ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ವೆಂಕೋಬ ದೊರೆ ಮಾತನಾಡಿ, ‘ಉಪ ಕಾಲುವೆಗಳು ಹಾಳಾಗಿ ಹೋಗಿದ್ದು, ರೈತರ ಜಮೀನುಗಳಿಗೆ ನೀರು ತಲುಪುತ್ತಿಲ್ಲ. ಕಾಲುವೆ ರಿಪೇರಿ ಮಾಡಲು ರಿ–ಮಾಡಲಿಂಗ್ ಅನುದಾನ ಬಂದಿದೆ. ಆದರೂ ಅಧಿಕಾರಿಗಳು ಆಸಕ್ತಿ ತೋರುತ್ತಿಲ್ಲ. ರಾಜಕೀಯ ಒತ್ತಡಕ್ಕೆ ಮಣಿದು ಅವಶ್ಯಕತೆ ಇರುವ ಸ್ಥಳಗಳನ್ನು ಬಿಟ್ಟು, ತಮ್ಮ ಮನಸ್ಸಿಗೆ ಬಂದಂತೆ ಬೇರೆ ಕಡೆಗಳಲ್ಲಿ ರಿಪೇರಿ ಮಾಡಲಾಗುತ್ತಿದೆ. ಈ ಕುರಿತು ಲೋಕಾಯುಕ್ತರಿಂದ ತನಿಖೆ ಯಾಗಬೇಕು’ ಎಂದು ಒತ್ತಾಯಿಸಿದರು.