<p><strong>ಹುಣಸಗಿ</strong>: ತಾಲ್ಲೂಕಿನ ವಜ್ಜಲ ಗ್ರಾಮದಲ್ಲಿ ಹಲವಾರು ದಿನಗಳಿಂದ ಕಲುಷಿತ ನೀರು ಸರಬರಾಜು ಆಗುತ್ತಿದೆ. ಆದರೂ ಅಧಿಕಾರಿಗಳು ಸಮಸ್ಯೆ ಪರಿಹಾರಕ್ಕೆ ಮುಂದಾಗಿಲ್ಲ ಎಂದು ಆರೋಪಿಸಿ ಗ್ರಾಮದ ಯುವಕರು ಗ್ರಾ.ಪಂ.ಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.</p>.<p>ಈ ಕುರಿತಂತೆ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.</p>.<p>ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಸಿದ್ದನಗೌಡ ಗುರಡ್ಡಿ ಮಾತನಾಡಿ, ಗ್ರಾಮಕ್ಕೆ ಸರಬರಾಜು ಆಗುತ್ತಿರುವ ನೀರಿಗೆ ಹಳ್ಳದ ಕಲುಷಿತ ನೀರು ಸೇರ್ಪಡೆಯಾಗುತ್ತಿದೆ. ಇದರಿಂದಾಗಿ ಮಲೀನ ನೀರು ಗ್ರಾಮಕ್ಕೆ ಸರಬರಾಜು ಆಗುತ್ತಿದೆ. ಅಲ್ಲದೇ ಅಲ್ಲಲ್ಲಿ ಚರಂಡಿಯಲ್ಲಿ ಮುಖ್ಯ ಪೈಪ್ ಒಡೆದಿದ್ದು, ಆ ನೀರು ನಳಕ್ಕೆ ಬರುತ್ತಿದೆ ಎಂದು ಆರೋಪಿಸಿ ಬಕೆಟ್ ನೀರಿನೊಂದಿಗೆ ಗ್ರಾಪಂಗೆ ಆಗಮಿಸಿದ್ದರು.</p>.<p>‘ಗ್ರಾಮದ ಕೊಂಡಮ್ಮ ದೇವಸ್ಥಾನದ ಕಾಲೊನಿಯಲ್ಲಿ ಕಳೆದ ಎರಡು ವಾರಗಳಿಂದ ನೀರು ಸರಬರಾಜು ಆಗುತ್ತಿಲ್ಲ. ಇದರಿಂದಾಗಿ ಸಾಕಷ್ಟು ತೊಂದರೆಯಾಗಿದೆ’ ಎಂದು ಅಲ್ಲಿನ ನಿವಾಸಿಗಳು ಆರೋಪಿಸಿದರು.</p>.<p>ಜಿಲ್ಲಾಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವವರೆಗೂ ಪ್ರತಿಭಟನೆ ಮುಂದುವರಿಸುವದಾಗಿ ಹೇಳಿದರು. ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸುವುದಾಗಿ ಅಭಿವೃದ್ಧಿ ಅಧಿಕಾರಿ ಶಿವಕುಮಾರ ಚೌದ್ರಿ ಮನವಿ ಮಾಡಿದರು. ಆದರೂ ಪ್ರತಿಭಟನೆ ಮುಂದುವರಿದಿತ್ತು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸಣ್ಣನಾಯಕ ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಎಇಇ ಎಚ್.ಡಿ.ಪಾಟೀಲ ಸ್ಥಳಕ್ಕೆ ಆಗಮಿಸಿ ಸಮಸ್ಯೆ ಆಲಿಸಿದರು.<br /><br />ಹಳ್ಳದ ನೀರು ಸೇರದಂತೆ ತಡೆಗೋಡೆ ನಿರ್ಮಿಸುವುದು, ಹಾಗೂ ನೀರು ಕೆಡದಂತೆ ರಕ್ಷಣಾ ಕವಚ ಹಾಕುವುದು, ಕೊಂಡಮ್ಮ ದೇವಸ್ಥಾನದ ಕಾಲೊನಿಗೆ ನೀರು ಸರಬರಾಜು ಮಾಡಲು ಕೊಳವೆ ಬಾವಿಗೆ ಮೋಟರ್ ಅಳವಡಿಸುವ ಕುರಿತಂತೆ ಲಿಖಿತ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಡಲಾಯಿತು.</p>.<p>ಹುಣಸಗಿ ಪಿಎಸ್ಐ ಭಾಗಣ್ಣ ಸಿಬ್ಬಂದಿಯೊಂದಿಗೆ ಸ್ಥಳಕ್ಕಾಗಮಿಸಿದ್ದರು. ಪ್ರತಿಭಟನೆಯಲ್ಲಿ ಪ್ರಭುಗೌಡ ಶ್ರೀಗಿರಿ, ದೊಡ್ಡಪ್ಪ ಕಕ್ಕೇರಿ, ಬಾಪುಗೌಡ ಗುರಡ್ಡಿ, ಬಾಬಣ್ಣ ಸುರಪುರ, ಸಾಬಣ್ಣ ದೊರಿ, ಬಸನಗೌಡ ಚಿಂಚೋಳಿ, ಮೌನೇಶ ಅಂಚೆಸುಗೂರು, ತಿಪ್ಪಣ್ಣ ಮರಾಠಿ, ಅನೀಲ ಮಡಿವಾಳರ, ಬೀರಪ್ಪ ಮೂಲಿಮನಿ ಸೇರಿದಂತೆ ಇತರರು ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸಗಿ</strong>: ತಾಲ್ಲೂಕಿನ ವಜ್ಜಲ ಗ್ರಾಮದಲ್ಲಿ ಹಲವಾರು ದಿನಗಳಿಂದ ಕಲುಷಿತ ನೀರು ಸರಬರಾಜು ಆಗುತ್ತಿದೆ. ಆದರೂ ಅಧಿಕಾರಿಗಳು ಸಮಸ್ಯೆ ಪರಿಹಾರಕ್ಕೆ ಮುಂದಾಗಿಲ್ಲ ಎಂದು ಆರೋಪಿಸಿ ಗ್ರಾಮದ ಯುವಕರು ಗ್ರಾ.