣ ಬೆಳಗುಂದಿ, ವೀರೇಶ ಸಜ್ಜನ್, ಪ್ರಭುಲಿಂಗ ಗೊಂದೆಡಿಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>