<p><strong>ಸುರಪುರ:</strong> ತಾಲ್ಲೂಕಿನ ವಾಗಣಗೇರಾ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಿ ಶೋಷಿತ ಪರ ಹೋರಾಟದ ಸಂಘಟನೆಗಳ ಒಕ್ಕೂಟದ ಮುಖಂಡರು ಶುಕ್ರವಾರ ಗಾಂಧಿವೃತ್ತದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಒಕ್ಕೂಟದ ರಾಜ್ಯ ಸಮಿತಿ ಅಧ್ಯಕ್ಷ ವೆಂಕೋಬ ದೊರೆ ಮಾತನಾಡಿ, ‘ಪ್ರಧಾನ ಮಂತ್ರಿ ಅವಾಜ್ ಯೋಜನೆಯಡಿ ಆನ್ಲೈನ್ ಮೂಲಕ ಮನೆಗಳನ್ನು ಮಂಜೂರು ಮಾಡುವ ಅವಕಾಶ ಇದೆ. ಆದರೆ ಪಂಚಾಯಿತಿ ಅಧಿಕಾರಿ ಹಣದ ಬೇಡಿಕೆ ಇಟ್ಟು ಬಡವರಿಗೆ ಅನ್ಯಾಯ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ನರೇಗಾ ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗುತ್ತಿಲ್ಲ. ನಿಜವಾದ ಕೂಲಿ ಕಾರ್ಮಿಕರಿಗೆ ಜಾಬ್ ಕಾರ್ಡ್ ವಿತರಣೆ ಆಗುತ್ತಿಲ್ಲ ಗುಳೆ ಸಮಸ್ಯೆ ಹೆಚ್ಚಾಗಿದೆ. ಬೋಗಸ್ ಬಿಲ್ ಎತ್ತಲಾಗುತ್ತಿದೆ’ ಎಂದು ದೂರಿದರು.</p>.<p>ಉಸ್ತಾದ ವಜಾಹತ್ ಹುಸೇನ್ ಮಾತನಾಡಿ, ‘ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಸಂಬಂಧಿಸಿದ ಅಧಿಕಾರಿಗಳು ಸುಮ್ಮನೆ ಕುಳಿತಿದ್ದಾರೆ. ಇದರಿಂದ ಯೋಜನೆಗಳು ಜನರಿಗೆ ತಲುಪುತ್ತಿಲ್ಲ. ಪರಿಸ್ಥಿತಿ ಸರಿಪಡಿಸದಿದ್ದರೆ ಸುರಪುರ ಬಂದ್ ಮಾಡಿ ಪ್ರತಿಭಟಿಸಲಾಗುವುದು’ ಎಂದು ಎಚ್ಚರಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಅಧಿಕಾರಿ ಎನ್. ವಿ. ಜೋಷಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.</p>.<p>ತಾಲ್ಲೂಕು ಸಮಿತಿ ಅಧ್ಯಕ್ಷ ನಾಗರಾಜ ದರಬಾರಿ, ವೆಂಕಟೇಶ ಡಿ.ಸಿ., ಬಾಬು ಅರಿಸಿಣಗಿ, ದೇವಪ್ಪ ರತ್ತಾಳ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ:</strong> ತಾಲ್ಲೂಕಿನ ವಾಗಣಗೇರಾ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಿ ಶೋಷಿತ ಪರ ಹೋರಾಟದ ಸಂಘಟನೆಗಳ ಒಕ್ಕೂಟದ ಮುಖಂಡರು ಶುಕ್ರವಾರ ಗಾಂಧಿವೃತ್ತದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಒಕ್ಕೂಟದ ರಾಜ್ಯ ಸಮಿತಿ ಅಧ್ಯಕ್ಷ ವೆಂಕೋಬ ದೊರೆ ಮಾತನಾಡಿ, ‘ಪ್ರಧಾನ ಮಂತ್ರಿ ಅವಾಜ್ ಯೋಜನೆಯಡಿ ಆನ್ಲೈನ್ ಮೂಲಕ ಮನೆಗಳನ್ನು ಮಂಜೂರು ಮಾಡುವ ಅವಕಾಶ ಇದೆ. ಆದರೆ ಪಂಚಾಯಿತಿ ಅಧಿಕಾರಿ ಹಣದ ಬೇಡಿಕೆ ಇಟ್ಟು ಬಡವರಿಗೆ ಅನ್ಯಾಯ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ನರೇಗಾ ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗುತ್ತಿಲ್ಲ. ನಿಜವಾದ ಕೂಲಿ ಕಾರ್ಮಿಕರಿಗೆ ಜಾಬ್ ಕಾರ್ಡ್ ವಿತರಣೆ ಆಗುತ್ತಿಲ್ಲ ಗುಳೆ ಸಮಸ್ಯೆ ಹೆಚ್ಚಾಗಿದೆ. ಬೋಗಸ್ ಬಿಲ್ ಎತ್ತಲಾಗುತ್ತಿದೆ’ ಎಂದು ದೂರಿದರು.</p>.<p>ಉಸ್ತಾದ ವಜಾಹತ್ ಹುಸೇನ್ ಮಾತನಾಡಿ, ‘ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಸಂಬಂಧಿಸಿದ ಅಧಿಕಾರಿಗಳು ಸುಮ್ಮನೆ ಕುಳಿತಿದ್ದಾರೆ. ಇದರಿಂದ ಯೋಜನೆಗಳು ಜನರಿಗೆ ತಲುಪುತ್ತಿಲ್ಲ. ಪರಿಸ್ಥಿತಿ ಸರಿಪಡಿಸದಿದ್ದರೆ ಸುರಪುರ ಬಂದ್ ಮಾಡಿ ಪ್ರತಿಭಟಿಸಲಾಗುವುದು’ ಎಂದು ಎಚ್ಚರಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಅಧಿಕಾರಿ ಎನ್. ವಿ. ಜೋಷಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.</p>.<p>ತಾಲ್ಲೂಕು ಸಮಿತಿ ಅಧ್ಯಕ್ಷ ನಾಗರಾಜ ದರಬಾರಿ, ವೆಂಕಟೇಶ ಡಿ.ಸಿ., ಬಾಬು ಅರಿಸಿಣಗಿ, ದೇವಪ್ಪ ರತ್ತಾಳ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>