ಪಂ.ಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.</p>.<p>ಈ ಕುರಿತಂತೆ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.</p>.<p>ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಸಿದ್ದನಗೌಡ ಗುರಡ್ಡಿ ಮಾತನಾಡಿ, ಗ್ರಾಮಕ್ಕೆ ಸರಬರಾಜು ಆಗುತ್ತಿರುವ ನೀರಿಗೆ ಹಳ್ಳದ ಕಲುಷಿತ ನೀರು ಸೇರ್ಪಡೆಯಾಗುತ್ತಿದೆ. ಇದರಿಂದಾಗಿ ಮಲೀನ ನೀರು ಗ್ರಾಮಕ್ಕೆ ಸರಬರಾಜು ಆಗುತ್ತಿದೆ. ಅಲ್ಲದೇ ಅಲ್ಲಲ್ಲಿ ಚರಂಡಿಯಲ್ಲಿ ಮುಖ್ಯ ಪೈಪ್ ಒಡೆದಿದ್ದು, ಆ ನೀರು ನಳಕ್ಕೆ ಬರುತ್ತಿದೆ ಎಂದು ಆರೋಪಿಸಿ ಬಕೆಟ್ ನೀರಿನೊಂದಿಗೆ ಗ್ರಾಪಂಗೆ ಆಗಮಿಸಿದ್ದರು.</p>.<p>‘ಗ್ರಾಮದ ಕೊಂಡಮ್ಮ ದೇವಸ್ಥಾನದ ಕಾಲೊನಿಯಲ್ಲಿ ಕಳೆದ ಎರಡು ವಾರಗಳಿಂದ ನೀರು ಸರಬರಾಜು ಆಗುತ್ತಿಲ್ಲ. ಇದರಿಂದಾಗಿ ಸಾಕಷ್ಟು ತೊಂದರೆಯಾಗಿದೆ’ ಎಂದು ಅಲ್ಲಿನ ನಿವಾಸಿಗಳು ಆರೋಪಿಸಿದರು.</p>.<p>ಜಿಲ್ಲಾಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವವರೆಗೂ ಪ್ರತಿಭಟನೆ ಮುಂದುವರಿಸುವದಾಗಿ ಹೇಳಿದರು. ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸುವುದಾಗಿ ಅಭಿವೃದ್ಧಿ ಅಧಿಕಾರಿ ಶಿವಕುಮಾರ ಚೌದ್ರಿ ಮನವಿ ಮಾಡಿದರು. ಆದರೂ ಪ್ರತಿಭಟನೆ ಮುಂದುವರಿದಿತ್ತು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸಣ್ಣನಾಯಕ ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಎಇಇ ಎಚ್.ಡಿ.ಪಾಟೀಲ ಸ್ಥಳಕ್ಕೆ ಆಗಮಿಸಿ ಸಮಸ್ಯೆ ಆಲಿಸಿದರು.<br /><br />ಹಳ್ಳದ ನೀರು ಸೇರದಂತೆ ತಡೆಗೋಡೆ ನಿರ್ಮಿಸುವುದು, ಹಾಗೂ ನೀರು ಕೆಡದಂತೆ ರಕ್ಷಣಾ ಕವಚ ಹಾಕುವುದು, ಕೊಂಡಮ್ಮ ದೇವಸ್ಥಾನದ ಕಾಲೊನಿಗೆ ನೀರು ಸರಬರಾಜು ಮಾಡಲು ಕೊಳವೆ ಬಾವಿಗೆ ಮೋಟರ್ ಅಳವಡಿಸುವ ಕುರಿತಂತೆ ಲಿಖಿತ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಡಲಾಯಿತು.</p>.<p>ಹುಣಸಗಿ ಪಿಎಸ್ಐ ಭಾಗಣ್ಣ ಸಿಬ್ಬಂದಿಯೊಂದಿಗೆ ಸ್ಥಳಕ್ಕಾಗಮಿಸಿದ್ದರು. ಪ್ರತಿಭಟನೆಯಲ್ಲಿ ಪ್ರಭುಗೌಡ ಶ್ರೀಗಿರಿ, ದೊಡ್ಡಪ್ಪ ಕಕ್ಕೇರಿ, ಬಾಪುಗೌಡ ಗುರಡ್ಡಿ, ಬಾಬಣ್ಣ ಸುರಪುರ, ಸಾಬಣ್ಣ ದೊರಿ, ಬಸನಗೌಡ ಚಿಂಚೋಳಿ, ಮೌನೇಶ ಅಂಚೆಸುಗೂರು, ತಿಪ್ಪಣ್ಣ ಮರಾಠಿ, ಅನೀಲ ಮಡಿವಾಳರ, ಬೀರಪ್ಪ ಮೂಲಿಮನಿ ಸೇರಿದಂತೆ ಇತರರು ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>